<p><strong>ಬೆಂಗಳೂರು:</strong> ಸಂಪಿಗೆ ರಸ್ತೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿ ನಿರ್ಮಾಣ ಮಾಡಲಾಗಿದ್ದ ಕಟ್ಟಡಗಳ ಜಾಗ ಬಿಬಿಎಂಪಿ ಸ್ವತ್ತು ಎಂದು ಪ್ರಾದೇಶಿಕ ಆಯುಕ್ತರ ನ್ಯಾಯಾಲಯ ಘೋಷಿಸಿದ್ದು, ಕೂಡಲೇ ತೆರವುಗೊಳಿಸಿ ವಶಕ್ಕೆ ಪಡುವಂತೆ ಬಿಬಿಎಂಪಿಗೆ ಆದೇಶಿಸಿದೆ.</p>.<p>ಹನುಮಂತಪುರದ ಜಕ್ಕರಾಯನಕೆರೆ ಮತ್ತು ಜಕ್ಕಸಂದ್ರದಲ್ಲಿ ನೂರಾರು ಕೋಟಿ ರೂಪಾಯಿ ಬೆಲೆ ಬಾಳುವ 4.28 ಎಕರೆ ಜಾಗವನ್ನು ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಿ ಬಿಬಿಎಂಪಿ ಪ್ರಾದೇಶಿಕ ಆಯುಕ್ತರ ನ್ಯಾಯಾಲಯದಲ್ಲಿ ದೂರು ದಾಖಲಿಸಿತ್ತು.</p>.<p>ಸುಶೀಲ್ ಮಂತ್ರಿ, ಹಮರ್ ಶೆಲ್ಟರ್ಸ್ ಪ್ರೈವೆಟ್ ಲಿಮಿಟೆಡ್, ಮೈಸೂರು ಸ್ಪಿನ್ನಿಂಗ್ ಮತ್ತು ಮ್ಯಾನುಪ್ಯಾಕ್ಚರಿಂಗ್ ಮಿಲ್ಸ್ ಲಿಮಿಟೆಡ್, ನ್ಯಾಷನಲ್ ಟೆಕ್ಸ್ಟೈಲ್ಸ್ ಲಿಮಿಟೆಡ್ ಸೇರಿ19 ಮಂದಿ ಬಿಬಿಎಂಪಿ ಆಸ್ತಿ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡಿದ್ದಾರೆ ಎಂದು ಬಿಬಿಎಂಪಿ ಆರೋಪಿಸಿತ್ತು.</p>.<p>ಪ್ರಕರಣದ ವಿಚಾರಣೆ ನಡೆಸಿದ ಆಯುಕ್ತರು,ಈ ಜಾಗದಲ್ಲಿ ನಿರ್ಮಾಣ ಮಾಡಲಾಗಿರುವ ಕಟ್ಟಡಗಳನ್ನು ತೆರವುಗೊಳಿಸಿ ವಶಕ್ಕೆ ಪಡೆಯುವಂತೆ ಆದೇಶಿಸಿದ್ದಾರೆ.</p>.<p>‘ನ್ಯಾಯಾಲಯದ ಆದೇಶವನ್ನು ಪಾಲಿಸಲಾಗುತ್ತದೆ’ ಎಂದು ಮೇಯರ್ ಗೌತಮ್ಕುಮಾರ್ ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಂಪಿಗೆ ರಸ್ತೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿ ನಿರ್ಮಾಣ ಮಾಡಲಾಗಿದ್ದ ಕಟ್ಟಡಗಳ ಜಾಗ ಬಿಬಿಎಂಪಿ ಸ್ವತ್ತು ಎಂದು ಪ್ರಾದೇಶಿಕ ಆಯುಕ್ತರ ನ್ಯಾಯಾಲಯ ಘೋಷಿಸಿದ್ದು, ಕೂಡಲೇ ತೆರವುಗೊಳಿಸಿ ವಶಕ್ಕೆ ಪಡುವಂತೆ ಬಿಬಿಎಂಪಿಗೆ ಆದೇಶಿಸಿದೆ.</p>.<p>ಹನುಮಂತಪುರದ ಜಕ್ಕರಾಯನಕೆರೆ ಮತ್ತು ಜಕ್ಕಸಂದ್ರದಲ್ಲಿ ನೂರಾರು ಕೋಟಿ ರೂಪಾಯಿ ಬೆಲೆ ಬಾಳುವ 4.28 ಎಕರೆ ಜಾಗವನ್ನು ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಿ ಬಿಬಿಎಂಪಿ ಪ್ರಾದೇಶಿಕ ಆಯುಕ್ತರ ನ್ಯಾಯಾಲಯದಲ್ಲಿ ದೂರು ದಾಖಲಿಸಿತ್ತು.</p>.<p>ಸುಶೀಲ್ ಮಂತ್ರಿ, ಹಮರ್ ಶೆಲ್ಟರ್ಸ್ ಪ್ರೈವೆಟ್ ಲಿಮಿಟೆಡ್, ಮೈಸೂರು ಸ್ಪಿನ್ನಿಂಗ್ ಮತ್ತು ಮ್ಯಾನುಪ್ಯಾಕ್ಚರಿಂಗ್ ಮಿಲ್ಸ್ ಲಿಮಿಟೆಡ್, ನ್ಯಾಷನಲ್ ಟೆಕ್ಸ್ಟೈಲ್ಸ್ ಲಿಮಿಟೆಡ್ ಸೇರಿ19 ಮಂದಿ ಬಿಬಿಎಂಪಿ ಆಸ್ತಿ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡಿದ್ದಾರೆ ಎಂದು ಬಿಬಿಎಂಪಿ ಆರೋಪಿಸಿತ್ತು.</p>.<p>ಪ್ರಕರಣದ ವಿಚಾರಣೆ ನಡೆಸಿದ ಆಯುಕ್ತರು,ಈ ಜಾಗದಲ್ಲಿ ನಿರ್ಮಾಣ ಮಾಡಲಾಗಿರುವ ಕಟ್ಟಡಗಳನ್ನು ತೆರವುಗೊಳಿಸಿ ವಶಕ್ಕೆ ಪಡೆಯುವಂತೆ ಆದೇಶಿಸಿದ್ದಾರೆ.</p>.<p>‘ನ್ಯಾಯಾಲಯದ ಆದೇಶವನ್ನು ಪಾಲಿಸಲಾಗುತ್ತದೆ’ ಎಂದು ಮೇಯರ್ ಗೌತಮ್ಕುಮಾರ್ ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>