ಕೆಂಗೇರಿ: ಪರಿಹಾರ ನೀಡದೆ ಭೂಸ್ವಾಧೀನಕ್ಕಾಗಿ ಪದ್ಮಶ್ರೀ ಶಿಕ್ಷಣ ಸಂಸ್ಥೆಯ ಅಂಗಳಕ್ಕೆ ಹೋಗಿದ್ದ ಬಿಡಿಎ ಅಧಿಕಾರಿಗಳು ವಾಪಸ್ಸಾದರು.
ಸೂಲಿಕೆರೆ ಪಂಚಾಯಿತಿ ವ್ಯಾಪ್ತಿಯ ಹೊಸಬೈರೋಹಳ್ಳಿ ಗ್ರಾಮದಲ್ಲಿ ಪದ್ಮಶ್ರೀ ಶಿಕ್ಷಣ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ. ಮಾಗಡಿ ರಸ್ತೆ – ಮೈಸೂರು ರಸ್ತೆ ನಿರ್ಮಾಣಕ್ಕಾಗಿ ಕಾಲೇಜಿನ ಕೆಲ ಪ್ರದೇಶವನ್ನು ಭೂಸ್ವಾಧೀನ ಪಡಿಸಿಕೊಳ್ಳಲು 2013ರಲ್ಲಿ ಗುರುತು ಮಾಡಲಾಗಿತ್ತು. ಪೊಲೀಸರ ನೆರವಿನೊಂದಿಗೆ ಜೆಸಿಬಿಯೊಡನೆ ಸ್ಥಳಕ್ಕೆ ಆಗಮಿಸಿದ ಬಿಡಿಎ ಅಧಿಕಾರಿಗಳು ರಸ್ತೆ ವಿಸ್ತರಣೆಗೆ ಮುಂದಾಗಿದ್ದರು.
‘ಬಿಡಿಎ ಈವರೆಗೆ ನೀಡಿರುವ ತಿಳಿವಳಿಕೆ ಪತ್ರಗಳಲ್ಲಿ ದೋಷವಿದೆ. ಸ್ವಾಧೀನಗೊಳ್ಳಲಿರುವ ಭೂಮಿಯ ಅಳತೆ
ಯಲ್ಲಿ ವ್ಯತ್ಯಾಸವಿದೆ’ ಎಂದು ದೂರಿದ್ದ ಕಾಲೇಜು ಆಡಳಿತ ಮಂಡಳಿ ಭೂ ಪರಿಹಾರ ದೊರಕುವವರೆಗೆ ಯಾವುದೇ ರಸ್ತೆ ಅಭಿವೃದ್ಧಿ ಕೈಗೊಳ್ಳದಂತೆ ಆಗ್ರಹಿಸಿತ್ತು. ಈ ಹಿನ್ನೆಲೆಯಲ್ಲಿ ಬಿಡಿಎ ಅಧಿಕಾರಿಗಳು ಸ್ವಾಧೀನ ಪ್ರಕ್ರಿಯೆ ಕೈ ಬಿಟ್ಟು ಹೊರ ನಡೆದಿದ್ದಾರೆ.
ಬಿಡಿಎ ಎಇಇ ಅಶೋಕ್ ಪ್ರತಿಕ್ರಿಯಿಸಿ, ರಸ್ತೆ ವಿಸ್ತರಣೆ ಕಾಮಗಾರಿ ಚಾಲ್ತಿಯಲ್ಲಿದೆ. ಉರುಳಿಸಿರುವ ಗೋಡೆಯನ್ನು ಮತ್ತೆ ನಿರ್ಮಾಣ ಮಾಡಿಲ್ಲ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.