<p><strong>ಬೆಂಗಳೂರು: ‘</strong>ಸಿಲಿಕಾನ್ ಸಿಟಿ’ಯ ಪ್ರೇಮಿಗಳ ನೆಚ್ಚಿನ ತಾಣ, ವಾಯುವಿಹಾರಿಗಳ ಸ್ವರ್ಗ ಲಾಲ್ಬಾಗ್ನಲ್ಲಿ ಸಾಲು ಸಾಲು ಸಮಸ್ಯೆಗಳಿದ್ದು, ಅನುದಾನದ ಮತ್ತು ಸಿಬ್ಬಂದಿಯ ಕೊರತೆಯೇ ಇದಕ್ಕೆ ಕಾರಣ ಎಂದು ವಾಯುವಿಹಾರಿಗಳೇ ತಿಳಿಸಿದ್ದಾರೆ.</p>.<p>‘ಸರ್ಕಾರದ ಅನುದಾನದ ಕೊರತೆ ಮತ್ತು ತೋಟಗಾರಿಕೆ ಇಲಾಖೆ ಸಚಿವ ಮುನಿರತ್ನ ಅವರ ನಿರ್ಲಕ್ಷ್ಯದಿಂದ ಸಸ್ಯತೋಟ ಸೊರಗುತ್ತಿದೆ. ರಸ್ತೆ, ಪಾದಚಾರಿ ಮಾರ್ಗ, ದಾಸವಾಳ ವನದಲ್ಲಿ ಕೊಳಚೆ ನೀರು ತುಂಬಿಕೊಂಡಿದೆ’ ಎಂದು ಸಿದ್ಧಾಪುರದ ನಿವಾಸಿ ಸುಬ್ರಹ್ಮಣ್ಯಸ್ವಾಮಿ ಆರೋಪಿಸಿದರು.</p>.<p>‘240 ಎಕರೆ ಹರಡಿಕೊಂಡಿರುವ ಸಸ್ಯಕಾಶಿಯಲ್ಲಿ ಸತತ ಮಳೆಯಿಂದ ಅವ್ಯವಸ್ಥೆ ಸೃಷ್ಟಿಯಾಗಿದೆ. ಸರ್ಕಾರ ಅನುದಾನ ಬಿಡುಗಡೆಗೊಳಿಸಿ ಇದರ ಅಭಿವೃದ್ಧಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>‘ಸತತವಾಗಿ ಸುರಿದ ಮಳೆಯಿಂದ ಲಾಲ್ಬಾಗ್ನ ಮೂಲ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳು ಕುಂಟುತ್ತಾ ಸಾಗಿವೆ. ಅಧಿಕಾರಿಗಳು ಪರಿಶೀಲಿಸಿ ನಿರ್ವಹಣಾ ಕಾಮಗಾರಿ ಕೈಗೊಂಡಿದ್ದಾರೆ. ಲಾಲ್ಬಾಗ್ ಹಿಂದಿಗಿಂತಲೂ ಈಗ ಸ್ವಚ್ಛ, ಸುಂದರವಾಗಿ ಕಾಣುತ್ತಿದೆ’ ಎಂದು ಸಿದ್ದಾಪುರದ ನಿವಾಸಿ ಸುರೇಶ್ ಎಸ್.ಎಂ. ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>‘ಲಾಲ್ಬಾಗ್ ಸಸ್ಯಕಾಶಿಯನ್ನು ನವದೆಹಲಿಯ ನೆಹರೂ ಪಾರ್ಕ್ ರೀತಿಯಲ್ಲಿ ಅಭಿವೃದ್ಧಿ ಮಾಡಬೇಕು. ಉದ್ಯಾನದಲ್ಲಿ ದೂಳು ಮತ್ತು ನೀರು ನಿರೋಧಕ ಸಿಂಥೆಟಿಕ್ ವಾಕಿಂಗ್ ಟ್ರ್ಯಾಕ್ ನಿರ್ಮಿಸಬೇಕು. ಇದರ ನಿರ್ವಹಣೆಯೂ ಸುಲಭವಾಗಿದೆ’ ಎಂದು ಲಾಲ್ಬಾಗ್ ಹಾಪ್ಕಾಮ್ಸ್ ಅಧ್ಯಕ್ಷ ಎಂ ಬಾಬು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಸಿಲಿಕಾನ್ ಸಿಟಿ’ಯ ಪ್ರೇಮಿಗಳ ನೆಚ್ಚಿನ ತಾಣ, ವಾಯುವಿಹಾರಿಗಳ ಸ್ವರ್ಗ ಲಾಲ್ಬಾಗ್ನಲ್ಲಿ ಸಾಲು ಸಾಲು ಸಮಸ್ಯೆಗಳಿದ್ದು, ಅನುದಾನದ ಮತ್ತು ಸಿಬ್ಬಂದಿಯ ಕೊರತೆಯೇ ಇದಕ್ಕೆ ಕಾರಣ ಎಂದು ವಾಯುವಿಹಾರಿಗಳೇ ತಿಳಿಸಿದ್ದಾರೆ.</p>.<p>‘ಸರ್ಕಾರದ ಅನುದಾನದ ಕೊರತೆ ಮತ್ತು ತೋಟಗಾರಿಕೆ ಇಲಾಖೆ ಸಚಿವ ಮುನಿರತ್ನ ಅವರ ನಿರ್ಲಕ್ಷ್ಯದಿಂದ ಸಸ್ಯತೋಟ ಸೊರಗುತ್ತಿದೆ. ರಸ್ತೆ, ಪಾದಚಾರಿ ಮಾರ್ಗ, ದಾಸವಾಳ ವನದಲ್ಲಿ ಕೊಳಚೆ ನೀರು ತುಂಬಿಕೊಂಡಿದೆ’ ಎಂದು ಸಿದ್ಧಾಪುರದ ನಿವಾಸಿ ಸುಬ್ರಹ್ಮಣ್ಯಸ್ವಾಮಿ ಆರೋಪಿಸಿದರು.</p>.<p>‘240 ಎಕರೆ ಹರಡಿಕೊಂಡಿರುವ ಸಸ್ಯಕಾಶಿಯಲ್ಲಿ ಸತತ ಮಳೆಯಿಂದ ಅವ್ಯವಸ್ಥೆ ಸೃಷ್ಟಿಯಾಗಿದೆ. ಸರ್ಕಾರ ಅನುದಾನ ಬಿಡುಗಡೆಗೊಳಿಸಿ ಇದರ ಅಭಿವೃದ್ಧಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>‘ಸತತವಾಗಿ ಸುರಿದ ಮಳೆಯಿಂದ ಲಾಲ್ಬಾಗ್ನ ಮೂಲ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳು ಕುಂಟುತ್ತಾ ಸಾಗಿವೆ. ಅಧಿಕಾರಿಗಳು ಪರಿಶೀಲಿಸಿ ನಿರ್ವಹಣಾ ಕಾಮಗಾರಿ ಕೈಗೊಂಡಿದ್ದಾರೆ. ಲಾಲ್ಬಾಗ್ ಹಿಂದಿಗಿಂತಲೂ ಈಗ ಸ್ವಚ್ಛ, ಸುಂದರವಾಗಿ ಕಾಣುತ್ತಿದೆ’ ಎಂದು ಸಿದ್ದಾಪುರದ ನಿವಾಸಿ ಸುರೇಶ್ ಎಸ್.ಎಂ. ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>‘ಲಾಲ್ಬಾಗ್ ಸಸ್ಯಕಾಶಿಯನ್ನು ನವದೆಹಲಿಯ ನೆಹರೂ ಪಾರ್ಕ್ ರೀತಿಯಲ್ಲಿ ಅಭಿವೃದ್ಧಿ ಮಾಡಬೇಕು. ಉದ್ಯಾನದಲ್ಲಿ ದೂಳು ಮತ್ತು ನೀರು ನಿರೋಧಕ ಸಿಂಥೆಟಿಕ್ ವಾಕಿಂಗ್ ಟ್ರ್ಯಾಕ್ ನಿರ್ಮಿಸಬೇಕು. ಇದರ ನಿರ್ವಹಣೆಯೂ ಸುಲಭವಾಗಿದೆ’ ಎಂದು ಲಾಲ್ಬಾಗ್ ಹಾಪ್ಕಾಮ್ಸ್ ಅಧ್ಯಕ್ಷ ಎಂ ಬಾಬು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>