<p><strong>ಬೆಂಗಳೂರು</strong>: ಸ್ವಾತಂತ್ರ್ಯೋತ್ಸವದ ಅಂಗವಾಗಿ ಲಾಲ್ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿದ್ದ ‘ವೀರರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ವಿಷಯ ಆಧಾರಿತ ಫಲಪುಷ್ಪ ಪ್ರದರ್ಶನಕ್ಕೆ ಸೋಮವಾರ ತೆರೆಬಿತ್ತು. 12 ದಿನ ನಡೆದ ಈ ಫಲಪುಷ್ಪ ಪ್ರದರ್ಶನಕ್ಕೆ ಒಟ್ಟು 6.24 ಲಕ್ಷ ಜನ ಭೇಟಿ ನೀಡಿದ್ದು, ಒಟ್ಟು ₹2.78 ಕೋಟಿ ವರಮಾನ ಸಂಗ್ರಹವಾಗಿದೆ.</p>.<p>ಗಾಜಿನ ಮನೆಯ ಆವರಣದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಜೀವನ ಗಾಥೆಯನ್ನು ಬಣ್ಣ–ಬಣ್ಣದ ಹೂವುಗಳಲ್ಲಿ ಅನಾವರಣಗೊಳಿಸಲಾಗಿತ್ತು. ಆಗಸ್ಟ್ 07ರಿಂದ 18ರವರೆಗೆ ನಡೆದ ಫಲಪುಷ್ಪ ಪ್ರದರ್ಶನವನ್ನು ಕಣ್ತುಂಬಿಕೊಳ್ಳಲು ನಿತ್ಯವೂ ಲಕ್ಷಾಂತರ ಜನ ಭಾಗವಹಿಸಿದ್ದರು.</p>.<p>ಪುಷ್ಪಗಳಲ್ಲಿ ಅರಳಿದ ಕಿತ್ತೂರು ಕೋಟೆ, ಚನ್ನಮ್ಮನ ಐಕ್ಯ ಸ್ಮಾರಕ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುತಾತ್ಮರಾದ ಸನ್ನಿವೇಶವನ್ನು ಮರುಸೃಷ್ಟಿಸಲಾಗಿತ್ತು. ಇದನ್ನು ವೀಕ್ಷಿಸಲು ಲಕ್ಷಾಂತರ ಮಂದಿ ಬಂದಿದ್ದರು.</p>.<p>‘ಅಂತಿಮ ದಿನವಾದ ಸೋಮವಾರ 27,310 ಜನ ಫಲಪುಷ್ಪ ಪ್ರದರ್ಶನ ವೀಕ್ಷಿಸಿದರು. ₹3.45 ಲಕ್ಷ ಪ್ರವೇಶ ಶುಲ್ಕ ಸಂಗ್ರಹವಾಗಿದೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸ್ವಾತಂತ್ರ್ಯೋತ್ಸವದ ಅಂಗವಾಗಿ ಲಾಲ್ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿದ್ದ ‘ವೀರರಾಣಿ ಕಿತ್ತೂರು ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ವಿಷಯ ಆಧಾರಿತ ಫಲಪುಷ್ಪ ಪ್ರದರ್ಶನಕ್ಕೆ ಸೋಮವಾರ ತೆರೆಬಿತ್ತು. 12 ದಿನ ನಡೆದ ಈ ಫಲಪುಷ್ಪ ಪ್ರದರ್ಶನಕ್ಕೆ ಒಟ್ಟು 6.24 ಲಕ್ಷ ಜನ ಭೇಟಿ ನೀಡಿದ್ದು, ಒಟ್ಟು ₹2.78 ಕೋಟಿ ವರಮಾನ ಸಂಗ್ರಹವಾಗಿದೆ.</p>.<p>ಗಾಜಿನ ಮನೆಯ ಆವರಣದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಜೀವನ ಗಾಥೆಯನ್ನು ಬಣ್ಣ–ಬಣ್ಣದ ಹೂವುಗಳಲ್ಲಿ ಅನಾವರಣಗೊಳಿಸಲಾಗಿತ್ತು. ಆಗಸ್ಟ್ 07ರಿಂದ 18ರವರೆಗೆ ನಡೆದ ಫಲಪುಷ್ಪ ಪ್ರದರ್ಶನವನ್ನು ಕಣ್ತುಂಬಿಕೊಳ್ಳಲು ನಿತ್ಯವೂ ಲಕ್ಷಾಂತರ ಜನ ಭಾಗವಹಿಸಿದ್ದರು.</p>.<p>ಪುಷ್ಪಗಳಲ್ಲಿ ಅರಳಿದ ಕಿತ್ತೂರು ಕೋಟೆ, ಚನ್ನಮ್ಮನ ಐಕ್ಯ ಸ್ಮಾರಕ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುತಾತ್ಮರಾದ ಸನ್ನಿವೇಶವನ್ನು ಮರುಸೃಷ್ಟಿಸಲಾಗಿತ್ತು. ಇದನ್ನು ವೀಕ್ಷಿಸಲು ಲಕ್ಷಾಂತರ ಮಂದಿ ಬಂದಿದ್ದರು.</p>.<p>‘ಅಂತಿಮ ದಿನವಾದ ಸೋಮವಾರ 27,310 ಜನ ಫಲಪುಷ್ಪ ಪ್ರದರ್ಶನ ವೀಕ್ಷಿಸಿದರು. ₹3.45 ಲಕ್ಷ ಪ್ರವೇಶ ಶುಲ್ಕ ಸಂಗ್ರಹವಾಗಿದೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>