<p><strong>ಬೆಂಗಳೂರು</strong>: ದೇವನಹಳ್ಳಿಯಲ್ಲಿ ಭೂಮಿ ಸ್ವಾಧೀನ ಕೈಬಿಡುವಂತೆ ಮುಖ್ಯಮಂತ್ರಿಯನ್ನು ಆಗ್ರಹಿಸುತ್ತಿರುವ ರೈತ ಪರ ಹೋರಾಟಗಾರರು, ತಾವು ಬೆಳೆದ ಹಣ್ಣು–ಹಂಪಲು, ಹೂವುಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದಲ್ಲಿ ಭೇಟಿಯಾದರು.</p><p>ಭೂಸ್ವಾಧೀನದ ವಿರುದ್ಧ ಹೋರಾಟ ನಡೆಸುತ್ತಿರುವ ರೈತ ಮುಂಖಂಡರೊಂದಿಗೆ ಇಂದು (ಶುಕ್ರವಾರ) ಮಧ್ಯಾಹ್ನ ಮುಖ್ಯಮಂತ್ರಿ ಸಭೆ ನಿಗದಿಯಾಗಿದೆ. ಸಭೆಯಲ್ಲಿ ಭಾಗವಹಿಸುತ್ತಿರುವ ಹೋರಾಟಗಾರರು, ರೈತರು ಮುಖ್ಯಮಂತ್ರಿಗೆ ನೀಡಲು ತಮ್ಮ ಜಮೀನಿನಲ್ಲಿ ಬೆಳೆದಿರುವ ಹೂವು, ಹಣ್ಣು, ತರಕಾರಿಗಳನ್ನು ತಂದಿದ್ದಾರೆ.</p><p>ಇದಕ್ಕೂ ಮೊದಲು ಸ್ವಾತಂತ್ರ್ಯ ಉದ್ಯಾನದ ಬಳಿ ಸಮಾವೇಶಗೊಂಡ ರೈತ ಮುಖಂಡರು, ಅಲ್ಲಿಂದ ವಿಧಾನಸೌಧದತ್ತ ಬಂದರು.</p><p>ನಿಯೋಗದಲ್ಲಿ ರೈತ ಮುಂಡರಾದ ಬಡಗಲಪುರ ನಾಗೇಂದ್ರ, ಬಸವರಾಜಪ್ಪ, ನಟ ಪ್ರಕಾಶ್ ರಾಜ್, ಸ್ಥಳೀಯ ರೈತ ಮುಖಂಡರು, ರೈತ ಮಹಿಳೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದೇವನಹಳ್ಳಿಯಲ್ಲಿ ಭೂಮಿ ಸ್ವಾಧೀನ ಕೈಬಿಡುವಂತೆ ಮುಖ್ಯಮಂತ್ರಿಯನ್ನು ಆಗ್ರಹಿಸುತ್ತಿರುವ ರೈತ ಪರ ಹೋರಾಟಗಾರರು, ತಾವು ಬೆಳೆದ ಹಣ್ಣು–ಹಂಪಲು, ಹೂವುಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದಲ್ಲಿ ಭೇಟಿಯಾದರು.</p><p>ಭೂಸ್ವಾಧೀನದ ವಿರುದ್ಧ ಹೋರಾಟ ನಡೆಸುತ್ತಿರುವ ರೈತ ಮುಂಖಂಡರೊಂದಿಗೆ ಇಂದು (ಶುಕ್ರವಾರ) ಮಧ್ಯಾಹ್ನ ಮುಖ್ಯಮಂತ್ರಿ ಸಭೆ ನಿಗದಿಯಾಗಿದೆ. ಸಭೆಯಲ್ಲಿ ಭಾಗವಹಿಸುತ್ತಿರುವ ಹೋರಾಟಗಾರರು, ರೈತರು ಮುಖ್ಯಮಂತ್ರಿಗೆ ನೀಡಲು ತಮ್ಮ ಜಮೀನಿನಲ್ಲಿ ಬೆಳೆದಿರುವ ಹೂವು, ಹಣ್ಣು, ತರಕಾರಿಗಳನ್ನು ತಂದಿದ್ದಾರೆ.</p><p>ಇದಕ್ಕೂ ಮೊದಲು ಸ್ವಾತಂತ್ರ್ಯ ಉದ್ಯಾನದ ಬಳಿ ಸಮಾವೇಶಗೊಂಡ ರೈತ ಮುಖಂಡರು, ಅಲ್ಲಿಂದ ವಿಧಾನಸೌಧದತ್ತ ಬಂದರು.</p><p>ನಿಯೋಗದಲ್ಲಿ ರೈತ ಮುಂಡರಾದ ಬಡಗಲಪುರ ನಾಗೇಂದ್ರ, ಬಸವರಾಜಪ್ಪ, ನಟ ಪ್ರಕಾಶ್ ರಾಜ್, ಸ್ಥಳೀಯ ರೈತ ಮುಖಂಡರು, ರೈತ ಮಹಿಳೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>