ಟಿಕೆಟ್ ಕೈತಪ್ಪಲಿದೆ ಎಂದು ಗೊತ್ತಾದ ಕೂಡಲೇ, ಕಾಂಗ್ರೆಸ್ನತ್ತ ಮುಖ ಮಾಡಿದ್ದ ಹಾಲಪ್ಪ ಸೊರಬ ಕ್ಷೇತ್ರದಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹಾಗೂ ತೀರ್ಥಹಳ್ಳಿ ಶಾಸಕ ಕಿಮ್ಮನೆ ರತ್ನಾಕರ್ ಇದಕ್ಕೆ ಸಹಮತ ಸೂಚಿಸಿದ್ದರು. ಸಿದ್ದರಾಮಯ್ಯ ಸಮ್ಮತಿ ಸೂಚಿಸಿರಲಿಲ್ಲ. ಏತನ್ಮಧ್ಯೆ, ಹಾಲಪ್ಪ ಅವರನ್ನು ರಾತ್ರಿ ಕರೆಸಿಕೊಂಡ ಯಡಿ ಯೂರಪ್ಪ, ಸಂಧಾನ ನಡೆಸಿದರು.