<p><strong>ಬೆಂಗಳೂರು:</strong> ಲಾಲ್ಬಾಗ್ನಲ್ಲಿ ನಡೆಯುತ್ತಿರುವ ‘ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನ’ಕ್ಕೆ ಬಕ್ರೀದ್ ರಜೆ ಇದ್ದ ಕಾರಣ ಸೋಮವಾರ 50,500 ಮಂದಿ ಭೇಟಿ ನೀಡಿದರು. ಭಾನುವಾರಕ್ಕೆಹೋಲಿಸಿದರೆ ಉದ್ಯಾನಕ್ಕೆ ಭೇಟಿ ನೀಡಿದವರ ಸಂಖ್ಯೆ ಕಡಿಮೆ ಇತ್ತು.</p>.<p>ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಯಚಾಮರಾಜ ಒಡೆಯರ್ ಅವರ ನೂರಕ್ಕೂ ಹೆಚ್ಚಿನ ಛಾಯಾಚಿತ್ರಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ಒಡೆಯರ್ ಭಾವಚಿತ್ರದ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಜನ ಮುಗಿಬಿದ್ದರು. ಇದಕ್ಕಾಗಿ ಸಾರ್ವಜನಿಕ ಸಂಪರ್ಕ ಇಲಾಖೆಯು ಸೆಲ್ಫಿ ಸ್ಟ್ಯಾಂಡ್ ವ್ಯವಸ್ಥೆ ಮಾಡಿತ್ತು.</p>.<p>ಊಟಿ, ಕೆಮ್ಮಣ್ಣುಗುಂಡಿ, ನಂದಿ ಬೆಟ್ಟ, ಕೆಆರ್ಎಸ್ ಹಾಗೂ ವಿವಿಧ ಉದ್ಯಾನಗಳ ಬಗ್ಗೆ ಮಾಹಿತಿ ಒದಗಿಸುವ ‘ಗಿರಿಧಾಮಗಳ ಮಾಹಿತಿ ಕೇಂದ್ರ’ವನ್ನು ತೆರೆಯಲಾಗಿತ್ತು.</p>.<p>ಉದ್ಯಾನದ ಬೋನ್ಸಾಯ್ ಪಾರ್ಕ್ ಬಳಿಮಾರ್ಗ ಜ್ಯೋತಿ ಕ್ಷೇಮಾಭಿವೃದ್ಧಿ ಟ್ರಸ್ಟ್ ವತಿಯಿಂದ ‘ಅಂಧರ ವಾದ್ಯಗೋಷ್ಠಿ’ ಆಯೋಜಿಸಲಾಗಿತ್ತು. ಸುಮಧುರ ಕಂಠದಿಂದ ಕನ್ನಡ ಚಲನಚಿತ್ರ ಗೀತೆಗಳನ್ನು ಹಾಡಿ ಜನರನ್ನು ರಂಜಿಸಿದರು.</p>.<p><strong>ಫಲಪುಷ್ಪ ಪ್ರದರ್ಶನ ವೀಕ್ಷಣೆ ವಿವರ (ಸೋಮವಾರ)</strong></p>.<p>ವಯಸ್ಕರು;40,350</p>.<p>ಮಕ್ಕಳು; 10,150</p>.<p>ಒಟ್ಟು; 50,500ಸಾವಿರ</p>.<p>ಸಂಗ್ರಹವಾದ ಶುಲ್ಕ;₹27.56 ಲಕ್ಷ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಲಾಲ್ಬಾಗ್ನಲ್ಲಿ ನಡೆಯುತ್ತಿರುವ ‘ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನ’ಕ್ಕೆ ಬಕ್ರೀದ್ ರಜೆ ಇದ್ದ ಕಾರಣ ಸೋಮವಾರ 50,500 ಮಂದಿ ಭೇಟಿ ನೀಡಿದರು. ಭಾನುವಾರಕ್ಕೆಹೋಲಿಸಿದರೆ ಉದ್ಯಾನಕ್ಕೆ ಭೇಟಿ ನೀಡಿದವರ ಸಂಖ್ಯೆ ಕಡಿಮೆ ಇತ್ತು.</p>.<p>ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಯಚಾಮರಾಜ ಒಡೆಯರ್ ಅವರ ನೂರಕ್ಕೂ ಹೆಚ್ಚಿನ ಛಾಯಾಚಿತ್ರಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ಒಡೆಯರ್ ಭಾವಚಿತ್ರದ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಜನ ಮುಗಿಬಿದ್ದರು. ಇದಕ್ಕಾಗಿ ಸಾರ್ವಜನಿಕ ಸಂಪರ್ಕ ಇಲಾಖೆಯು ಸೆಲ್ಫಿ ಸ್ಟ್ಯಾಂಡ್ ವ್ಯವಸ್ಥೆ ಮಾಡಿತ್ತು.</p>.<p>ಊಟಿ, ಕೆಮ್ಮಣ್ಣುಗುಂಡಿ, ನಂದಿ ಬೆಟ್ಟ, ಕೆಆರ್ಎಸ್ ಹಾಗೂ ವಿವಿಧ ಉದ್ಯಾನಗಳ ಬಗ್ಗೆ ಮಾಹಿತಿ ಒದಗಿಸುವ ‘ಗಿರಿಧಾಮಗಳ ಮಾಹಿತಿ ಕೇಂದ್ರ’ವನ್ನು ತೆರೆಯಲಾಗಿತ್ತು.</p>.<p>ಉದ್ಯಾನದ ಬೋನ್ಸಾಯ್ ಪಾರ್ಕ್ ಬಳಿಮಾರ್ಗ ಜ್ಯೋತಿ ಕ್ಷೇಮಾಭಿವೃದ್ಧಿ ಟ್ರಸ್ಟ್ ವತಿಯಿಂದ ‘ಅಂಧರ ವಾದ್ಯಗೋಷ್ಠಿ’ ಆಯೋಜಿಸಲಾಗಿತ್ತು. ಸುಮಧುರ ಕಂಠದಿಂದ ಕನ್ನಡ ಚಲನಚಿತ್ರ ಗೀತೆಗಳನ್ನು ಹಾಡಿ ಜನರನ್ನು ರಂಜಿಸಿದರು.</p>.<p><strong>ಫಲಪುಷ್ಪ ಪ್ರದರ್ಶನ ವೀಕ್ಷಣೆ ವಿವರ (ಸೋಮವಾರ)</strong></p>.<p>ವಯಸ್ಕರು;40,350</p>.<p>ಮಕ್ಕಳು; 10,150</p>.<p>ಒಟ್ಟು; 50,500ಸಾವಿರ</p>.<p>ಸಂಗ್ರಹವಾದ ಶುಲ್ಕ;₹27.56 ಲಕ್ಷ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>