‘ಆಗಸ್ಟ್ನಲ್ಲಿ ಪ್ರದರ್ಶನ ನಡೆಸಲು ಬಹುತೇಕ ಸಿದ್ಧತೆಗಳು ಅಂತಿಮ ಹಂತ ತಲುಪಿರುತ್ತಿತ್ತು. ಕೋವಿಡ್ ಮೂರನೇ ಅಲೆಯ ಸಂಭವ ಇರುವುದರಿಂದ ಫಲಪುಷ್ಪ ಪ್ರದರ್ಶನಕ್ಕೆ ಯಾವುದೇ ತಯಾರಿ ನಡೆದಿಲ್ಲ. ಪ್ರದರ್ಶನ ನಡೆಯುವುದು ಬಹುತೇಕ ಅನುಮಾನ. ಇಲಾಖೆ ಹಾಗೂ ಮೈಸೂರು ಉದ್ಯಾನ ಕಲಾ ಸಂಘದ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಈ ನಿರ್ಣಯ ಅಂತಿಮಗೊಳ್ಳಲಿದೆ’ ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.