‘ಈ ಬಾರಿಯ ಫಲಪುಷ್ಪ ಪ್ರದರ್ಶನಕ್ಕೆ ಸುಮಾರು ₹2.5 ಕೋಟಿ ವೆಚ್ಚವಾಗಲಿದೆ. ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ದೇಶದ ಬೇರೆ ಬೇರೆ ರಾಜ್ಯಗಳಿಂದ ತರಹೇವಾರಿ ಹೂವಿನ ಕುಂಡಗಳನ್ನು ಈಗಾಗಲೇ ತೆಗೆದುಕೊಂಡು ಬರಲಾಗಿದೆ. ಗಾಜಿನ ಮನೆಯ ಒಳಾಂಗಣದಲ್ಲಿ ವಿಧಾನಸೌಧ, 14 ಅಡಿ ಎತ್ತರದ ಕೆಂಗಲ್ ಹನುಮಂತಯ್ಯ ಪ್ರತಿಮೆ, ಶಿವಪುರ ಸತ್ಯಾಗ್ರಹ ಸೌಧ, ಕೋಲಾರದ ಹಟ್ಟಿ ಚಿನ್ನದ ಗಣಿ ರಾಷ್ಟ್ರೀಕರಣದಂತಹ ಐತಿಹಾಸಿಕ ಘಟನೆಗಳನ್ನು ಹೂವಿನ ಕಲಾಕೃತಿಗಳಲ್ಲಿ ಮರುಸೃಷ್ಟಿಸಲಾಗುವುದು’ ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಎಂ. ಜಗದೀಶ್ ಮಾಹಿತಿ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.