<p><strong>ಬೆಂಗಳೂರು:</strong> ‘ರಾಜ್ಯದ ಸ್ಮಶಾನದಲ್ಲಿ ಕೆಲಸ ಮಾಡುವ ಎಲ್ಲ ಕಾರ್ಮಿಕರಿಗೆ ವಿಮಾ ಸೌಲಭ್ಯ ಕಲ್ಪಿಸಬೇಕು’ ಎಂದು ರಾಜ್ಯ ಮಸಣ ಕಾರ್ಮಿಕರ ಸಂಘ ಒತ್ತಾಯಿಸಿದೆ.</p>.<p>ಈ ಸಂಬಂಧ ಸಂಘದ ಸಂಚಾಲಕ ಯು. ಬಸವರಾಜು ಹಾಗೂ ಸಹ ಸಂಚಾಲಕಿ ಬಿ. ಮಾಳಮ್ಮ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ನೀಡಿದ್ದಾರೆ.</p>.<p>‘ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಸಾವುಗಳು ಸಂಭವಿಸುತ್ತಿವೆ. ಅಂಥವರ ಅಂತ್ಯಕ್ರಿಯೆಯನ್ನು ಮಸಣ ಕಾರ್ಮಿಕರ ಸಹಾಯದಿಂದ ಮಾಡಲಾಗುತ್ತಿದೆ. ಅಸಹಜವಾಗಿ ಮೃತಪಟ್ಟವರಿಗೆ ಕೊರೊನಾ ಇಲ್ಲವೆಂದು ಹೇಳಲಾಗದು. ಅಂಥವರ ಅಂತ್ಯಕ್ರಿಯೆಯನ್ನೂ ಕಾರ್ಮಿಕರು ಧೈರ್ಯದಿಂದ ಮಾಡುತ್ತಿದ್ದಾರೆ’ ಎಂದು ಮನವಿಯಲ್ಲಿ ತಿಳಿಸಲಾಗಿದೆ.</p>.<p>‘ಮಸಣ ಕಾರ್ಮಿಕರಾಗಿರುವ ಎಲ್ಲರೂ ಬಡವರು. ಅಂತ್ಯಕ್ರಿಯೆ ದುಡಿಮೆಯನ್ನೇ ನಂಬಿದವರು. ಕೊರೊನಾದಂಥ ಸಂಕಷ್ಟ ಕಾಲದಲ್ಲೂ ಕಾರ್ಮಿಕರು ಕೆಲಸ ಮಾಡುತ್ತಿದ್ಧಾರೆ. ಅಂತ್ಯಕ್ರಿಯೆಗಳನ್ನೂ ನೆರವೇರಿಸುತ್ತಿದ್ದಾರೆ. ಇಂಥ ಕಾರ್ಮಿಕರ ಜೀವಕ್ಕೆ ರಕ್ಷಣೆ ಬೇಕಾಗಿದೆ‘ ಎಂದೂ ಮನವಿಯಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯದ ಸ್ಮಶಾನದಲ್ಲಿ ಕೆಲಸ ಮಾಡುವ ಎಲ್ಲ ಕಾರ್ಮಿಕರಿಗೆ ವಿಮಾ ಸೌಲಭ್ಯ ಕಲ್ಪಿಸಬೇಕು’ ಎಂದು ರಾಜ್ಯ ಮಸಣ ಕಾರ್ಮಿಕರ ಸಂಘ ಒತ್ತಾಯಿಸಿದೆ.</p>.<p>ಈ ಸಂಬಂಧ ಸಂಘದ ಸಂಚಾಲಕ ಯು. ಬಸವರಾಜು ಹಾಗೂ ಸಹ ಸಂಚಾಲಕಿ ಬಿ. ಮಾಳಮ್ಮ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ನೀಡಿದ್ದಾರೆ.</p>.<p>‘ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಸಾವುಗಳು ಸಂಭವಿಸುತ್ತಿವೆ. ಅಂಥವರ ಅಂತ್ಯಕ್ರಿಯೆಯನ್ನು ಮಸಣ ಕಾರ್ಮಿಕರ ಸಹಾಯದಿಂದ ಮಾಡಲಾಗುತ್ತಿದೆ. ಅಸಹಜವಾಗಿ ಮೃತಪಟ್ಟವರಿಗೆ ಕೊರೊನಾ ಇಲ್ಲವೆಂದು ಹೇಳಲಾಗದು. ಅಂಥವರ ಅಂತ್ಯಕ್ರಿಯೆಯನ್ನೂ ಕಾರ್ಮಿಕರು ಧೈರ್ಯದಿಂದ ಮಾಡುತ್ತಿದ್ದಾರೆ’ ಎಂದು ಮನವಿಯಲ್ಲಿ ತಿಳಿಸಲಾಗಿದೆ.</p>.<p>‘ಮಸಣ ಕಾರ್ಮಿಕರಾಗಿರುವ ಎಲ್ಲರೂ ಬಡವರು. ಅಂತ್ಯಕ್ರಿಯೆ ದುಡಿಮೆಯನ್ನೇ ನಂಬಿದವರು. ಕೊರೊನಾದಂಥ ಸಂಕಷ್ಟ ಕಾಲದಲ್ಲೂ ಕಾರ್ಮಿಕರು ಕೆಲಸ ಮಾಡುತ್ತಿದ್ಧಾರೆ. ಅಂತ್ಯಕ್ರಿಯೆಗಳನ್ನೂ ನೆರವೇರಿಸುತ್ತಿದ್ದಾರೆ. ಇಂಥ ಕಾರ್ಮಿಕರ ಜೀವಕ್ಕೆ ರಕ್ಷಣೆ ಬೇಕಾಗಿದೆ‘ ಎಂದೂ ಮನವಿಯಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>