ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆ ಸಲಹೆಗಾರರಾದ ಡಾ.ಎಂ.ಆರ್. ದೊರೆಸ್ವಾಮಿ, ’ರಾಜ್ಯದ 30 ಸಾವಿರ ಶಾಲೆಗಳಲ್ಲಿ ಸಮಸ್ಯೆಗಳಿದ್ದವು. ದತ್ತು ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಒಂದಷ್ಟು ಸಮಸ್ಯೆಗಳು ಬಗೆಹರಿದಿವೆ. ಈಗ ಸರ್ಕಾರ 8 ಸಾವಿರ ಕೊಠಡಿಗಳು, ಶೌಚಾಲಯಗಳ ನಿರ್ಮಾಣಕ್ಕೆ ಅನುದಾನ ನೀಡಿದೆ‘ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.