<p><strong>ಬೆಂಗಳೂರು:</strong> ‘ಅನುವಾದಗಳ ಮೂಲಕ ರಾಷ್ಟ್ರಕವಿ ಕುವೆಂಪು ಅವರು ಜಗತ್ತಿಗೆ ಹತ್ತಿರವಾದರು. ಅವರ ಕೃತಿಗಳಲ್ಲಿರುವ ಬಹುತ್ವದ ಅಂಶವೇ ಅದಕ್ಕೆ ಕಾರಣ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ಧರಾಮಯ್ಯ ಹೇಳಿದರು.</p>.<p>ಅಖಿಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆ ಆಯೋಜಿಸಿದ್ದ ಡಾ.ದೇಜಗೌ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>‘ಇತರ ರಾಜ್ಯಗಳ ನಾಡಗೀತೆಗಳಲ್ಲಿ ಇಡೀ ರಾಷ್ಟ್ರವನ್ನು ಒಳಗೊಳ್ಳುವಂತಹ ಅಂಶಗಳು ಇಲ್ಲ. ಆದರೆ ಕುವೆಂಪು ಅವರು ಬರೆದ ಕವಿತೆ ನಮ್ಮ ರಾಜ್ಯದ ಆಚೆಗೂ ವಿಸ್ತರಿಸಿದೆ. ಅಖಂಡ ಭಾರತದ ಕಲ್ಪನೆ ಅದರಲ್ಲಿದೆ’ ಎಂದು ಹೇಳಿದರು.</p>.<p>‘ವಿಶ್ವವಿದ್ಯಾಲಯಗಳಲ್ಲಿ ಇತ್ತೀಚೆಗೆ ಜಾನಪದ ಅಧ್ಯಯನ ಕಡಿಮೆಯಾಗಿದೆ. ಕನ್ನಡ ವಿಭಾಗಗಳು ಇನ್ನೂ ಹೆಚ್ಚಿನ ಆಸಕ್ತಿಯಿಂದ ಕೆಲಸ ಮಾಡಬೇಕು’ ಎಂದರು.</p>.<p>ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಪದ್ಮಾಶೇಖರ್, ‘ದೇಜಗೌ ಅವರನ್ನು ಸರ್ಕಾರ ಮರೆತಿದೆ. ಅವರ ಜನ್ಮಶತಮಾನೋತ್ಸವವನ್ನು ಸರ್ಕಾರವೇ ಮಾಡಬೇಕಿತ್ತು. ಈಗಲಾದರೂ ಎಚ್ಚೆತ್ತುಕೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>‘ಅವರನ್ನು ಕುರಿತಂತೆ 9 ಗ್ರಂಥಗಳು ಪ್ರಕಟಗೊಂಡಿವೆ. ಐದು ಪಿಎಚ್.ಡಿ ಪ್ರಬಂಧಗಳನ್ನು ರಚಿಸಲಾಗಿದೆ. ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ಕೊಡಿಸುವುದಕ್ಕಾಗಿ ಸಾಕಷ್ಟು ಹೋರಾಟ ನಡೆಸಿದ್ದಾರೆ’ ಎಂದು ತಮ್ಮ ಗುರುಗಳನ್ನು ನೆನೆದರು.</p>.<p>ಡಾ.ಕೆ. ಸತ್ಯನಾರಾಯಣ (ಕಥೆಗಾರ), ರಾಘವೇಂದ್ರ ಪುರಾಣಿಕ್ (ಲೆಕ್ಕ ಪರಿಶೋಧಕ), ಗೋವಿಂದಳ್ಳಿ ಕೃಷ್ಣೇಗೌಡ (ಸಮಾಜ ಸೇವಕ) ಅವರಿಗೆ ವಿಶ್ವಚೇತನ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಅನುವಾದಗಳ ಮೂಲಕ ರಾಷ್ಟ್ರಕವಿ ಕುವೆಂಪು ಅವರು ಜಗತ್ತಿಗೆ ಹತ್ತಿರವಾದರು. ಅವರ ಕೃತಿಗಳಲ್ಲಿರುವ ಬಹುತ್ವದ ಅಂಶವೇ ಅದಕ್ಕೆ ಕಾರಣ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ಧರಾಮಯ್ಯ ಹೇಳಿದರು.</p>.<p>ಅಖಿಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆ ಆಯೋಜಿಸಿದ್ದ ಡಾ.ದೇಜಗೌ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>‘ಇತರ ರಾಜ್ಯಗಳ ನಾಡಗೀತೆಗಳಲ್ಲಿ ಇಡೀ ರಾಷ್ಟ್ರವನ್ನು ಒಳಗೊಳ್ಳುವಂತಹ ಅಂಶಗಳು ಇಲ್ಲ. ಆದರೆ ಕುವೆಂಪು ಅವರು ಬರೆದ ಕವಿತೆ ನಮ್ಮ ರಾಜ್ಯದ ಆಚೆಗೂ ವಿಸ್ತರಿಸಿದೆ. ಅಖಂಡ ಭಾರತದ ಕಲ್ಪನೆ ಅದರಲ್ಲಿದೆ’ ಎಂದು ಹೇಳಿದರು.</p>.<p>‘ವಿಶ್ವವಿದ್ಯಾಲಯಗಳಲ್ಲಿ ಇತ್ತೀಚೆಗೆ ಜಾನಪದ ಅಧ್ಯಯನ ಕಡಿಮೆಯಾಗಿದೆ. ಕನ್ನಡ ವಿಭಾಗಗಳು ಇನ್ನೂ ಹೆಚ್ಚಿನ ಆಸಕ್ತಿಯಿಂದ ಕೆಲಸ ಮಾಡಬೇಕು’ ಎಂದರು.</p>.<p>ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಪದ್ಮಾಶೇಖರ್, ‘ದೇಜಗೌ ಅವರನ್ನು ಸರ್ಕಾರ ಮರೆತಿದೆ. ಅವರ ಜನ್ಮಶತಮಾನೋತ್ಸವವನ್ನು ಸರ್ಕಾರವೇ ಮಾಡಬೇಕಿತ್ತು. ಈಗಲಾದರೂ ಎಚ್ಚೆತ್ತುಕೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>‘ಅವರನ್ನು ಕುರಿತಂತೆ 9 ಗ್ರಂಥಗಳು ಪ್ರಕಟಗೊಂಡಿವೆ. ಐದು ಪಿಎಚ್.ಡಿ ಪ್ರಬಂಧಗಳನ್ನು ರಚಿಸಲಾಗಿದೆ. ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ಕೊಡಿಸುವುದಕ್ಕಾಗಿ ಸಾಕಷ್ಟು ಹೋರಾಟ ನಡೆಸಿದ್ದಾರೆ’ ಎಂದು ತಮ್ಮ ಗುರುಗಳನ್ನು ನೆನೆದರು.</p>.<p>ಡಾ.ಕೆ. ಸತ್ಯನಾರಾಯಣ (ಕಥೆಗಾರ), ರಾಘವೇಂದ್ರ ಪುರಾಣಿಕ್ (ಲೆಕ್ಕ ಪರಿಶೋಧಕ), ಗೋವಿಂದಳ್ಳಿ ಕೃಷ್ಣೇಗೌಡ (ಸಮಾಜ ಸೇವಕ) ಅವರಿಗೆ ವಿಶ್ವಚೇತನ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>