‘ನಗರದ ಆರೋಗ್ಯ ರಕ್ಷಣೆಗೆ ಟೊಂಕಕಟ್ಟಿ ನಿಂತಿರುವ ಮಹಿಳಾ ಪೌರ ಕಾರ್ಮಿಕರು ಸ್ವಚ್ಛ, ಸುಂದರ ಬೆಂಗಳೂರು ನಿರ್ಮಾಣ ಮಾಡುವ ನಿಜವಾದ ಸ್ವಚ್ಛತಾ ರಾಯಭಾರಿಗಳಾಗಿದ್ದಾರೆ. ಇವರ ಆರೋಗ್ಯ ರಕ್ಷಣೆ ನಮ್ಮೆಲ್ಲರ ಹೊಣೆ. ಇದೇ ಉದ್ದೇಶದಿಂದ ಪೌರ ಕಾರ್ಮಿಕರಿಗೆ ಮಧ್ಯಾಹ್ನದ ಬಿಸಿಯೂಟದ ಸೌಲಭ್ಯ ಕಲ್ಪಿಸಲಾಗುತ್ತಿದೆ. ಆರೋಗ್ಯ ವಿಮೆ, ಪೌರ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ನೆರವು. ಪಾಲಿಕೆ ಶಾಲೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಪೌರ ಕಾರ್ಮಿಕರ ಪರಿಶ್ರಮದಿಂದ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಬೆಂಗಳೂರು ನಗರ 22 ಅಂಕಗಳ ಬಡ್ತಿ ಪಡೆದು ಉತ್ತಮ ಸಾಧನೆಮಾಡಿದೆ’ ಎಂದುಮಹಿಳಾ ಪೌರ ಕಾರ್ಮಿಕರನ್ನು ಸನ್ಮಾನಿಸಿದ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಮೆಚ್ಚುಗೆ ವ್ಯಕ್ತಪಡಿಸಿದರು.