ಲಾಲ್ಬಾಗ್ ಗಾಜಿನ ಮನೆಯಲ್ಲಿ ಗಮನ ಸೆಳೆದ ಡಾ.ಬಿ.ಆರ್. ಅಂಬೇಡ್ಕರ್ ಜ್ಞಾನ ವೃಕ್ಷ ಪ್ರಜಾವಾಣಿ ಚಿತ್ರ/ಪ್ರಶಾಂತ್ ಎಚ್.ಜಿ.
ಲಾಲ್ಬಾಗ್ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ 12 ಲಕ್ಷ ಜನರು ಬರುವ ನಿರೀಕ್ಷೆ ಇದೆ. ದೇಶದ ವಿವಿಧ ರಾಜ್ಯಗಳಿಂದ ವಿವಿಧ ತಳಿಗಳ ಸುಮಾರು 30 ಲಕ್ಷ ಹೂವುಗಳನ್ನು ಫಲಪುಷ್ಪ ಪ್ರದರ್ಶನಕ್ಕೆ ಬಳಸಲಾಗಿದೆ
ಸಿದ್ದರಾಮಯ್ಯ, ಮುಖ್ಯಮಂತ್ರಿ
ಸುಶ್ಮಾ
ಅಂಬೇಡ್ಕರ್ ಅವರ ಜೀವನದ ಸಂಪೂರ್ಣ ಮಾಹಿತಿಯನ್ನು ಪುಷ್ಪಗಳಲ್ಲಿ ಅನಾವರಣಗೊಳಿಸಲಾಗಿದೆ. ಪ್ರತಿಯೊಬ್ಬರೂ ಪ್ರದರ್ಶನಕ್ಕೆ ಭೇಟಿ ನೀಡಿ ಅಂಬೇಡ್ಕರ್ ಅವರ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು
ಸುಶ್ಮಾ ಮಂಗಳೂರು
ಶ್ರಾವಣಿ ಮಹೇಂದ್ರ
ಅಂಬೇಡ್ಕರ್ ಅವರು ಸಂವಿಧಾನ ಬರೆದಿರುವುದು ಕಾನೂನು ಮಂತ್ರಿಗಳಾಗಿದ್ದ ಕುರಿತು ಮಾತ್ರ ಪುಸ್ತಕಗಳಲ್ಲಿ ಓದಿದ್ದೆವು. ಆದರೆ ಅವರ ಹೋರಾಟದ ಬದುಕು ಸಾಧನೆಗಳನ್ನು ಫಲಪುಷ್ಪಗಳಲ್ಲಿ ಚಿತ್ರಿಸಲಾಗಿದೆ. ಇದು ಪ್ರತಿಯೊಬ್ಬರಿಗೆ ಮಾದರಿ
ಶ್ರಾವಣಿ ಮಹೇಂದ್ರ ವಿದ್ಯಾರ್ಥಿನಿ
ಮಹಾಲಕ್ಷ್ಮಿ
ಬಾಬಾಸಾಹೇಬ್ ಅಂಬೇಡ್ಕರ್ ಅವರ ವಂಶವೃಕ್ಷ ಸೇರಿದಂತೆ ಅವರ ಕುಟುಂಬದ ಸಂಪೂರ್ಣ ಮಾಹಿತಿಯನ್ನು ಪ್ರದರ್ಶನದಲ್ಲಿ ಅನಾವರಣ ಮಾಡಲಾಗಿದೆ.
ಮಹಾಲಕ್ಷ್ಮಿ ವಿದ್ಯಾರ್ಥಿನಿ
ಮಾವಳ್ಳಿ ಶಂಕರ್
ಡಾ.ಬಿ.ಆರ್. ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಕೊಡುಗೆ ಹೋರಾಟಗಳನ್ನು ಪ್ರದರ್ಶನದಲ್ಲಿ ಪ್ರಸ್ತುತಪಡಿಸಲಾಗಿದೆ. ಸಂವಿಧಾನ ಬುಡಮೇಲು ಮಾಡಲು ಯತ್ನಿಸುವ ಈ ಸಂದರ್ಭದಲ್ಲಿ ಇಲ್ಲಿನ ಪ್ರದರ್ಶನ ಹೆಚ್ಚು ಪ್ರಸ್ತುತವಾಗಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಭೇಟಿ ನೀಡಬೇಕು.
ಮಾವಳ್ಳಿ ಶಂಕರ್ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ