ಅಸಂಘಟಿತ ವಲಯ: ರಾಜ್ಯದಲ್ಲಿ 2 ಕೋಟಿಯಷ್ಟು ಅಸಂಘಟಿತ ವಲಯದ ಕಾರ್ಮಿಕರಿದ್ದು, ಅವರಿಗೆ ಕೆಲಸದ ಭದ್ರತೆ, ಸೌಲಭ್ಯ ನೀಡಲು ಕೆಲವೊಂದು ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ನವೆಂಬರ್ 2ರ ಬಳಿಕ ಜವಳಿ, ಐಟಿ ಸಹಿತ ಪ್ರಮುಖ ಉದ್ಯಮಗಳೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿ ಕಾರ್ಮಿಕರ ಸಮಸ್ಯೆಗಳು, ಉದ್ಯಮಗಳ ಬೇಡಿಕೆಗಳ ಬಗ್ಗೆ ಸಮಾಲೋಚನೆ ನಡೆಸಲಾಗುವುದು. ಉದ್ಯಮಗಳ ಬೇಡಿಕೆಯಂತೆ ಡಿಸೆಂಬರ್ನಲ್ಲಿ ಕರ್ನಾಟಕ ಕಾರ್ಮಿಕ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದರು.