ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಜಮೀನು ಒತ್ತುವರಿ: 1 ವರ್ಷ ಜೈಲು

Last Updated 1 ಫೆಬ್ರುವರಿ 2019, 19:42 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಖರಾಬು ಜಮೀನು ಒತ್ತುವರಿ ಮಾಡಿದ ದೊಡ್ಡನೆಕ್ಕುಂದಿಯ ಆಪಾದಿತ ರಂಜನ್‌ ನಾಯಕ್‌ ಎಂಬಾತನಿಗೆ ಭೂ ಕಬಳಿಕೆ ತಡೆ ವಿಶೇಷ ನ್ಯಾಯಾಲಯ ಒಂದು ವರ್ಷ ಜೈಲು ಹಾಗೂ ₹10 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಗ್ರಾಮದ ಸರ್ವೆ ಸಂಖ್ಯೆ 15ರಲ್ಲಿ 12 ಗುಂಟೆ ಕಬಳಿಕೆ ಮಾಡಿ ಕಟ್ಟಡ ನಿರ್ಮಿಸಿದ್ದರು. ಭೂ ಕಬಳಿಕೆ ಬಗ್ಗೆ ಬೆಂಗಳೂರು ಪೂರ್ವ ತಹಶೀಲ್ದಾರ್ ವರದಿ ಸಲ್ಲಿಸಿದ್ದರು. ಈ ಒತ್ತುವರಿ ಬಗ್ಗೆ ಎ.ಟಿ.ರಾಮಸ್ವಾಮಿ ನೇತೃತ್ವದ ಜಂಟಿ ಸದನ ಸಮಿತಿಯಲ್ಲಿ ಉಲ್ಲೇಖಿಸಲಾಗಿತ್ತು.

ಸರ್ಕಾರದ ಪರವಾಗಿ ಸರ್ಕಾರಿ ವಕೀಲ ಬಿ.ಎಸ್‌.‍ಪಾಟೀಲ ವಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT