<p><strong>ಬೆಂಗಳೂರು:</strong> ಕ್ಯಾನ್ಸರ್ನಿಂದ ಬಳಲುತ್ತಿ ರುವ ಗ್ರಾಮೀಣ ಪ್ರದೇಶದ ಬಡ ಮಕ್ಕಳ ಚಿಕಿತ್ಸೆ ಮತ್ತು ಆರೈಕೆಗಾಗಿ ಶ್ರೀಶಂಕರ ಕ್ಯಾನ್ಸರ್ ಪ್ರತಿಷ್ಠಾನವು ‘ಲಕ್ಷ್ಮಿ ಮಕ್ಕಳ ಆರೋಗ್ಯ ಕೇಂದ್ರ’ವನ್ನು ಗಾಂಧಿನಗರದಲ್ಲಿ ಆರಂಭಿಸಿದೆ.</p>.<p>ಮೂರು ಅಂತಸ್ತಿನ ಸುಸಜ್ಜಿತ ಕಟ್ಟಡ ವನ್ನು ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ ಹಾಗೂ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ಭಾನುವಾರ ಉದ್ಘಾಟಿಸಿದರು.</p>.<p>‘ಕ್ಯಾನ್ಸರ್ನಿಂದ ಬಳಲುತ್ತಿರುವ ಮಕ್ಕಳಿಗೆ ಚಿಕಿತ್ಸೆ ನೀಡಲು ಎಲ್ಲ ಆಧುನಿಕ ವ್ಯವಸ್ಥೆಗಳು ಇಲ್ಲಿವೆ. ಸರ್ಕಾರದಿಂದ ಇಂತಹ ಆಧುನಿಕ ಚಿಕಿತ್ಸಾ ಕೇಂದ್ರ ನಿರ್ಮಾಣ ಮಾಡುವುದು ಕಷ್ಟ. ದಾನಿಗಳ ನೆರವಿನಿಂದ ಇಂತಹ ಚಿಕಿತ್ಸಾ ಕೇಂದ್ರ ನಿರ್ಮಿಸಿರುವುದು ಶ್ಲಾಘನೀಯ’ ಎಂದು ಅಶ್ವತ್ಥ ನಾರಾಯಣ ತಿಳಿಸಿದರು.</p>.<p>ಆರ್.ವಿ. ದೇಶಪಾಂಡೆ,‘ಆರ್ಥಿಕ ಸಮಸ್ಯೆಯಿಂದಾಗಿ ಅನೇಕ ಮಕ್ಕಳು ಕ್ಯಾನ್ಸರ್ ಚಿಕಿತ್ಸೆಯಿಂದ ವಂಚಿತರಾಗಿ ದ್ದಾರೆ. ಇಬ್ಬರು ಕ್ಯಾನ್ಸರ್ಪೀಡಿತ ಮಕ್ಕಳನ್ನು ದತ್ತು ಪಡೆದು, ಅವರ ಚಿಕಿತ್ಸೆ ವೆಚ್ಚ ಭರಿಸಲಾಗುವುದು’ ಎಂದರು.</p>.<p>‘ಕ್ಯಾನ್ಸರ್ ಚಿಕಿತ್ಸೆಗೆ ಆರು ತಿಂಗಳಿಂದ ಒಂದು ವರ್ಷದವರೆಗೂ ಸಮಯ ಬೇಕು. ಹಾಗಾಗಿ ಗ್ರಾಮೀಣ ಪ್ರದೇಶದ ರೋಗಿಗಳ ಪೋಷಕರು ತಿಂಗಳುಗಟ್ಟಲೆ ಆಸ್ಪತ್ರೆಗಳಲ್ಲಿ ಉಳಿಯಲು ವ್ಯವಸ್ಥೆ ಕಲ್ಪಿಸ ಲಾಗಿದೆ. ಚಿಕಿತ್ಸಾ ಕೇಂದ್ರದಲ್ಲಿ ಒಟ್ಟು 35 ಕೊಠಡಿಗಳಿವೆ. ಪ್ರತಿ ಅಂತಸ್ತಿನಲ್ಲಿ ಅಡುಗೆಮನೆ ಒದಗಿಸಲಾಗಿದೆ. ಈ ಸೌಲಭ್ಯಗಳೆಲ್ಲವೂ ಉಚಿತ’ ಎಂದುಶ್ರೀಶಂಕರ ಕ್ಯಾನ್ಸರ್ ಪ್ರತಿಷ್ಠಾನದ ಅಧ್ಯಕ್ಷ<br />ಡಾ.ಬಿ.ಎಸ್.ಸತೀಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತವಾಗಿ ಅಥವಾ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡಲಾಗುವುದು. ಮಕ್ಕಳು ಮನೆಯನ್ನು ಹೋಲುವ ವಾತಾವರಣದಲ್ಲಿ ಆರೈಕೆ ಪಡೆಯಲಿದ್ದಾರೆ. ಆಸ್ಪತ್ರೆಯಿಂದಲೇ ಸಾರಿಗೆ ವ್ಯವಸ್ಥೆ ಕಲ್ಪಿಸ<br />ಲಾಗುತ್ತದೆ’ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕ್ಯಾನ್ಸರ್ನಿಂದ ಬಳಲುತ್ತಿ ರುವ ಗ್ರಾಮೀಣ ಪ್ರದೇಶದ ಬಡ ಮಕ್ಕಳ ಚಿಕಿತ್ಸೆ ಮತ್ತು ಆರೈಕೆಗಾಗಿ ಶ್ರೀಶಂಕರ ಕ್ಯಾನ್ಸರ್ ಪ್ರತಿಷ್ಠಾನವು ‘ಲಕ್ಷ್ಮಿ ಮಕ್ಕಳ ಆರೋಗ್ಯ ಕೇಂದ್ರ’ವನ್ನು ಗಾಂಧಿನಗರದಲ್ಲಿ ಆರಂಭಿಸಿದೆ.</p>.<p>ಮೂರು ಅಂತಸ್ತಿನ ಸುಸಜ್ಜಿತ ಕಟ್ಟಡ ವನ್ನು ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ ಹಾಗೂ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ಭಾನುವಾರ ಉದ್ಘಾಟಿಸಿದರು.</p>.<p>‘ಕ್ಯಾನ್ಸರ್ನಿಂದ ಬಳಲುತ್ತಿರುವ ಮಕ್ಕಳಿಗೆ ಚಿಕಿತ್ಸೆ ನೀಡಲು ಎಲ್ಲ ಆಧುನಿಕ ವ್ಯವಸ್ಥೆಗಳು ಇಲ್ಲಿವೆ. ಸರ್ಕಾರದಿಂದ ಇಂತಹ ಆಧುನಿಕ ಚಿಕಿತ್ಸಾ ಕೇಂದ್ರ ನಿರ್ಮಾಣ ಮಾಡುವುದು ಕಷ್ಟ. ದಾನಿಗಳ ನೆರವಿನಿಂದ ಇಂತಹ ಚಿಕಿತ್ಸಾ ಕೇಂದ್ರ ನಿರ್ಮಿಸಿರುವುದು ಶ್ಲಾಘನೀಯ’ ಎಂದು ಅಶ್ವತ್ಥ ನಾರಾಯಣ ತಿಳಿಸಿದರು.</p>.<p>ಆರ್.ವಿ. ದೇಶಪಾಂಡೆ,‘ಆರ್ಥಿಕ ಸಮಸ್ಯೆಯಿಂದಾಗಿ ಅನೇಕ ಮಕ್ಕಳು ಕ್ಯಾನ್ಸರ್ ಚಿಕಿತ್ಸೆಯಿಂದ ವಂಚಿತರಾಗಿ ದ್ದಾರೆ. ಇಬ್ಬರು ಕ್ಯಾನ್ಸರ್ಪೀಡಿತ ಮಕ್ಕಳನ್ನು ದತ್ತು ಪಡೆದು, ಅವರ ಚಿಕಿತ್ಸೆ ವೆಚ್ಚ ಭರಿಸಲಾಗುವುದು’ ಎಂದರು.</p>.<p>‘ಕ್ಯಾನ್ಸರ್ ಚಿಕಿತ್ಸೆಗೆ ಆರು ತಿಂಗಳಿಂದ ಒಂದು ವರ್ಷದವರೆಗೂ ಸಮಯ ಬೇಕು. ಹಾಗಾಗಿ ಗ್ರಾಮೀಣ ಪ್ರದೇಶದ ರೋಗಿಗಳ ಪೋಷಕರು ತಿಂಗಳುಗಟ್ಟಲೆ ಆಸ್ಪತ್ರೆಗಳಲ್ಲಿ ಉಳಿಯಲು ವ್ಯವಸ್ಥೆ ಕಲ್ಪಿಸ ಲಾಗಿದೆ. ಚಿಕಿತ್ಸಾ ಕೇಂದ್ರದಲ್ಲಿ ಒಟ್ಟು 35 ಕೊಠಡಿಗಳಿವೆ. ಪ್ರತಿ ಅಂತಸ್ತಿನಲ್ಲಿ ಅಡುಗೆಮನೆ ಒದಗಿಸಲಾಗಿದೆ. ಈ ಸೌಲಭ್ಯಗಳೆಲ್ಲವೂ ಉಚಿತ’ ಎಂದುಶ್ರೀಶಂಕರ ಕ್ಯಾನ್ಸರ್ ಪ್ರತಿಷ್ಠಾನದ ಅಧ್ಯಕ್ಷ<br />ಡಾ.ಬಿ.ಎಸ್.ಸತೀಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತವಾಗಿ ಅಥವಾ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡಲಾಗುವುದು. ಮಕ್ಕಳು ಮನೆಯನ್ನು ಹೋಲುವ ವಾತಾವರಣದಲ್ಲಿ ಆರೈಕೆ ಪಡೆಯಲಿದ್ದಾರೆ. ಆಸ್ಪತ್ರೆಯಿಂದಲೇ ಸಾರಿಗೆ ವ್ಯವಸ್ಥೆ ಕಲ್ಪಿಸ<br />ಲಾಗುತ್ತದೆ’ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>