<p><strong>ಬೆಂಗಳೂರು</strong>: ಗಣರಾಜ್ಯೋತ್ಸವದ ಅಂಗವಾಗಿ ಲಾಲ್ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ‘ತೇಜಸ್ವಿ ವಿಸ್ಮಯ’ ವಿಷಯ ಆಧಾರಿತ ಫಲಪುಷ್ಪಪ್ರದರ್ಶನ ವೀಕ್ಷಿಸಲು ಭಾನುವಾರ 1.14 ಲಕ್ಷ ಜನ ಭೇಟಿ ನೀಡಿದ್ದು, ₹46 ಲಕ್ಷ ಪ್ರವೇಶ ಶುಲ್ಕ ಸಂಗ್ರಹವಾಗಿದೆ.</p><p>ಲಾಲ್ಬಾಗ್ನ ನಾಲ್ಕೂ ಪ್ರವೇಶ ದ್ವಾರಗಳಲ್ಲಿ ಜನಸಂದಣಿ ಹೆಚ್ಚಿತ್ತು. ಲಾಲ್ಬಾಗ್ನ ಮುಖ್ಯ ಗೇಟಿನ ರಸ್ತೆಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದರೂ, ಬೀದಿ ವ್ಯಾಪಾರಿಗಳ ಹಾವಳಿಯಿಂದಾಗಿ ಸಂಚಾರ ದಟ್ಟಣೆ ಉಂಟಾಗಿತ್ತು.</p><p>ಲಾಲ್ಬಾಗ್ ಮೆಟ್ರೊ ನಿಲ್ದಾಣದಲ್ಲಿ ಟಿಕೆಟ್ ಖರೀದಿಗೆ ಪ್ರಯಾಣಿಕರು ಹರಸಾಹಸ ಪಡುತ್ತಿದ್ದರು. ಶಾಂತಿನಗರ ಬಸ್ ನಿಲ್ದಾಣದಿಂದ ಲಾಲ್ಬಾಗ್ನ ಗೇಟಿನವರೆಗೆ, ಉದ್ಯಾನದ ವೆಸ್ಟ್ಗೇಟ್ನ ಪಾದಚಾರಿ ಮಾರ್ಗಗಳಲ್ಲಿ ಕಿರು ಮಾರುಕಟ್ಟೆಗಳು ಸೃಷ್ಟಿಯಾಗಿದ್ದವು.</p><p>ಗಾಜಿನ ಮನೆಯಲ್ಲಿ ಪುಷ್ಪಗಳಲ್ಲಿ ಅರಳಿದ ತೇಜಸ್ವಿ ಅವರ ಜೀವನದ ಪ್ರಮುಖ ಘಟನೆಗಳನ್ನು ನೋಡಲು ಬಂದಿದ್ದ ಜನ ಸರತಿ ಸಾಲಿನಲ್ಲಿ ನಿಂತಿದ್ದರು. ಕಿಕ್ಕಿರಿದು ಸೇರಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಮತ್ತು ತೋಟಗಾರಿಕೆ ಇಲಾಖೆ ಸಿಬ್ಬಂದಿ ಹರಸಾಹಸಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಗಣರಾಜ್ಯೋತ್ಸವದ ಅಂಗವಾಗಿ ಲಾಲ್ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ‘ತೇಜಸ್ವಿ ವಿಸ್ಮಯ’ ವಿಷಯ ಆಧಾರಿತ ಫಲಪುಷ್ಪಪ್ರದರ್ಶನ ವೀಕ್ಷಿಸಲು ಭಾನುವಾರ 1.14 ಲಕ್ಷ ಜನ ಭೇಟಿ ನೀಡಿದ್ದು, ₹46 ಲಕ್ಷ ಪ್ರವೇಶ ಶುಲ್ಕ ಸಂಗ್ರಹವಾಗಿದೆ.</p><p>ಲಾಲ್ಬಾಗ್ನ ನಾಲ್ಕೂ ಪ್ರವೇಶ ದ್ವಾರಗಳಲ್ಲಿ ಜನಸಂದಣಿ ಹೆಚ್ಚಿತ್ತು. ಲಾಲ್ಬಾಗ್ನ ಮುಖ್ಯ ಗೇಟಿನ ರಸ್ತೆಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದರೂ, ಬೀದಿ ವ್ಯಾಪಾರಿಗಳ ಹಾವಳಿಯಿಂದಾಗಿ ಸಂಚಾರ ದಟ್ಟಣೆ ಉಂಟಾಗಿತ್ತು.</p><p>ಲಾಲ್ಬಾಗ್ ಮೆಟ್ರೊ ನಿಲ್ದಾಣದಲ್ಲಿ ಟಿಕೆಟ್ ಖರೀದಿಗೆ ಪ್ರಯಾಣಿಕರು ಹರಸಾಹಸ ಪಡುತ್ತಿದ್ದರು. ಶಾಂತಿನಗರ ಬಸ್ ನಿಲ್ದಾಣದಿಂದ ಲಾಲ್ಬಾಗ್ನ ಗೇಟಿನವರೆಗೆ, ಉದ್ಯಾನದ ವೆಸ್ಟ್ಗೇಟ್ನ ಪಾದಚಾರಿ ಮಾರ್ಗಗಳಲ್ಲಿ ಕಿರು ಮಾರುಕಟ್ಟೆಗಳು ಸೃಷ್ಟಿಯಾಗಿದ್ದವು.</p><p>ಗಾಜಿನ ಮನೆಯಲ್ಲಿ ಪುಷ್ಪಗಳಲ್ಲಿ ಅರಳಿದ ತೇಜಸ್ವಿ ಅವರ ಜೀವನದ ಪ್ರಮುಖ ಘಟನೆಗಳನ್ನು ನೋಡಲು ಬಂದಿದ್ದ ಜನ ಸರತಿ ಸಾಲಿನಲ್ಲಿ ನಿಂತಿದ್ದರು. ಕಿಕ್ಕಿರಿದು ಸೇರಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಮತ್ತು ತೋಟಗಾರಿಕೆ ಇಲಾಖೆ ಸಿಬ್ಬಂದಿ ಹರಸಾಹಸಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>