<p><strong>ಬೆಂಗಳೂರು:</strong> ಕಾರ್ಮಿಕರ ಕಲ್ಯಾಣ ಮಂಡಳಿಯ ನಿಧಿಯನ್ನು ವಸತಿ ಶಾಲೆ ನಿರ್ಮಾಣದಂತಹ ಅನ್ಯ ಉದ್ದೇಶಕ್ಕೆ ಬಳಸದಂತೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ 9ರಂದು ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘಟನೆಗಳ ಸಮನ್ವಯ ಸಮಿತಿಯು ರಾಜ್ಯದಾದ್ಯಂತ ಮುಷ್ಕರ ಹಮ್ಮಿಕೊಂಡಿದೆ. </p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ಮಹಾಂತೇಶ್, ‘ಮಂಡಳಿಯ ನಿಧಿ ಬಳಸಿ, ₹1,125 ಕೋಟಿ ವೆಚ್ಚದಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆಗಳು ಮತ್ತು ₹968 ಕೋಟಿ ವೆಚ್ಚದಲ್ಲಿ ಎರಡು ಕೌಶಲ ಕೇಂದ್ರಗಳ ಸ್ಥಾಪನೆಗೆ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಈ ಕಾರ್ಯಕ್ಕೆ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಇರಿಸಲಾದ ಮಂಡಳಿಯ ನಿಧಿ ಬಳಸುವುದು ಸರಿಯಲ್ಲ. ಕೌಶಲ ತರಬೇತಿ ಕೇಂದ್ರದ ಸ್ಥಾಪನೆಯನ್ನು ಕೈಬಿಡಬೇಕು’ ಎಂದು ಆಗ್ರಹಿಸಿದರು.</p>.<p>‘ಹೈಕೋರ್ಟ್ ತೀರ್ಪಿನಂತೆ ಶೈಕ್ಷಣಿಕ ಧನ ಸಹಾಯ, ಹೆರಿಗೆ ಭತ್ಯೆ, ಶವ ಸಂಸ್ಕಾರ ಸಹಾಯ ಧನ ನೀಡಬೇಕು. ಬಾಕಿ ಇರುವ ಪಿಂಚಣಿ ಅರ್ಜಿಗಳಿಗೆ ಹಣ ಪಾವತಿಸಬೇಕು. ಮನೆ ನಿರ್ಮಾಣಕ್ಕೆ ₹5 ಲಕ್ಷ ಸಹಾಯ ಧನ ನೀಡಬೇಕು. ಮಂಡಳಿಯನ್ನು ಭ್ರಷ್ಟಚಾರದಿಂದ ಮುಕ್ತಗೊಳಿಸಬೇಕು. ವೈದ್ಯಕೀಯ ನೆರವು ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಟ್ಟಡ ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ, ಮುಷ್ಕರ ನಡೆಸಲಿದ್ದಾರೆ’ ಎಂದು ತಿಳಿಸಿದರು.</p>.<p>ಕಾರ್ಮಿಕ ಮುಖಂಡರಾದ ಲಿಂಗರಾಜ್, ಶಾಮಣ್ಣ ರೆಡ್ಡಿ, ಶ್ರೀನಿವಾಸ್, ಷಣ್ಮುಗಂ ಪಿ.ಎಸ್., ದೇವದಾಸ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಾರ್ಮಿಕರ ಕಲ್ಯಾಣ ಮಂಡಳಿಯ ನಿಧಿಯನ್ನು ವಸತಿ ಶಾಲೆ ನಿರ್ಮಾಣದಂತಹ ಅನ್ಯ ಉದ್ದೇಶಕ್ಕೆ ಬಳಸದಂತೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ 9ರಂದು ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘಟನೆಗಳ ಸಮನ್ವಯ ಸಮಿತಿಯು ರಾಜ್ಯದಾದ್ಯಂತ ಮುಷ್ಕರ ಹಮ್ಮಿಕೊಂಡಿದೆ. </p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ಮಹಾಂತೇಶ್, ‘ಮಂಡಳಿಯ ನಿಧಿ ಬಳಸಿ, ₹1,125 ಕೋಟಿ ವೆಚ್ಚದಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆಗಳು ಮತ್ತು ₹968 ಕೋಟಿ ವೆಚ್ಚದಲ್ಲಿ ಎರಡು ಕೌಶಲ ಕೇಂದ್ರಗಳ ಸ್ಥಾಪನೆಗೆ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಈ ಕಾರ್ಯಕ್ಕೆ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಇರಿಸಲಾದ ಮಂಡಳಿಯ ನಿಧಿ ಬಳಸುವುದು ಸರಿಯಲ್ಲ. ಕೌಶಲ ತರಬೇತಿ ಕೇಂದ್ರದ ಸ್ಥಾಪನೆಯನ್ನು ಕೈಬಿಡಬೇಕು’ ಎಂದು ಆಗ್ರಹಿಸಿದರು.</p>.<p>‘ಹೈಕೋರ್ಟ್ ತೀರ್ಪಿನಂತೆ ಶೈಕ್ಷಣಿಕ ಧನ ಸಹಾಯ, ಹೆರಿಗೆ ಭತ್ಯೆ, ಶವ ಸಂಸ್ಕಾರ ಸಹಾಯ ಧನ ನೀಡಬೇಕು. ಬಾಕಿ ಇರುವ ಪಿಂಚಣಿ ಅರ್ಜಿಗಳಿಗೆ ಹಣ ಪಾವತಿಸಬೇಕು. ಮನೆ ನಿರ್ಮಾಣಕ್ಕೆ ₹5 ಲಕ್ಷ ಸಹಾಯ ಧನ ನೀಡಬೇಕು. ಮಂಡಳಿಯನ್ನು ಭ್ರಷ್ಟಚಾರದಿಂದ ಮುಕ್ತಗೊಳಿಸಬೇಕು. ವೈದ್ಯಕೀಯ ನೆರವು ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಟ್ಟಡ ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ, ಮುಷ್ಕರ ನಡೆಸಲಿದ್ದಾರೆ’ ಎಂದು ತಿಳಿಸಿದರು.</p>.<p>ಕಾರ್ಮಿಕ ಮುಖಂಡರಾದ ಲಿಂಗರಾಜ್, ಶಾಮಣ್ಣ ರೆಡ್ಡಿ, ಶ್ರೀನಿವಾಸ್, ಷಣ್ಮುಗಂ ಪಿ.ಎಸ್., ದೇವದಾಸ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>