<p><strong>ಬೆಂಗಳೂರು:</strong> ಏರ್ಯ ಆಳ್ವ ಫೌಂಡೇಷನ್ ನೀಡುವ ‘ಏರ್ಯ ಲಕ್ಷ್ಮೀನಾರಾಯಣ ಆಳ್ವ ಶತಮಾನೋತ್ಸವ ಗೌರವ ಪ್ರಶಸ್ತಿ’ಗೆ ಸಾಹಿತಿ ನಾ. ದಾಮೋದರ ಶೆಟ್ಟಿ ಹಾಗೂ ಜಾನಪದ ವಿದ್ವಾಂಸ ಕೆ. ಚಿನ್ನಪ್ಪ ಗೌಡ ಆಯ್ಕೆಯಾಗಿದ್ದಾರೆ.</p>.<p>ಈ ಪ್ರಶಸ್ತಿ ತಲಾ ₹1 ಲಕ್ಷ ಒಳಗೊಂಡಿದೆ. ಕರಾವಳಿಯ ಸಾಹಿತಿ ಹಾಗೂ ಸಹಕಾರಿ ಸಂಘಗಳ ನೇತಾರರಾಗಿದ್ದ ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಪ್ರಶಸ್ತಿ ನೀಡಲಾಗುತ್ತಿದೆ. </p>.<p>ಇದೇ 28ರಂದು ಮಂಗಳೂರಿನ ಬಂಟ್ವಾಳ ಸಮೀಪದ ಏರ್ಯಬೀಡು ತರವಾಡು ಮನೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಾಹಿತಿ ಹಂಪ ನಾಗರಾಜಯ್ಯ ಅವರು ಅಧ್ಯಕ್ಷತೆ ವಹಿಸುತ್ತಾರೆ. ಆನಂದಿ ಎಲ್. ಆಳ್ವ ಅವರು ಸಮಾರಂಭ ಉದ್ಘಾಟಿಸುತ್ತಾರೆ.</p>.<p>ನಾ. ದಾಮೋದರ ಶೆಟ್ಟಿ ಅವರು ಸಂಪಾದಿಸಿರುವ ‘ಏರ್ಯ ಸಾಹಿತ್ಯ ಮರುಚಿಂತನ’ ಕೃತಿಯನ್ನು ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಬಿ.ಎ. ವಿವೇಕ ರೈ ಅವರು ಜನಾರ್ಪಣೆ ಮಾಡಲಿದ್ದಾರೆ ಎಂದು ಫೌಂಡೇಷನ್ ಅಧ್ಯಕ್ಷ ಏರ್ಯ ಬಾಲಕೃಷ್ಣ ಹೆಗ್ಡೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಏರ್ಯ ಆಳ್ವ ಫೌಂಡೇಷನ್ ನೀಡುವ ‘ಏರ್ಯ ಲಕ್ಷ್ಮೀನಾರಾಯಣ ಆಳ್ವ ಶತಮಾನೋತ್ಸವ ಗೌರವ ಪ್ರಶಸ್ತಿ’ಗೆ ಸಾಹಿತಿ ನಾ. ದಾಮೋದರ ಶೆಟ್ಟಿ ಹಾಗೂ ಜಾನಪದ ವಿದ್ವಾಂಸ ಕೆ. ಚಿನ್ನಪ್ಪ ಗೌಡ ಆಯ್ಕೆಯಾಗಿದ್ದಾರೆ.</p>.<p>ಈ ಪ್ರಶಸ್ತಿ ತಲಾ ₹1 ಲಕ್ಷ ಒಳಗೊಂಡಿದೆ. ಕರಾವಳಿಯ ಸಾಹಿತಿ ಹಾಗೂ ಸಹಕಾರಿ ಸಂಘಗಳ ನೇತಾರರಾಗಿದ್ದ ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಪ್ರಶಸ್ತಿ ನೀಡಲಾಗುತ್ತಿದೆ. </p>.<p>ಇದೇ 28ರಂದು ಮಂಗಳೂರಿನ ಬಂಟ್ವಾಳ ಸಮೀಪದ ಏರ್ಯಬೀಡು ತರವಾಡು ಮನೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಾಹಿತಿ ಹಂಪ ನಾಗರಾಜಯ್ಯ ಅವರು ಅಧ್ಯಕ್ಷತೆ ವಹಿಸುತ್ತಾರೆ. ಆನಂದಿ ಎಲ್. ಆಳ್ವ ಅವರು ಸಮಾರಂಭ ಉದ್ಘಾಟಿಸುತ್ತಾರೆ.</p>.<p>ನಾ. ದಾಮೋದರ ಶೆಟ್ಟಿ ಅವರು ಸಂಪಾದಿಸಿರುವ ‘ಏರ್ಯ ಸಾಹಿತ್ಯ ಮರುಚಿಂತನ’ ಕೃತಿಯನ್ನು ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಬಿ.ಎ. ವಿವೇಕ ರೈ ಅವರು ಜನಾರ್ಪಣೆ ಮಾಡಲಿದ್ದಾರೆ ಎಂದು ಫೌಂಡೇಷನ್ ಅಧ್ಯಕ್ಷ ಏರ್ಯ ಬಾಲಕೃಷ್ಣ ಹೆಗ್ಡೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>