ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರಸಂದ್ರ ಕೆರೆ ಒತ್ತುವರಿ ತೆರವಿಗೆ ಸೂಚನೆ

ರಸ್ತೆ ನಿರ್ಮಾಣಕ್ಕೆ 1 ಎಕರೆ 10 ಗುಂಟೆ ನೀಡಲು ಒಪ್ಪಿಗೆ
Last Updated 12 ಫೆಬ್ರುವರಿ 2020, 19:45 IST
ಅಕ್ಷರ ಗಾತ್ರ

ಬೆಂಗಳೂರು: ‘ಹೆಬ್ಬಗೋಡಿಯ ವೀರಸಂದ್ರ ಕೆರೆಯ ಒತ್ತುವರಿ ತೆರವಿಗೆ ಕೂಡಲೇ ಸರ್ವೆ ನಡೆಸಬೇಕು. ಈ ಸಂಬಂಧ ವಾರದೊಳಗೆ ಸಭೆ ನಡೆಸಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್‌.ಶಿವಮೂರ್ತಿ ಹೇಳಿದರು.

ಅವನತಿಯ ಅಂಚು ತಲುಪಿದ್ದ ವೀರಸಂದ್ರ ಕೆರೆಯನ್ನು ಟೈಟನ್‌ ಕಂಪನಿ ಪುನರುಜ್ಜೀವನಗೊಳಿಸುತ್ತಿದೆ. ಈ ಕುರಿತು ಕಂಪನಿ ಹಾಗೂ ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್‌) ಒಪ್ಪಂದ ಮಾಡಿಕೊಂಡಿವೆ. ಕೆರೆ ಪುನರುಜ್ಜೀವನಕ್ಕೆ ಒತ್ತುವರಿ ಅಡ್ಡಿಯಾಗಿತ್ತು. ಈ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಬುಧವಾರ ವರದಿ ಪ್ರಕಟವಾಗಿತ್ತು. ಜಿಲ್ಲಾಧಿಕಾರಿ ಅವರು ಬುಧವಾರ ಕೆರೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.

ಕೆರೆಯ ಪಶ್ಚಿಮ ದಿಕ್ಕಿನಲ್ಲಿ ಇನ್ನೊಂದು ರಸ್ತೆ ನಿರ್ಮಿಸುವಂತೆ ಕೋರಿ ಹೆಬ್ಬಗೋಡಿ ನಗರಸಭೆಯವರು ಜಿಲ್ಲಾಧಿಕಾರಿ ಅವರಿಗೆ ಪತ್ರ
ಬರೆದಿದ್ದರು. ರಸ್ತೆ ನಿರ್ಮಾಣಕ್ಕೆ 1 ಎಕರೆ 10 ಗುಂಟೆ ಜಾಗ ಬೇಕಿದೆ. 25ಅಡಿ ಅಗಲದ ರಸ್ತೆ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ತಿಳಿಸಿದರು.

‘ಕೆರೆ ರಕ್ಷಣೆಗೆ ನಾವೆಲ್ಲ ದಶಕದಿಂದ ಹೋರಾಟ ಮಾಡುತ್ತಿದ್ದೇವೆ. ಒತ್ತುವರಿದಾರರ ಪಟ್ಟಿಯಲ್ಲಿ ನಮ್ಮನ್ನೇ ಜಿಲ್ಲಾಡಳಿತ ಸೇರಿಸಿದೆ. ನಾನು ಯಾವುದೇ ಒತ್ತುವರಿ ಮಾಡಿಲ್ಲ. ಕೆಲವರು ಅಧಿಕಾರಿಗಳು ದುರುದ್ದೇಶದಿಂದ ನನ್ನ ಹೆಸರು ಸೇರಿಸಿದ್ದಾರೆ’ ಎಂದು ಹೆಬ್ಬಗೋಡಿ ನಗರಸಭೆಯ ಉಪಾಧ್ಯಕ್ಷ ರಾಜೇಂದ್ರಪ್ಪ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT