ಪ್ರಶಸ್ತಿ ಪುರಸ್ಕೃತ ಕಲಾವಿದ ಜಿ.ಎಂ. ಹೆಗಡೆ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ತಾಂತ್ರಿಕ ಕ್ಷೇತ್ರ ಬಹಳಷ್ಟು ಮುಂದುವರಿದಿದೆ. ಕಲಾವಿದರು ಒಂದೇ ರೀತಿಯ ಶೈಲಿಗೆ ಅಂಟಿಕೊಳ್ಳಬಾರದು. ಎಲ್ಲ ರೀತಿಯ ಕೌಶಲಗಳನ್ನು ಕರಗತ ಮಾಡಿಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಹಲವಾರು ಪ್ರತಿಭಾನ್ವಿತ ಕಲಾವಿದರಿದ್ದಾರೆ. ಅವರನ್ನು ಗುರುತಿಸಿ, ಮುನ್ನೆಲೆಗೆ ತರುವ ಕೆಲಸವಾಗಬೇಕಿದೆ’ ಎಂದು ಹೇಳಿದರು.