<p><strong>ಬೆಂಗಳೂರು:</strong> ‘ಕೃಷಿ ಕ್ಷೇತ್ರದ ನಂತರ ಅತಿಹೆಚ್ಚು ಉದ್ಯೋಗಗಳನ್ನು ನೀಡುತ್ತಿರುವುದು ಸಣ್ಣ ಕೈಗಾರಿಕಾ ಕ್ಷೇತ್ರ. ಆದರೆ, ಸಣ್ಣ ಕೈಗಾರಿಕೆಗಳಿಗೆ ಮೂಲಸೌಕರ್ಯಗಳ ಕೊರತೆ ಇದೆ’ ಎಂದು ಆಲ್ ಇಂಡಿಯಾ ಮ್ಯಾನೇಜ್ಮೆಂಟ್ ಅಸೋಸಿಯೇಶನ್ (ಎಐಎಂಎ) ಅಧ್ಯಕ್ಷ ನಿಖಿಲ್ ಸಾಹ್ನಿ ತಿಳಿಸಿದರು.</p>.<p>ಎಐಎಂಎ ಮತ್ತು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ವತಿಯಿಂದ ಶುಕ್ರವಾರ ಕಾಸಿಯಾ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೋದ್ಯಮಿಗಳ (ಎಂಎಸ್ಎಂಇ) 13ನೇ ರಾಷ್ಟ್ರೀಯ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>’ಕೊರೊನಾ ಕಾಲದಲ್ಲಿ ಅತಿ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗಳು ಸಂಕಷ್ಟಕ್ಕೆ ಸಿಲುಕಿದವು. ನೀತಿ ನಿರೂಪಕರು ಸಣ್ಣ ಕೈಗಾರಿಕೆಗಳಿಗೆ ಅನುಕೂಲ ಆಗುವಂಥ ಯಾವುದೇ ಕ್ರಮಗಳನ್ನು ಕೈಗೊಳ್ಳಲಿಲ್ಲ’ ಎಂದು ದೂರಿದರು.</p>.<p>‘ಬೃಹತ್ ಕೈಗಾರಿಕೆಗಳ ಬೆನ್ನೆಲುಬಾಗಿ ಸಣ್ಣ ಕೈಗಾರಿಕೆಗಳು ಕೆಲಸ ಮಾಡುತ್ತವೆ. ದೊಡ್ಡ ಉದ್ದಿಮೆಗಳಿಗೆ ಬೇಕಾದ ವಸ್ತುಗಳನ್ನು ಸಣ್ಣ ಕೈಗಾರಿಕೆಗಳು ಪೂರೈಸುತ್ತವೆ. ಆದರೆ, ಬೃಹತ್ ಕೈಗಾರಿಕೆಗಳಿಗೆ ಸಿಗುವ ಮೂಲಸೌಲಭ್ಯ ಮತ್ತು ಪ್ರೋತ್ಸಾಹ ಸಣ್ಣ ಕೈಗಾರಿಕೆಗಳಿಗೆ ಸಿಗುತ್ತಿಲ್ಲ‘ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಸಣ್ಣ ಕೈಗಾರಿಕೆಗಳಿಗೆ ಭೂಮಿ ಸಿಗುವುದಿಲ್ಲ. ಸಿಕ್ಕಿದರೂ ಅದಕ್ಕೆ ಸರಿಯಾದ ರಸ್ತೆ ಇರುವುದಿಲ್ಲ. ನೀರು, ವಿದ್ಯುತ್ ಸಮಸ್ಯೆ ಇರುತ್ತದೆ. ಹಾಗಾಗಿ ಬಹುತೇಕ ಸಣ್ಣ ಕೈಗಾರಿಕೆಗಳು ಖಾಸಗಿ ಜಾಗದಲ್ಲಿವೆ ಎಂದು ವಿವರಿಸಿದರು.</p>.<p>ಇಂಥ ಎಲ್ಲ ಅಡೆತಡೆಗಳ ನಡುವೆಯೂ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಸಣ್ಣ ಕೈಗಾರಿಕೆಗಳು ಬೆಳೆಯಬೇಕು. ಡಿಜಿಟಲೀಕರಣ ಇಂದಿನ ಅಗತ್ಯ. ಗುಣಮಟ್ಟದ ವಸ್ತುಗಳನ್ನು ಉತ್ಪಾದನೆ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಜೆ.ಎಸ್. ಜುನೆಜ ಅವರು ಸಮಾವೇಶದ ಸ್ಮರಣಸಂಚಿಕೆ ಬಿಡುಗಡೆ ಮಾಡಿದರು. </p>.<p>ಎಐಎಂಎ ಮಹಾನಿರ್ದೇಶಕಿ ರೇಖಾ ಸೇಥಿ, ಕಾಸಿಯಾ ಅಧ್ಯಕ್ಷ ಶಶಿಧರ ಶೆಟ್ಟಿ, ಉಪಾಧ್ಯಕ್ಷ ರಾಜಗೋಪಾಲ್ ಎಂ.ಜಿ., ಪ್ರಧಾನ ಕಾರ್ಯದರ್ಶಿ ನಾಗರಾಜು ಎಸ್. ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕೃಷಿ ಕ್ಷೇತ್ರದ ನಂತರ ಅತಿಹೆಚ್ಚು ಉದ್ಯೋಗಗಳನ್ನು ನೀಡುತ್ತಿರುವುದು ಸಣ್ಣ ಕೈಗಾರಿಕಾ ಕ್ಷೇತ್ರ. ಆದರೆ, ಸಣ್ಣ ಕೈಗಾರಿಕೆಗಳಿಗೆ ಮೂಲಸೌಕರ್ಯಗಳ ಕೊರತೆ ಇದೆ’ ಎಂದು ಆಲ್ ಇಂಡಿಯಾ ಮ್ಯಾನೇಜ್ಮೆಂಟ್ ಅಸೋಸಿಯೇಶನ್ (ಎಐಎಂಎ) ಅಧ್ಯಕ್ಷ ನಿಖಿಲ್ ಸಾಹ್ನಿ ತಿಳಿಸಿದರು.</p>.<p>ಎಐಎಂಎ ಮತ್ತು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ವತಿಯಿಂದ ಶುಕ್ರವಾರ ಕಾಸಿಯಾ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೋದ್ಯಮಿಗಳ (ಎಂಎಸ್ಎಂಇ) 13ನೇ ರಾಷ್ಟ್ರೀಯ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>’ಕೊರೊನಾ ಕಾಲದಲ್ಲಿ ಅತಿ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗಳು ಸಂಕಷ್ಟಕ್ಕೆ ಸಿಲುಕಿದವು. ನೀತಿ ನಿರೂಪಕರು ಸಣ್ಣ ಕೈಗಾರಿಕೆಗಳಿಗೆ ಅನುಕೂಲ ಆಗುವಂಥ ಯಾವುದೇ ಕ್ರಮಗಳನ್ನು ಕೈಗೊಳ್ಳಲಿಲ್ಲ’ ಎಂದು ದೂರಿದರು.</p>.<p>‘ಬೃಹತ್ ಕೈಗಾರಿಕೆಗಳ ಬೆನ್ನೆಲುಬಾಗಿ ಸಣ್ಣ ಕೈಗಾರಿಕೆಗಳು ಕೆಲಸ ಮಾಡುತ್ತವೆ. ದೊಡ್ಡ ಉದ್ದಿಮೆಗಳಿಗೆ ಬೇಕಾದ ವಸ್ತುಗಳನ್ನು ಸಣ್ಣ ಕೈಗಾರಿಕೆಗಳು ಪೂರೈಸುತ್ತವೆ. ಆದರೆ, ಬೃಹತ್ ಕೈಗಾರಿಕೆಗಳಿಗೆ ಸಿಗುವ ಮೂಲಸೌಲಭ್ಯ ಮತ್ತು ಪ್ರೋತ್ಸಾಹ ಸಣ್ಣ ಕೈಗಾರಿಕೆಗಳಿಗೆ ಸಿಗುತ್ತಿಲ್ಲ‘ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಸಣ್ಣ ಕೈಗಾರಿಕೆಗಳಿಗೆ ಭೂಮಿ ಸಿಗುವುದಿಲ್ಲ. ಸಿಕ್ಕಿದರೂ ಅದಕ್ಕೆ ಸರಿಯಾದ ರಸ್ತೆ ಇರುವುದಿಲ್ಲ. ನೀರು, ವಿದ್ಯುತ್ ಸಮಸ್ಯೆ ಇರುತ್ತದೆ. ಹಾಗಾಗಿ ಬಹುತೇಕ ಸಣ್ಣ ಕೈಗಾರಿಕೆಗಳು ಖಾಸಗಿ ಜಾಗದಲ್ಲಿವೆ ಎಂದು ವಿವರಿಸಿದರು.</p>.<p>ಇಂಥ ಎಲ್ಲ ಅಡೆತಡೆಗಳ ನಡುವೆಯೂ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಸಣ್ಣ ಕೈಗಾರಿಕೆಗಳು ಬೆಳೆಯಬೇಕು. ಡಿಜಿಟಲೀಕರಣ ಇಂದಿನ ಅಗತ್ಯ. ಗುಣಮಟ್ಟದ ವಸ್ತುಗಳನ್ನು ಉತ್ಪಾದನೆ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಜೆ.ಎಸ್. ಜುನೆಜ ಅವರು ಸಮಾವೇಶದ ಸ್ಮರಣಸಂಚಿಕೆ ಬಿಡುಗಡೆ ಮಾಡಿದರು. </p>.<p>ಎಐಎಂಎ ಮಹಾನಿರ್ದೇಶಕಿ ರೇಖಾ ಸೇಥಿ, ಕಾಸಿಯಾ ಅಧ್ಯಕ್ಷ ಶಶಿಧರ ಶೆಟ್ಟಿ, ಉಪಾಧ್ಯಕ್ಷ ರಾಜಗೋಪಾಲ್ ಎಂ.ಜಿ., ಪ್ರಧಾನ ಕಾರ್ಯದರ್ಶಿ ನಾಗರಾಜು ಎಸ್. ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>