<p><strong>ಬೆಂಗಳೂರು:</strong> ‘ತೋಟಗಾರಿಕೆ ಇಲಾಖೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದ ಅಭ್ಯರ್ಥಿಗಳು ತಮ್ಮ ವ್ಯಕ್ತಿತ್ವದ ಘನತೆ ಹೆಚ್ಚಿಸಿಕೊಂಡಿದ್ದಾರೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹೇಳಿದರು.</p>.<p>ಸ್ವಾತಂತ್ರ್ಯೋತ್ಸವದ ಅಂಗವಾಗಿ ಲಾಲ್ಬಾಗ್ನಲ್ಲಿ ನಡೆಯುತ್ತಿರುವ ‘ವೀರರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ವಿಷಯ ಆಧಾರಿತ ಫಲಪುಷ್ಪ ಪ್ರದರ್ಶನದಲ್ಲಿ ನಡೆದ ಸ್ಪರ್ಧೆಗಳಲ್ಲಿ ವಿಜೇತರಿಗೆ ಶನಿವಾರ ಬಹುಮಾನ ವಿತರಿಸಿ ಅವರು ಮಾತನಾಡಿದರು.</p>.<p>‘ಗಿಡ-ಮರಗಳು, ಉದ್ಯಾನಗಳನ್ನು ಪೋಷಿಸುವ ಸ್ಪರ್ಧೆಗಳಲ್ಲಿ ಇಂತಹ ಸ್ಪರ್ಧೆಗಳಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳುವ ಮೂಲಕ ಮುಂದಿನ ಪೀಳಿಗೆಗೆ ಸಂಸ್ಕೃತಿಯ ಉಳಿವಿನ ಕುರಿತಾದ ಕಾಳಜಿಯನ್ನು ಪರಿಚಯಿಸಬೇಕು. ಲಾಲ್ಬಾಗ್ನಲ್ಲಿ ಆಯೋಜಿಸುವ ಫಲಪುಷ್ಪ ಪ್ರದರ್ಶನದಲ್ಲಿ ಚರಿತ್ರೆಯನ್ನು ಪುಷ್ಪಗಳಲ್ಲಿ ಮರು ಸೃಷ್ಟಿಸಲಾಗುತ್ತದೆ’ ಎಂದರು.</p>.<p>ಗಾಜಿನ ಮನೆಯ ಪ್ರದರ್ಶಿಕೆಗಳು, ತೋಟಗಳ ಸ್ಪರ್ಧೆಗಳು, ಇಕೆಬಾನ, ಪುಷ್ಪ ಭಾರತಿ, ಪುಷ್ಪ ರಂಗೋಲಿ, ತರಕಾರಿ ಕೆತ್ತನೆ, ಡಚ್ ಹೂವಿನ ಜೋಡಣೆ, ಒಣ ಹೂವಿನ ಜೋಡಣೆ, ಥಾಯ್ಆರ್ಟ್, ಜಾನೂರ್, ಬೋನ್ಸಾಯ್ ಗಿಡಗಳ ಪ್ರದರ್ಶನ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರು ಬಹುಮಾನ ಪಡೆದರು.</p>.<p>ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಎಂ. ಜಗದೀಶ್, ಇಲಾಖೆಯ ಹೆಚ್ಚುವರಿಗೆ ನಿರ್ದೇಶಕಿ ನಂದಾ, ಲಾಲ್ಬಾಗ್ ಉಪನಿರ್ದೇಶಕ ಎಚ್.ಟಿ. ಬಾಲಕೃಷ್ಣ ಉಪಸ್ಥಿತರಿದ್ದರು.</p>.<div><div class="bigfact-title">‘62 ಸಾವಿರ ಮಂದಿ ಭೇಟಿ’</div><div class="bigfact-description">‘ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಲು ಶನಿವಾರ 62120 ಮಂದಿ ಭೇಟಿ ನೀಡಿದ್ದರು. ಒಟ್ಟು ₹33.84 ಲಕ್ಷ ಪ್ರವೇಶ ಶುಲ್ಕ ಸಂಗ್ರಹವಾಗಿದೆ’ ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಎಂ. ಜಗದೀಶ್ ತಿಳಿಸಿದರು. </div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ತೋಟಗಾರಿಕೆ ಇಲಾಖೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದ ಅಭ್ಯರ್ಥಿಗಳು ತಮ್ಮ ವ್ಯಕ್ತಿತ್ವದ ಘನತೆ ಹೆಚ್ಚಿಸಿಕೊಂಡಿದ್ದಾರೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹೇಳಿದರು.</p>.<p>ಸ್ವಾತಂತ್ರ್ಯೋತ್ಸವದ ಅಂಗವಾಗಿ ಲಾಲ್ಬಾಗ್ನಲ್ಲಿ ನಡೆಯುತ್ತಿರುವ ‘ವೀರರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ವಿಷಯ ಆಧಾರಿತ ಫಲಪುಷ್ಪ ಪ್ರದರ್ಶನದಲ್ಲಿ ನಡೆದ ಸ್ಪರ್ಧೆಗಳಲ್ಲಿ ವಿಜೇತರಿಗೆ ಶನಿವಾರ ಬಹುಮಾನ ವಿತರಿಸಿ ಅವರು ಮಾತನಾಡಿದರು.</p>.<p>‘ಗಿಡ-ಮರಗಳು, ಉದ್ಯಾನಗಳನ್ನು ಪೋಷಿಸುವ ಸ್ಪರ್ಧೆಗಳಲ್ಲಿ ಇಂತಹ ಸ್ಪರ್ಧೆಗಳಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳುವ ಮೂಲಕ ಮುಂದಿನ ಪೀಳಿಗೆಗೆ ಸಂಸ್ಕೃತಿಯ ಉಳಿವಿನ ಕುರಿತಾದ ಕಾಳಜಿಯನ್ನು ಪರಿಚಯಿಸಬೇಕು. ಲಾಲ್ಬಾಗ್ನಲ್ಲಿ ಆಯೋಜಿಸುವ ಫಲಪುಷ್ಪ ಪ್ರದರ್ಶನದಲ್ಲಿ ಚರಿತ್ರೆಯನ್ನು ಪುಷ್ಪಗಳಲ್ಲಿ ಮರು ಸೃಷ್ಟಿಸಲಾಗುತ್ತದೆ’ ಎಂದರು.</p>.<p>ಗಾಜಿನ ಮನೆಯ ಪ್ರದರ್ಶಿಕೆಗಳು, ತೋಟಗಳ ಸ್ಪರ್ಧೆಗಳು, ಇಕೆಬಾನ, ಪುಷ್ಪ ಭಾರತಿ, ಪುಷ್ಪ ರಂಗೋಲಿ, ತರಕಾರಿ ಕೆತ್ತನೆ, ಡಚ್ ಹೂವಿನ ಜೋಡಣೆ, ಒಣ ಹೂವಿನ ಜೋಡಣೆ, ಥಾಯ್ಆರ್ಟ್, ಜಾನೂರ್, ಬೋನ್ಸಾಯ್ ಗಿಡಗಳ ಪ್ರದರ್ಶನ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರು ಬಹುಮಾನ ಪಡೆದರು.</p>.<p>ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಎಂ. ಜಗದೀಶ್, ಇಲಾಖೆಯ ಹೆಚ್ಚುವರಿಗೆ ನಿರ್ದೇಶಕಿ ನಂದಾ, ಲಾಲ್ಬಾಗ್ ಉಪನಿರ್ದೇಶಕ ಎಚ್.ಟಿ. ಬಾಲಕೃಷ್ಣ ಉಪಸ್ಥಿತರಿದ್ದರು.</p>.<div><div class="bigfact-title">‘62 ಸಾವಿರ ಮಂದಿ ಭೇಟಿ’</div><div class="bigfact-description">‘ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಲು ಶನಿವಾರ 62120 ಮಂದಿ ಭೇಟಿ ನೀಡಿದ್ದರು. ಒಟ್ಟು ₹33.84 ಲಕ್ಷ ಪ್ರವೇಶ ಶುಲ್ಕ ಸಂಗ್ರಹವಾಗಿದೆ’ ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಎಂ. ಜಗದೀಶ್ ತಿಳಿಸಿದರು. </div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>