ಕೆರೆಯ ಗಡಿರೇಖೆಯನ್ನು ಗುರುತಿಸಲು ಸರ್ವೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಸುತ್ತಲೂ ಗಿಡ-ಮರಗಳನ್ನು ಬೆಳೆಸಲು ಅವಕಾಶ ಕಲ್ಪಿಸಿ, ಮಿನಿ ಅರಣ್ಯೋದ್ಯಾನ ನಿರ್ಮಿಸಲಾಗುವುದು. ಜನರ ಬಳಕೆಯ ಜೊತೆಗೆ ಪ್ರಾಣಿಪಕ್ಷಿಗಳ ಆಶ್ರಯ ತಾಣವಾಗಿಯೂ ಸಮಗ್ರವಾಗಿ ಅಭಿವೃದ್ಧಿಗೊಳಿಸಲು ಯೋಜನೆ ರೂಪಿಸಲಾಗಿದ್ದು, ಈ ಎಲ್ಲಾ ಕಾರ್ಯಗಳಿಗೆ ಸದ್ಯದಲ್ಲೇ ಚಾಲನೆ ನೀಡಲಾಗುವುದು ಎಂದರು.