<p><strong>ಬೆಂಗಳೂರು: </strong>ಬನ್ನೇರುಘಟ್ಟದ ಕಾರ್ಮಿಕ ಭವನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಮತ್ತು ನಿರೀಕ್ಷಕರ ಕಚೇರಿಯನ್ನು ತುಮಕೂರು ರಸ್ತೆಯಲ್ಲಿನ ಬಾಗಲಗುಂಟೆಗೆ ಸ್ಥಳಾಂತರಿಸುವ ಸರ್ಕಾರದ ನಿರ್ಧಾರಕ್ಕೆ ಅಸಂಘಟಿತ ಕಾರ್ಮಿಕರು ವಿರೋಧ ವ್ಯಕ್ತಪಡಿಸಿದ್ದಾರೆ.</p>.<p>‘ಅಸಂಘಟಿತ ವಲಯದ ಲಕ್ಷಾಂತರ ಕಾರ್ಮಿಕರು ಬೆಂಗಳೂರು ದಕ್ಷಿಣ ಭಾಗದಲ್ಲಿ ವಾಸಿಸುತ್ತಿದ್ದಾರೆ. ಕಾರ್ಮಿಕರಿಗೆ ಸರ್ಕಾರವು ಅನೇಕ ಸೌಲಭ್ಯಗಳನ್ನು ಒದಗಿಸುತ್ತಿದೆ. ಈ ಸೌಲಭ್ಯ ಪಡೆಯಲು ಕಾರ್ಮಿಕರು ಇದೇ ಕಚೇರಿಗೆ ಭೇಟಿ ನೀಡುತ್ತಿದ್ದರು. ಈಗ ಕಚೇರಿಯನ್ನು ಬಾಗಲಗುಂಟೆಗೆ ಸ್ಥಳಾಂತರಿಸಿದರೆ ಈ ಭಾಗದ ಕಾರ್ಮಿಕರು ಸುಮಾರು 40 ಕಿ.ಮೀ. ದೂರ ಹೋಗಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಕಚೇರಿಯನ್ನು ಸ್ಥಳಾಂತರಿಸಬಾರದು’ ಎಂದು ಅಸಂಘಟಿತ ಕಾರ್ಮಿಕರ ಅಭಿವೃದ್ಧಿಗಾಗಿ ಹೋರಾಡುತ್ತಿರುವ ‘ಆಕಾಂಕ್ಷೆ’ ಸಂಘಟನೆಯ ಅಧ್ಯಕ್ಷ ಟಿ. ವಿಜಯ್ ಒತ್ತಾಯಿಸಿದ್ದಾರೆ.</p>.<p>‘ಲಾಕ್ಡೌನ್ ಸಮಯದಲ್ಲಿ ಅನೇಕ ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರದ ಸೌಲಭ್ಯವನ್ನಾದರೂ ಪಡೆಯಬೇಕೆಂದರೆ ನೋಂದಣಿ ಮಾಡಿಸಿಕೊಳ್ಳಬೇಕು ಮತ್ತು ಇದಕ್ಕಾಗಿ ಹಲವು ದಾಖಲೆಗಳನ್ನು ಕಚೇರಿಗೆ ಒದಗಿಸಬೇಕು. ಈ ಸಂಕಷ್ಟದಲ್ಲಿ 35ರಿಂದ 40 ಕಿ.ಮೀ ಓಡಾಡಲೂ ಕಾರ್ಮಿಕರಿಗೆ ತೊಂದರೆಯಾಗುತ್ತದೆ’ ಎಂದು ಅವರು ಹೇಳಿದ್ದಾರೆ.</p>.<p>ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರಿಗೂ, ಈ ಕುರಿತು ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘವು ಪತ್ರ ಬರೆದಿದ್ದು, ಕಚೇರಿ ಸ್ಥಳಾಂತರಿಸಬಾರದು ಎಂದು ಮನವಿ ಮಾಡಿದೆ.</p>.<p>ಕಾರ್ಮಿಕರಿಗೆ ಆಗಲಿರುವ ಸಮಸ್ಯೆ ಮನಗಂಡಿರುವ ಕಂದಾಯ ಸಚಿವ ಆರ್. ಅಶೋಕ ಮತ್ತು ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಅವರು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರಿಗೆ ಪತ್ರ ಬರೆದಿದ್ದು, ಕಚೇರಿ ಸ್ಥಳಾಂತರಿಸಬಾರದು ಎಂದು ಕೋರಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬನ್ನೇರುಘಟ್ಟದ ಕಾರ್ಮಿಕ ಭವನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಮತ್ತು ನಿರೀಕ್ಷಕರ ಕಚೇರಿಯನ್ನು ತುಮಕೂರು ರಸ್ತೆಯಲ್ಲಿನ ಬಾಗಲಗುಂಟೆಗೆ ಸ್ಥಳಾಂತರಿಸುವ ಸರ್ಕಾರದ ನಿರ್ಧಾರಕ್ಕೆ ಅಸಂಘಟಿತ ಕಾರ್ಮಿಕರು ವಿರೋಧ ವ್ಯಕ್ತಪಡಿಸಿದ್ದಾರೆ.</p>.<p>‘ಅಸಂಘಟಿತ ವಲಯದ ಲಕ್ಷಾಂತರ ಕಾರ್ಮಿಕರು ಬೆಂಗಳೂರು ದಕ್ಷಿಣ ಭಾಗದಲ್ಲಿ ವಾಸಿಸುತ್ತಿದ್ದಾರೆ. ಕಾರ್ಮಿಕರಿಗೆ ಸರ್ಕಾರವು ಅನೇಕ ಸೌಲಭ್ಯಗಳನ್ನು ಒದಗಿಸುತ್ತಿದೆ. ಈ ಸೌಲಭ್ಯ ಪಡೆಯಲು ಕಾರ್ಮಿಕರು ಇದೇ ಕಚೇರಿಗೆ ಭೇಟಿ ನೀಡುತ್ತಿದ್ದರು. ಈಗ ಕಚೇರಿಯನ್ನು ಬಾಗಲಗುಂಟೆಗೆ ಸ್ಥಳಾಂತರಿಸಿದರೆ ಈ ಭಾಗದ ಕಾರ್ಮಿಕರು ಸುಮಾರು 40 ಕಿ.ಮೀ. ದೂರ ಹೋಗಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಕಚೇರಿಯನ್ನು ಸ್ಥಳಾಂತರಿಸಬಾರದು’ ಎಂದು ಅಸಂಘಟಿತ ಕಾರ್ಮಿಕರ ಅಭಿವೃದ್ಧಿಗಾಗಿ ಹೋರಾಡುತ್ತಿರುವ ‘ಆಕಾಂಕ್ಷೆ’ ಸಂಘಟನೆಯ ಅಧ್ಯಕ್ಷ ಟಿ. ವಿಜಯ್ ಒತ್ತಾಯಿಸಿದ್ದಾರೆ.</p>.<p>‘ಲಾಕ್ಡೌನ್ ಸಮಯದಲ್ಲಿ ಅನೇಕ ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರದ ಸೌಲಭ್ಯವನ್ನಾದರೂ ಪಡೆಯಬೇಕೆಂದರೆ ನೋಂದಣಿ ಮಾಡಿಸಿಕೊಳ್ಳಬೇಕು ಮತ್ತು ಇದಕ್ಕಾಗಿ ಹಲವು ದಾಖಲೆಗಳನ್ನು ಕಚೇರಿಗೆ ಒದಗಿಸಬೇಕು. ಈ ಸಂಕಷ್ಟದಲ್ಲಿ 35ರಿಂದ 40 ಕಿ.ಮೀ ಓಡಾಡಲೂ ಕಾರ್ಮಿಕರಿಗೆ ತೊಂದರೆಯಾಗುತ್ತದೆ’ ಎಂದು ಅವರು ಹೇಳಿದ್ದಾರೆ.</p>.<p>ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರಿಗೂ, ಈ ಕುರಿತು ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘವು ಪತ್ರ ಬರೆದಿದ್ದು, ಕಚೇರಿ ಸ್ಥಳಾಂತರಿಸಬಾರದು ಎಂದು ಮನವಿ ಮಾಡಿದೆ.</p>.<p>ಕಾರ್ಮಿಕರಿಗೆ ಆಗಲಿರುವ ಸಮಸ್ಯೆ ಮನಗಂಡಿರುವ ಕಂದಾಯ ಸಚಿವ ಆರ್. ಅಶೋಕ ಮತ್ತು ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಅವರು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರಿಗೆ ಪತ್ರ ಬರೆದಿದ್ದು, ಕಚೇರಿ ಸ್ಥಳಾಂತರಿಸಬಾರದು ಎಂದು ಕೋರಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>