<p><strong>ಬೆಂಗಳೂರು:</strong> ‘ಹೆಬ್ಬಗೋಡಿಯ ವೀರಸಂದ್ರ ಕೆರೆಯ ಒತ್ತುವರಿ ತೆರವಿಗೆ ಕೂಡಲೇ ಸರ್ವೆ ನಡೆಸಬೇಕು. ಈ ಸಂಬಂಧ ವಾರದೊಳಗೆ ಸಭೆ ನಡೆಸಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ಹೇಳಿದರು.</p>.<p>ಅವನತಿಯ ಅಂಚು ತಲುಪಿದ್ದ ವೀರಸಂದ್ರ ಕೆರೆಯನ್ನು ಟೈಟನ್ ಕಂಪನಿ ಪುನರುಜ್ಜೀವನಗೊಳಿಸುತ್ತಿದೆ. ಈ ಕುರಿತು ಕಂಪನಿ ಹಾಗೂ ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ಸಿಎಲ್) ಒಪ್ಪಂದ ಮಾಡಿಕೊಂಡಿವೆ. ಕೆರೆ ಪುನರುಜ್ಜೀವನಕ್ಕೆ ಒತ್ತುವರಿ ಅಡ್ಡಿಯಾಗಿತ್ತು. ಈ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಬುಧವಾರ ವರದಿ ಪ್ರಕಟವಾಗಿತ್ತು. ಜಿಲ್ಲಾಧಿಕಾರಿ ಅವರು ಬುಧವಾರ ಕೆರೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.</p>.<p>ಕೆರೆಯ ಪಶ್ಚಿಮ ದಿಕ್ಕಿನಲ್ಲಿ ಇನ್ನೊಂದು ರಸ್ತೆ ನಿರ್ಮಿಸುವಂತೆ ಕೋರಿ ಹೆಬ್ಬಗೋಡಿ ನಗರಸಭೆಯವರು ಜಿಲ್ಲಾಧಿಕಾರಿ ಅವರಿಗೆ ಪತ್ರ<br />ಬರೆದಿದ್ದರು. ರಸ್ತೆ ನಿರ್ಮಾಣಕ್ಕೆ 1 ಎಕರೆ 10 ಗುಂಟೆ ಜಾಗ ಬೇಕಿದೆ. 25ಅಡಿ ಅಗಲದ ರಸ್ತೆ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಕೆರೆ ರಕ್ಷಣೆಗೆ ನಾವೆಲ್ಲ ದಶಕದಿಂದ ಹೋರಾಟ ಮಾಡುತ್ತಿದ್ದೇವೆ. ಒತ್ತುವರಿದಾರರ ಪಟ್ಟಿಯಲ್ಲಿ ನಮ್ಮನ್ನೇ ಜಿಲ್ಲಾಡಳಿತ ಸೇರಿಸಿದೆ. ನಾನು ಯಾವುದೇ ಒತ್ತುವರಿ ಮಾಡಿಲ್ಲ. ಕೆಲವರು ಅಧಿಕಾರಿಗಳು ದುರುದ್ದೇಶದಿಂದ ನನ್ನ ಹೆಸರು ಸೇರಿಸಿದ್ದಾರೆ’ ಎಂದು ಹೆಬ್ಬಗೋಡಿ ನಗರಸಭೆಯ ಉಪಾಧ್ಯಕ್ಷ ರಾಜೇಂದ್ರಪ್ಪ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಹೆಬ್ಬಗೋಡಿಯ ವೀರಸಂದ್ರ ಕೆರೆಯ ಒತ್ತುವರಿ ತೆರವಿಗೆ ಕೂಡಲೇ ಸರ್ವೆ ನಡೆಸಬೇಕು. ಈ ಸಂಬಂಧ ವಾರದೊಳಗೆ ಸಭೆ ನಡೆಸಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ಹೇಳಿದರು.</p>.<p>ಅವನತಿಯ ಅಂಚು ತಲುಪಿದ್ದ ವೀರಸಂದ್ರ ಕೆರೆಯನ್ನು ಟೈಟನ್ ಕಂಪನಿ ಪುನರುಜ್ಜೀವನಗೊಳಿಸುತ್ತಿದೆ. ಈ ಕುರಿತು ಕಂಪನಿ ಹಾಗೂ ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ಸಿಎಲ್) ಒಪ್ಪಂದ ಮಾಡಿಕೊಂಡಿವೆ. ಕೆರೆ ಪುನರುಜ್ಜೀವನಕ್ಕೆ ಒತ್ತುವರಿ ಅಡ್ಡಿಯಾಗಿತ್ತು. ಈ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಬುಧವಾರ ವರದಿ ಪ್ರಕಟವಾಗಿತ್ತು. ಜಿಲ್ಲಾಧಿಕಾರಿ ಅವರು ಬುಧವಾರ ಕೆರೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.</p>.<p>ಕೆರೆಯ ಪಶ್ಚಿಮ ದಿಕ್ಕಿನಲ್ಲಿ ಇನ್ನೊಂದು ರಸ್ತೆ ನಿರ್ಮಿಸುವಂತೆ ಕೋರಿ ಹೆಬ್ಬಗೋಡಿ ನಗರಸಭೆಯವರು ಜಿಲ್ಲಾಧಿಕಾರಿ ಅವರಿಗೆ ಪತ್ರ<br />ಬರೆದಿದ್ದರು. ರಸ್ತೆ ನಿರ್ಮಾಣಕ್ಕೆ 1 ಎಕರೆ 10 ಗುಂಟೆ ಜಾಗ ಬೇಕಿದೆ. 25ಅಡಿ ಅಗಲದ ರಸ್ತೆ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಕೆರೆ ರಕ್ಷಣೆಗೆ ನಾವೆಲ್ಲ ದಶಕದಿಂದ ಹೋರಾಟ ಮಾಡುತ್ತಿದ್ದೇವೆ. ಒತ್ತುವರಿದಾರರ ಪಟ್ಟಿಯಲ್ಲಿ ನಮ್ಮನ್ನೇ ಜಿಲ್ಲಾಡಳಿತ ಸೇರಿಸಿದೆ. ನಾನು ಯಾವುದೇ ಒತ್ತುವರಿ ಮಾಡಿಲ್ಲ. ಕೆಲವರು ಅಧಿಕಾರಿಗಳು ದುರುದ್ದೇಶದಿಂದ ನನ್ನ ಹೆಸರು ಸೇರಿಸಿದ್ದಾರೆ’ ಎಂದು ಹೆಬ್ಬಗೋಡಿ ನಗರಸಭೆಯ ಉಪಾಧ್ಯಕ್ಷ ರಾಜೇಂದ್ರಪ್ಪ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>