‘ಸಿಮೆಂಟ್, ಕಬ್ಬಿಣ, ಎಲೆಕ್ಟ್ರಿಕಲ್, ಟೈಲ್ಸ್–ಮಾರ್ಬಲ್ಸ್, ಹೀಗೆ... ಪ್ರತಿಯೊಂದು ಸಾಮಗ್ರಿಯ ದರವನ್ನು ಮೂರು ಪಟ್ಟು ಹೆಚ್ಚಿಸಲಾಗಿದೆ. ಇದರಿಂದಾಗಿ ನಿರ್ಮಾಣ ಕ್ಷೇತ್ರವೇ ಸಂಕಷ್ಟಕ್ಕೆ ಸಿಲುಕಿದೆ. ಕಟ್ಟಡ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಕೆಲವರು ನಗರ ತೊರೆದು ಹಳ್ಳಿಗಳಿಗೆ ಹೋಗುತ್ತಿದ್ದಾರೆ’ ಎಂದು ಪ್ರತಿಭಟನಕಾರರು ದೂರಿದರು.