<p><strong>ಬೆಂಗಳೂರು: </strong>ದೊಡ್ಡಬಿದರಕಲ್ಲು ವ್ಯಾಪ್ತಿಯ ಪ್ರದೇಶಗಳಿಗೆ ಕಾವೇರಿ ನೀರು ಸರಬರಾಜಿಗೆ ಅನುಕೂಲವಾಗಲು ಲಿಂಗಧೀರನಹಳ್ಳಿಯಲ್ಲಿ ನೆಲಮಟ್ಟದ ಜಲಾಶಯ (ಜಿಎಲ್ಆರ್) ಕಾಮಗಾರಿಗೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.</p>.<p>ಬಳಿಕ ಮಾತನಾಡಿದ ಅವರು,‘ಜಲಮಂಡಳಿ ವತಿಯಿಂದಈ ಕಾಮಗಾರಿ ನಡೆಯಲಿದೆ. ಸುತ್ತಮುತ್ತಲಿನ ಹಳ್ಳಿಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಿದೆ.₹15.27 ಕೋಟಿ ವೆಚ್ಚದ ಈ ಕಾಮಗಾರಿಯನ್ನು 2023ರ ಜೂನ್ ವೇಳೆಗೆ ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದು’ ಎಂದರು.</p>.<p>‘ಯಶವಂತಪುರ ಕ್ಷೇತ್ರದಲ್ಲಿ ನೀರಿನ ಸಮಸ್ಯೆಗಳನ್ನು ಪೂರ್ಣವಾಗಿ ಬಗೆಹರಿಸುವ ಗುರಿ ಇದೆ. ಪ್ರಸ್ತುತ ಈಗ ಚಾಲನೆ ನೀಡಿರುವ ಯೋಜನೆಯಿಂದ ಈ ಭಾಗದ ನೀರಿನ ಸಮಸ್ಯೆ ನೀಗಲಿದೆ’ ಎಂದು ಹೇಳಿದರು.</p>.<p>ಹೇರೋಹಳ್ಳಿಯ ಕೆಎಸ್ಆರ್ಟಿಸಿ ಬಡಾವಣೆ, ಜೆಎಸ್ಎಸ್ ಕಾಲೇಜು ಹಾಗೂ ಹೆಮ್ಮಿಗೆಪುರದ ಪೌರಕಾರ್ಮಿಕರಿಗೆ ಪಡಿತರ ಕಿಟ್ಗಳನ್ನು ಸಚಿವ ಸೋಮಶೇಖರ್ ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ದೊಡ್ಡಬಿದರಕಲ್ಲು ವ್ಯಾಪ್ತಿಯ ಪ್ರದೇಶಗಳಿಗೆ ಕಾವೇರಿ ನೀರು ಸರಬರಾಜಿಗೆ ಅನುಕೂಲವಾಗಲು ಲಿಂಗಧೀರನಹಳ್ಳಿಯಲ್ಲಿ ನೆಲಮಟ್ಟದ ಜಲಾಶಯ (ಜಿಎಲ್ಆರ್) ಕಾಮಗಾರಿಗೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.</p>.<p>ಬಳಿಕ ಮಾತನಾಡಿದ ಅವರು,‘ಜಲಮಂಡಳಿ ವತಿಯಿಂದಈ ಕಾಮಗಾರಿ ನಡೆಯಲಿದೆ. ಸುತ್ತಮುತ್ತಲಿನ ಹಳ್ಳಿಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಿದೆ.₹15.27 ಕೋಟಿ ವೆಚ್ಚದ ಈ ಕಾಮಗಾರಿಯನ್ನು 2023ರ ಜೂನ್ ವೇಳೆಗೆ ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದು’ ಎಂದರು.</p>.<p>‘ಯಶವಂತಪುರ ಕ್ಷೇತ್ರದಲ್ಲಿ ನೀರಿನ ಸಮಸ್ಯೆಗಳನ್ನು ಪೂರ್ಣವಾಗಿ ಬಗೆಹರಿಸುವ ಗುರಿ ಇದೆ. ಪ್ರಸ್ತುತ ಈಗ ಚಾಲನೆ ನೀಡಿರುವ ಯೋಜನೆಯಿಂದ ಈ ಭಾಗದ ನೀರಿನ ಸಮಸ್ಯೆ ನೀಗಲಿದೆ’ ಎಂದು ಹೇಳಿದರು.</p>.<p>ಹೇರೋಹಳ್ಳಿಯ ಕೆಎಸ್ಆರ್ಟಿಸಿ ಬಡಾವಣೆ, ಜೆಎಸ್ಎಸ್ ಕಾಲೇಜು ಹಾಗೂ ಹೆಮ್ಮಿಗೆಪುರದ ಪೌರಕಾರ್ಮಿಕರಿಗೆ ಪಡಿತರ ಕಿಟ್ಗಳನ್ನು ಸಚಿವ ಸೋಮಶೇಖರ್ ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>