<p><strong>ಬೆಂಗಳೂರು</strong>: ‘ರಾಜ್ಯದಲ್ಲಿ ಸಮಗ್ರವಾದ ಭೂಸ್ವಾಧೀನ ನೀತಿಯನ್ನು ಕಾಲಮಿತಿಯೊಳಗೆ ಜಾರಿಗೊಳಿಸಬೇಕು. ಅಲ್ಲಿಯವರೆಗೂ ಹೊಸದಾಗಿ ಭೂಸ್ವಾಧೀನಕ್ಕೆ ಅವಕಾಶ ನೀಡಬಾರದು’ ಎಂದು ಬುಧವಾರ ಇಲ್ಲಿ ಆಗ್ರಹಿಸಲಾಯಿತು.</p>.<p>ಕರ್ನಾಟಕ ಜನಮುಖಿ ಚಿಂತಕರು ಮತ್ತು ಸಾಂಸ್ಕೃತಿಕ ದನಿಗಳ ವೇದಿಕೆ ನಗರದಲ್ಲಿ ಹಮ್ಮಿಕೊಂಡಿದ್ದ ‘ಕರ್ನಾಟಕದ ಸಮತೋಲನ ಅಭಿವೃದ್ಧಿಗೆ ಸಮಗ್ರ ಭೂಸ್ವಾಧೀನ ನೀತಿ ನಿಲುವುಗಳು’ ಕುರಿತ ಚಿಂತನಾ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆದ ಬಳಿಕ, ಮೂರು ಹಕ್ಕೊತ್ತಾಯ ಮಂಡಿಸಲಾಯಿತು.</p>.<p>ದೇವನಹಳ್ಳಿ, ಆನೇಕಲ್, ನೆಲಮಂಗಲ, ಬಿಡದಿ ಸೇರಿದಂತೆ ಹಲವು ಕಡೆ ನಡೆದಿರುವ ಕೃಷಿ ಜಮೀನುಗಳ ಸ್ವಾಧೀನ ಮತ್ತು ನಂತರದ ಬೆಳವಣಿಗೆ ಕುರಿತು ಸಭೆಯಲ್ಲಿ ಪ್ರಸ್ತಾಪಿಸಲಾಯಿತು.</p>.<p>‘ಬಿಡದಿ ಭಾಗದಲ್ಲಿ ಮತ್ತೆ 9,500 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳುವ ಚಟುವಟಿಕೆಗಳನ್ನು ಸರ್ಕಾರ ಆರಂಭಿಸುತ್ತಿದೆ. ಕೆಐಎಡಿಬಿ ಬಳಿಕ ಈಗ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ಇದಕ್ಕಾಗಿ ಬಳಸಿಕೊಳ್ಳುವ ಆತಂಕವಿದೆ’ ಎಂದು ಬಿಡದಿ ಭಾಗದ ರೈತರು ಆತಂಕ ವ್ಯಕ್ತಪಡಿಸಿದರು.</p>.<p>‘ಭೂಮಿ ಕಳೆದುಕೊಂಡವರ ಬದುಕು ನರಕವಾಗುತ್ತಿದೆ. ಇದನ್ನು ತಡೆಯಲು ಸರ್ಕಾರ ಕೃಷಿ, ಕೈಗಾರಿಕೆ ಹಾಗೂ ಭೂಸ್ವಾಧೀನ ನೀತಿಗಳನ್ನು ಪೂರಕವಾಗಿ ರೂಪಿಸಬೇಕು’ ಎಂದು ಸಲಹೆ ನೀಡಿದರು.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸದ್ಯದಲ್ಲೇ ಭೇಟಿ ಮಾಡಿ ಭೂಸ್ವಾಧೀನ ನೀತಿಯ ರೂಪುರೇಷೆಗಳ ಕುರಿತು ಚರ್ಚಿಸಿ, ಹೊಸ ನೀತಿ ಜಾರಿಗೆ ಒತ್ತಡ ಹಾಕುವ ನಿರ್ಧಾರವನ್ನು ವೇದಿಕೆ ಸಂಚಾಲಕರಾದ ಪ್ರಕಾಶ್ ಕಮ್ಮರಡಿ ಪ್ರಕಟಿಸಿದರು.</p>.<p>‘ಕೃಷಿ, ಕೈಗಾರಿಕೆ ಮತ್ತು ನಗರೀಕರಣಕ್ಕೂ ಮಹತ್ವ ಕೊಡಬೇಕಿದೆ. ಆದರೆ, ಭೂ-ಸ್ವಾಧೀನ ಪ್ರಕ್ರಿಯೆ ಆರಂಭಿಸುವ ಮೊದಲು ಸರ್ಕಾರ ರೈತರೊಡನೆ ಸಮಾಲೋಚಿಸಿ ಅವರನ್ನು ಪಾಲುದಾರರನ್ನಾಗಿ ಮಾಡಿಕೊಳ್ಳಬೇಕು’ ಎಂದು ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ಸಲಹೆ ನೀಡಿದರು.</p>.<p>‘ಕೃಷಿಯಿಂದ ಜೀವನ ಕಟ್ಟಿಕೊಳ್ಳುವುದು ಕಷ್ಟಕರವಾಗುತ್ತಿದೆ ಎಂದು ಸ್ವತಃ ರೈತರೇ ತಮ್ಮ ಜಮೀನುಗಳನ್ನು ರಿಯಲ್ ಎಸ್ಟೇಟ್ನವರ ಕೈಗೆ ನೀಡುತ್ತಿದ್ದಾರೆ. ಇದು ನಿಲ್ಲಬೇಕು’ ಎಂದು ಕ್ಯಾಪ್ಟನ್ ಜಿ.ಆರ್. ಗೋಪಿನಾಥ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯದಲ್ಲಿ ಸಮಗ್ರವಾದ ಭೂಸ್ವಾಧೀನ ನೀತಿಯನ್ನು ಕಾಲಮಿತಿಯೊಳಗೆ ಜಾರಿಗೊಳಿಸಬೇಕು. ಅಲ್ಲಿಯವರೆಗೂ ಹೊಸದಾಗಿ ಭೂಸ್ವಾಧೀನಕ್ಕೆ ಅವಕಾಶ ನೀಡಬಾರದು’ ಎಂದು ಬುಧವಾರ ಇಲ್ಲಿ ಆಗ್ರಹಿಸಲಾಯಿತು.</p>.<p>ಕರ್ನಾಟಕ ಜನಮುಖಿ ಚಿಂತಕರು ಮತ್ತು ಸಾಂಸ್ಕೃತಿಕ ದನಿಗಳ ವೇದಿಕೆ ನಗರದಲ್ಲಿ ಹಮ್ಮಿಕೊಂಡಿದ್ದ ‘ಕರ್ನಾಟಕದ ಸಮತೋಲನ ಅಭಿವೃದ್ಧಿಗೆ ಸಮಗ್ರ ಭೂಸ್ವಾಧೀನ ನೀತಿ ನಿಲುವುಗಳು’ ಕುರಿತ ಚಿಂತನಾ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆದ ಬಳಿಕ, ಮೂರು ಹಕ್ಕೊತ್ತಾಯ ಮಂಡಿಸಲಾಯಿತು.</p>.<p>ದೇವನಹಳ್ಳಿ, ಆನೇಕಲ್, ನೆಲಮಂಗಲ, ಬಿಡದಿ ಸೇರಿದಂತೆ ಹಲವು ಕಡೆ ನಡೆದಿರುವ ಕೃಷಿ ಜಮೀನುಗಳ ಸ್ವಾಧೀನ ಮತ್ತು ನಂತರದ ಬೆಳವಣಿಗೆ ಕುರಿತು ಸಭೆಯಲ್ಲಿ ಪ್ರಸ್ತಾಪಿಸಲಾಯಿತು.</p>.<p>‘ಬಿಡದಿ ಭಾಗದಲ್ಲಿ ಮತ್ತೆ 9,500 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳುವ ಚಟುವಟಿಕೆಗಳನ್ನು ಸರ್ಕಾರ ಆರಂಭಿಸುತ್ತಿದೆ. ಕೆಐಎಡಿಬಿ ಬಳಿಕ ಈಗ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ಇದಕ್ಕಾಗಿ ಬಳಸಿಕೊಳ್ಳುವ ಆತಂಕವಿದೆ’ ಎಂದು ಬಿಡದಿ ಭಾಗದ ರೈತರು ಆತಂಕ ವ್ಯಕ್ತಪಡಿಸಿದರು.</p>.<p>‘ಭೂಮಿ ಕಳೆದುಕೊಂಡವರ ಬದುಕು ನರಕವಾಗುತ್ತಿದೆ. ಇದನ್ನು ತಡೆಯಲು ಸರ್ಕಾರ ಕೃಷಿ, ಕೈಗಾರಿಕೆ ಹಾಗೂ ಭೂಸ್ವಾಧೀನ ನೀತಿಗಳನ್ನು ಪೂರಕವಾಗಿ ರೂಪಿಸಬೇಕು’ ಎಂದು ಸಲಹೆ ನೀಡಿದರು.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸದ್ಯದಲ್ಲೇ ಭೇಟಿ ಮಾಡಿ ಭೂಸ್ವಾಧೀನ ನೀತಿಯ ರೂಪುರೇಷೆಗಳ ಕುರಿತು ಚರ್ಚಿಸಿ, ಹೊಸ ನೀತಿ ಜಾರಿಗೆ ಒತ್ತಡ ಹಾಕುವ ನಿರ್ಧಾರವನ್ನು ವೇದಿಕೆ ಸಂಚಾಲಕರಾದ ಪ್ರಕಾಶ್ ಕಮ್ಮರಡಿ ಪ್ರಕಟಿಸಿದರು.</p>.<p>‘ಕೃಷಿ, ಕೈಗಾರಿಕೆ ಮತ್ತು ನಗರೀಕರಣಕ್ಕೂ ಮಹತ್ವ ಕೊಡಬೇಕಿದೆ. ಆದರೆ, ಭೂ-ಸ್ವಾಧೀನ ಪ್ರಕ್ರಿಯೆ ಆರಂಭಿಸುವ ಮೊದಲು ಸರ್ಕಾರ ರೈತರೊಡನೆ ಸಮಾಲೋಚಿಸಿ ಅವರನ್ನು ಪಾಲುದಾರರನ್ನಾಗಿ ಮಾಡಿಕೊಳ್ಳಬೇಕು’ ಎಂದು ನಿವೃತ್ತ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ಸಲಹೆ ನೀಡಿದರು.</p>.<p>‘ಕೃಷಿಯಿಂದ ಜೀವನ ಕಟ್ಟಿಕೊಳ್ಳುವುದು ಕಷ್ಟಕರವಾಗುತ್ತಿದೆ ಎಂದು ಸ್ವತಃ ರೈತರೇ ತಮ್ಮ ಜಮೀನುಗಳನ್ನು ರಿಯಲ್ ಎಸ್ಟೇಟ್ನವರ ಕೈಗೆ ನೀಡುತ್ತಿದ್ದಾರೆ. ಇದು ನಿಲ್ಲಬೇಕು’ ಎಂದು ಕ್ಯಾಪ್ಟನ್ ಜಿ.ಆರ್. ಗೋಪಿನಾಥ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>