ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಮಾಜ ಸ್ವಾಸ್ಥ್ಯಕ್ಕೆ ಸ್ವಾಮೀಜಿಗಳು ಶ್ರಮಿಸಲಿ’

Last Updated 12 ಫೆಬ್ರುವರಿ 2018, 10:28 IST
ಅಕ್ಷರ ಗಾತ್ರ

ಶಿಗ್ಗಾವಿ: ‘ಬದುಕು ಎಂದರೆ ತಾಯಿ ಗರ್ಭದಿಂದ ಭೂಗರ್ಭದವರೆಗೆ ಎಂಬ ಸತ್ಯಾಂಶ ಅರಿತರೆ ಮಾತ್ರ ಮನುಷ್ಯ ಮಾನವನಾಗಲು ಸಾಧ್ಯವಿದೆ’ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.

ತಾಲ್ಲೂಕಿನ ಬಂಕಾಪುರದಲ್ಲಿ ಶುಕ್ರವಾರ ನಡೆದ ಶಿರಹಟ್ಟಿಯ ಫಕ್ಕೀರಸಿದ್ಧರಾಮ ಸ್ವಾಮೀಜಿ ತುಲಾಭಾರ ಹಾಗೂ ಭಾವೈಕ್ಯ ಧರ್ಮ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಸಮಾಜ ಸ್ವಾಸ್ಥ್ಯಕ್ಕೆ ಸ್ವಾಮೀಜಿಗಳು ಶ್ರಮಿಸಬೇಕು. ಮನೆಯಿಂದಲೇ ಸಂಸ್ಕಾರ ಪ್ರಾರಂಭವಾಗಬೇಕು’ ಎಂದು ಸಲಹೆ ನೀಡಿದರು.

‘ಜೀವನದಲ್ಲಿ ಎದುರಾಗುವ ಹಸಿವು, ಅರಿವು, ಮರೆವು ಮತ್ತು ಸಾವು ವರವೇ ಹೊರತು ಶಾಪವಲ್ಲ. ಇವುಗಳಿಂದ ಜ್ಞಾನ ಹೆಚ್ಚುವುದರ ಜೊತೆಗೆ ಅನುಭವ ಉಂಟಾಗುತ್ತದೆ. ಆದರೆ, ಎಲ್ಲವನ್ನೂ ಸಮಾನವಾಗಿ ಸ್ವೀಕರಿಸುವ ಮನೋಭಾವ ಪ್ರತಿಯೊಬ್ಬರಲ್ಲಿ ಬೆಳೆಯಬೇಕು’ ಎಂದು ಸಲಹೆ ನೀಡಿದರು.

ಬಾಲೆಹೊಸೂರ ದಿಂಗಾಲೇಶ್ವರ ಸ್ವಾಮೀಜಿ ಮಾತನಾಡಿ, ‘ಮತದಾನದ ಹಕ್ಕನ್ನು ಸದುಪಯೋಗಪಡೆಸಿಕೊಂಡು ಉತ್ತಮ ನಾಯಕರನ್ನು ಆಯ್ಕೆ ಮಾಡಬೇಕು’ಎಂದರು.

ವಿಧಾನ ಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ, ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್‌ ಅಜ್ಜಂಪೀರ್‌ ಖಾದ್ರಿ, ಭರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ, ಬೊಮ್ಮನಹಳ್ಳಿ ಶಿವಯೋಗಿ ದೇವರು ಮಾತನಾಡಿದರು. ನಂತರ ಶಿರಹಟ್ಟಿಯ ಫಕ್ಕೀರಸಿದ್ಧರಾಮ ಸ್ವಾಮೀಜಿ ತುಲಾಭಾರ ಕಾರ್ಯಕ್ರಮ, ವಿವಿಧ ಕ್ಷೇತ್ರದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಗದಿಗೆಪ್ಪ ಕೂಲಿ ಅಧ್ಯಕ್ಷತೆ ವಹಿಸಿದ್ದರು. ಅರಳೆಲೆಮಠದ ರೇವಣಸಿದ್ಧೇಶ್ವರ ಸ್ವಾಮೀಜಿ, ಹಾವೇರಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಶಿಗ್ಗಾವಿ ವಿರಕ್ತಮಠದ ಸಂಗನಬಸವ ಸ್ವಾಮೀಜಿ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಶೋಭಾ ಗಂಜೀಗಟ್ಟಿ, ಬಸನಗೌಡ ದೇಸಾಯಿ, ಪುರಸಭೆ ಅಧ್ಯಕ್ಷೆ ಶಾಬಿರಾಭಿ ಯಲಗಚ್ಚ, ಸದಸ್ಯ ಮಹ್ಮದಗೌಸ ಗುಲ್ಮಿ, ನಾರಾಯಣಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಮೇಶ ಅಂಗಡಿ, ಬಿಜೆಪಿ ತಾಲ್ಲೂಕು ಅಧ್ಯಕ್ಷ ದೇವಣ್ಣ ಚಾಕಲಬ್ಬಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT