‘4ರ ಬೆಳಿಗ್ಗೆ 11 ಗಂಟೆಗೆ ಸಿರಿಧಾನ್ಯ ಹಾಗೂ ಕಾಡು ಕೃಷಿ ಕುರಿತು ವಿಶೇಷ ತರಬೇತಿ ನೀಡಲಾಗುವುದು ಹಾಗೂ ಮಧ್ಯಾಹ್ನ 2.30ಕ್ಕೆ ಸಿರಿಧಾನ್ಯ ಅಡುಗೆ ಸ್ಪರ್ಧೆ ನಡೆಯಲಿದೆ. 5ರಂದು ಬೆಳಿಗ್ಗೆ ಮರಿಗೌಡ ಸ್ಮಾರಕ ಭವನದಲ್ಲಿ ಸಿರಿಧಾನ್ಯಗಳ ಬಳಕೆ ಉಪಯುಕ್ತ ಮತ್ತು ಜಾಗೃತಿ ಕುರಿತು ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮವನ್ನು ಆಹಾರ ತಜ್ಞ ಡಾ.ಖಾದರ್ ಅವರು ನಡೆಸಿಕೊಡಲಿದ್ದಾರೆ’ ಎಂದು ಹೇಳಿದರು.