<p><strong>ಬೆಂಗಳೂರು:</strong> ‘ದೇಶದಲ್ಲಿ ಜಾತಿ ವ್ಯವಸ್ಥೆ ಜೀವಂತವಾಗಿರುವಾಗ ಭಾರತ ಪ್ರಕಾಶಿಸುತ್ತಿದೆ ಎಂದು ಹೇಳುವುದು ಹಾಸ್ಯಾಸ್ಪದ’ ಎಂದು ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ ಅಭಿಪ್ರಾಯಪಟ್ಟರು.</p>.<p>ಕರ್ನಾಟಕ ರಾಜ್ಯ ಸರ್ಕಾರಿ ಶಿಕ್ಷಕರಸಂಘಗಳ ಒಕ್ಕೂಟ ನಗರದಲ್ಲಿ ಬುಧವಾರ ಆಯೋಜಿಸಿದ್ದ ‘ಸಾವಿತ್ರಿ<br />ಬಾಯಿ ಫುಲೆ ಅವರ ಸಾಧನೆ ಹೆಜ್ಜೆಗಳು’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ವೇದಗಳ ಕಾಲದಿಂದಲೂದಲಿತರು ಮತ್ತು ಮಹಿಳೆಯರನ್ನು ಶೋಷಿಸಿದ ಭಾರತವನ್ನು ಭವ್ಯ ಪರಂಪರೆಯ ನಾಡು ಎಂದು ಹೇಗೆ ಕರೆಯುವುದು.ನಮ್ಮ ಚರಿತ್ರೆ ಸುಳ್ಳಿನ ಕಂತೆ. ಶಿಕ್ಷಕರು ಇತಿಹಾಸ ಬೋಧಿಸುವಾಗ ಚರಿತ್ರೆಯ ಪೊಳ್ಳುಗಳನ್ನು ವಿದ್ಯಾರ್ಥಿಗಳ ಎದುರು ಬಿಚ್ಚಿಡಬೇಕು’ ಎಂದು ಹೇಳಿದರು.</p>.<p>‘ಆಮ್ ಆದ್ಮಿ ಪಕ್ಷ ಅಸ್ತಿತ್ವದಲ್ಲಿರುವ ದೆಹಲಿಯಲ್ಲಿಶಿಕ್ಷಣ ವ್ಯವಸ್ಥೆ ತುಂಬಾ ಸುಧಾರಿಸಿದೆ. ಇದನ್ನು ಇತರೆ ರಾಜ್ಯಗಳು ಅನುಸರಿಸಬೇಕು. ನಾವು ಅಳವಡಿಸಿಕೊಳ್ಳಬೇಕು. ರಾಜ್ಯದಗ್ರಾಮೀಣ ಭಾಗದಲ್ಲಿ<br />ಸರ್ಕಾರಿ ಶಾಲೆಗಳು ಸಮಸ್ಯೆಗಳಿಂದ ನರಳುತ್ತಿವೆ. ವಿಷಯವನ್ನು ಸರ್ಕಾರದ ಗಮನಕ್ಕೆ ತರಲಾಗುವುದು’ ಎಂದರು.</p>.<p>ರಾಜ್ಯ ಸರ್ಕಾರಿ ಶಿಕ್ಷಕರ ಸಂಘಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ವಿ.ಟಿ.ವೆಂಕಟೇಶಯ್ಯ ಮಾತನಾಡಿ,‘ಭಾರತದ ಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಬಗ್ಗೆ ಮಾಹಿತಿ ಕಲೆ ಹಾಕಿ ಪುಸ್ತಕ ಪ್ರಕಟಿಸಿದ್ದೇವೆ. ರಾಜ್ಯದಲ್ಲಿರುವ ಎಲ್ಲಾ ಶಾಲೆಗಳು ಈ ಪುಸ್ತಕವನ್ನು ಖರೀದಿಸಲು ಮುಂದಾಗಿವೆ’ ಎಂದರು.</p>.<p>‘ಗ್ರಾಮೀಣ ಭಾಗದಲ್ಲಿ ಶಿಕ್ಷಕರ ಸಮಸ್ಯೆ ಹೆಚ್ಚಿದೆ’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ದೇಶದಲ್ಲಿ ಜಾತಿ ವ್ಯವಸ್ಥೆ ಜೀವಂತವಾಗಿರುವಾಗ ಭಾರತ ಪ್ರಕಾಶಿಸುತ್ತಿದೆ ಎಂದು ಹೇಳುವುದು ಹಾಸ್ಯಾಸ್ಪದ’ ಎಂದು ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ ಅಭಿಪ್ರಾಯಪಟ್ಟರು.</p>.<p>ಕರ್ನಾಟಕ ರಾಜ್ಯ ಸರ್ಕಾರಿ ಶಿಕ್ಷಕರಸಂಘಗಳ ಒಕ್ಕೂಟ ನಗರದಲ್ಲಿ ಬುಧವಾರ ಆಯೋಜಿಸಿದ್ದ ‘ಸಾವಿತ್ರಿ<br />ಬಾಯಿ ಫುಲೆ ಅವರ ಸಾಧನೆ ಹೆಜ್ಜೆಗಳು’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ವೇದಗಳ ಕಾಲದಿಂದಲೂದಲಿತರು ಮತ್ತು ಮಹಿಳೆಯರನ್ನು ಶೋಷಿಸಿದ ಭಾರತವನ್ನು ಭವ್ಯ ಪರಂಪರೆಯ ನಾಡು ಎಂದು ಹೇಗೆ ಕರೆಯುವುದು.ನಮ್ಮ ಚರಿತ್ರೆ ಸುಳ್ಳಿನ ಕಂತೆ. ಶಿಕ್ಷಕರು ಇತಿಹಾಸ ಬೋಧಿಸುವಾಗ ಚರಿತ್ರೆಯ ಪೊಳ್ಳುಗಳನ್ನು ವಿದ್ಯಾರ್ಥಿಗಳ ಎದುರು ಬಿಚ್ಚಿಡಬೇಕು’ ಎಂದು ಹೇಳಿದರು.</p>.<p>‘ಆಮ್ ಆದ್ಮಿ ಪಕ್ಷ ಅಸ್ತಿತ್ವದಲ್ಲಿರುವ ದೆಹಲಿಯಲ್ಲಿಶಿಕ್ಷಣ ವ್ಯವಸ್ಥೆ ತುಂಬಾ ಸುಧಾರಿಸಿದೆ. ಇದನ್ನು ಇತರೆ ರಾಜ್ಯಗಳು ಅನುಸರಿಸಬೇಕು. ನಾವು ಅಳವಡಿಸಿಕೊಳ್ಳಬೇಕು. ರಾಜ್ಯದಗ್ರಾಮೀಣ ಭಾಗದಲ್ಲಿ<br />ಸರ್ಕಾರಿ ಶಾಲೆಗಳು ಸಮಸ್ಯೆಗಳಿಂದ ನರಳುತ್ತಿವೆ. ವಿಷಯವನ್ನು ಸರ್ಕಾರದ ಗಮನಕ್ಕೆ ತರಲಾಗುವುದು’ ಎಂದರು.</p>.<p>ರಾಜ್ಯ ಸರ್ಕಾರಿ ಶಿಕ್ಷಕರ ಸಂಘಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ವಿ.ಟಿ.ವೆಂಕಟೇಶಯ್ಯ ಮಾತನಾಡಿ,‘ಭಾರತದ ಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಬಗ್ಗೆ ಮಾಹಿತಿ ಕಲೆ ಹಾಕಿ ಪುಸ್ತಕ ಪ್ರಕಟಿಸಿದ್ದೇವೆ. ರಾಜ್ಯದಲ್ಲಿರುವ ಎಲ್ಲಾ ಶಾಲೆಗಳು ಈ ಪುಸ್ತಕವನ್ನು ಖರೀದಿಸಲು ಮುಂದಾಗಿವೆ’ ಎಂದರು.</p>.<p>‘ಗ್ರಾಮೀಣ ಭಾಗದಲ್ಲಿ ಶಿಕ್ಷಕರ ಸಮಸ್ಯೆ ಹೆಚ್ಚಿದೆ’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>