ಈ ಭಾಗದ ಗ್ರಾಮಗಳ ಜನರ ಜೀವನಾಡಿಯಂತಿದ್ದ ಈ ಕೆರೆಗಳು ನಗರ ಬೆಳೆದಂತೆ ಕೈಗಾರಿಕೆಗಳ ತ್ಯಾಜ್ಯ ಮತ್ತು ಒಳಚರಂಡಿ ನೀರು ಹರಿದು ಕಲುಷಿತಗೊಂಡಿದ್ದವು. ಇವುಗಳ ಪುನರುಜ್ಜೀವನ ಕಾಮಗಾರಿ ಆರಂಭವಾಗಿದ್ದು, ಕೆರೆಯ ಸುತ್ತಲೂ ಏರಿ, ನಡಿಗೆ ಪಥ ನಿರ್ಮಿಸಲಾಗುವುದು. ಅಲ್ಲಲ್ಲಿ ಬೆಂಚ್ಗಳನ್ನು ಅಳವಡಿಸಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.