<p><strong>ಬೆಂಗಳೂರು:</strong> ದಕ್ಷಿಣ ತಾಲ್ಲೂಕು ತಾವರೆಕೆರೆ ಹೋಬಳಿಯಲ್ಲಿ ₹12 ಸಾವಿರ ಕೋಟಿಗೂ ಹೆಚ್ಚು ಮೌಲ್ಯದ 500 ಎಕರೆ ಸರ್ಕಾರಿ ಭೂಮಿಯನ್ನು ಪ್ರಭಾವಿಗಳು ಕಬಳಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಂಡು ಭೂಮಿಯನ್ನು ವಶಕ್ಕೆ ಪಡೆದುಕೊಳ್ಳಬೇಕು ಎಂದು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್. ರಮೇಶ್ ಆಗ್ರಹಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಎ.ಟಿ. ರಾಮಸ್ವಾಮಿ ನೇತೃತ್ವದ ಜಂಟಿ ಸದನ ಸಮಿತಿ ವರದಿಯಂತೆ ಯಶವಂತಪುರ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ 1,600 ಎಕರೆಗಳಿಗೂ ಹೆಚ್ಚು ವಿಸ್ತೀರ್ಣದ ಸರ್ಕಾರಿ ಸ್ವತ್ತುಗಳಿವೆ. ಇದರಲ್ಲಿ 500 ಎಕರೆಯನ್ನು ಕಬಳಿಸಲಾಗಿದೆ. ಈ ಬಗ್ಗೆ 8,879 ಪುಟಗಳ ದಾಖಲೆ ಸಹಿತ ದೂರು ದಾಖಲಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವರು, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಪತ್ರ ಬರೆದು, ಎಂಟು ಪ್ರಕರಣಗಳಲ್ಲಿ ಕಬಳಿಸಲಾಗಿರುವ ಸರ್ಕಾರಿ ಭೂಮಿಯನ್ನು ವಶಕ್ಕೆ ಪಡೆದುಕೊಳ್ಳಬೇಕು. ಕಾನೂನು ಪ್ರಕಾರ ಜಿಲ್ಲಾಡಳಿತ ಕ್ರಮ ಕೈಗೊಳ್ಳುವಂತೆ ಸೂಚಿಸಬೇಕು ಎಂದು ಮನವಿ ಮಾಡಲಾಗಿದೆ’ ಎಂದು ಹೇಳಿದರು.</p>.<p>‘ಶಾಸಕರ ಪತ್ನಿ, ಬಿಬಿಎಂಪಿಯ ಮಾಜಿ ಉಪ ಮೇಯರ್ ಅವರ ಪತ್ನಿ, ಇಬ್ಬರು ಐಎಎಸ್, ಐವರು ಕೆಎಎಸ್ ಅಧಿಕಾರಿಗಳು ಈ ಪ್ರಕರಣದಲ್ಲಿ ಭಾಗಿಯಾಗಿದ್ದು, ಭ್ರಷ್ಟಾಚಾರ, ನಕಲಿ ದಾಖಲೆ ತಯಾರಿಕೆ, ವಂಚನೆ, ಸರ್ಕಾರಿ ಜಮೀನು ಕಬಳಿಕೆಗೆ ಸಹಕಾರ, ಅಧಿಕಾರ ದುರುಪಯೋಗ ಆರೋಪಗಳಡಿ ಪ್ರಕರಣ ದಾಖಲಿಸಲು ಕೋರಲಾಗಿದೆ’ ಎಂದರು.</p>.<p>‘ದೇವ ಮಾಚೋಹಳ್ಳಿ, ಯಲಚಗುಪ್ಪೆ ರಾಂಪುರ, ಗಾಣಕಲ್ಲು, ಯಲಚಗುಪ್ಪೆ, ಕುರುಬರಹಳ್ಳಿ, ತಾವರೆಕರೆ ಗ್ರಾಮಗಳಲ್ಲಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದಕ್ಷಿಣ ತಾಲ್ಲೂಕು ತಾವರೆಕೆರೆ ಹೋಬಳಿಯಲ್ಲಿ ₹12 ಸಾವಿರ ಕೋಟಿಗೂ ಹೆಚ್ಚು ಮೌಲ್ಯದ 500 ಎಕರೆ ಸರ್ಕಾರಿ ಭೂಮಿಯನ್ನು ಪ್ರಭಾವಿಗಳು ಕಬಳಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಂಡು ಭೂಮಿಯನ್ನು ವಶಕ್ಕೆ ಪಡೆದುಕೊಳ್ಳಬೇಕು ಎಂದು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್. ರಮೇಶ್ ಆಗ್ರಹಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಎ.ಟಿ. ರಾಮಸ್ವಾಮಿ ನೇತೃತ್ವದ ಜಂಟಿ ಸದನ ಸಮಿತಿ ವರದಿಯಂತೆ ಯಶವಂತಪುರ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ 1,600 ಎಕರೆಗಳಿಗೂ ಹೆಚ್ಚು ವಿಸ್ತೀರ್ಣದ ಸರ್ಕಾರಿ ಸ್ವತ್ತುಗಳಿವೆ. ಇದರಲ್ಲಿ 500 ಎಕರೆಯನ್ನು ಕಬಳಿಸಲಾಗಿದೆ. ಈ ಬಗ್ಗೆ 8,879 ಪುಟಗಳ ದಾಖಲೆ ಸಹಿತ ದೂರು ದಾಖಲಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವರು, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಪತ್ರ ಬರೆದು, ಎಂಟು ಪ್ರಕರಣಗಳಲ್ಲಿ ಕಬಳಿಸಲಾಗಿರುವ ಸರ್ಕಾರಿ ಭೂಮಿಯನ್ನು ವಶಕ್ಕೆ ಪಡೆದುಕೊಳ್ಳಬೇಕು. ಕಾನೂನು ಪ್ರಕಾರ ಜಿಲ್ಲಾಡಳಿತ ಕ್ರಮ ಕೈಗೊಳ್ಳುವಂತೆ ಸೂಚಿಸಬೇಕು ಎಂದು ಮನವಿ ಮಾಡಲಾಗಿದೆ’ ಎಂದು ಹೇಳಿದರು.</p>.<p>‘ಶಾಸಕರ ಪತ್ನಿ, ಬಿಬಿಎಂಪಿಯ ಮಾಜಿ ಉಪ ಮೇಯರ್ ಅವರ ಪತ್ನಿ, ಇಬ್ಬರು ಐಎಎಸ್, ಐವರು ಕೆಎಎಸ್ ಅಧಿಕಾರಿಗಳು ಈ ಪ್ರಕರಣದಲ್ಲಿ ಭಾಗಿಯಾಗಿದ್ದು, ಭ್ರಷ್ಟಾಚಾರ, ನಕಲಿ ದಾಖಲೆ ತಯಾರಿಕೆ, ವಂಚನೆ, ಸರ್ಕಾರಿ ಜಮೀನು ಕಬಳಿಕೆಗೆ ಸಹಕಾರ, ಅಧಿಕಾರ ದುರುಪಯೋಗ ಆರೋಪಗಳಡಿ ಪ್ರಕರಣ ದಾಖಲಿಸಲು ಕೋರಲಾಗಿದೆ’ ಎಂದರು.</p>.<p>‘ದೇವ ಮಾಚೋಹಳ್ಳಿ, ಯಲಚಗುಪ್ಪೆ ರಾಂಪುರ, ಗಾಣಕಲ್ಲು, ಯಲಚಗುಪ್ಪೆ, ಕುರುಬರಹಳ್ಳಿ, ತಾವರೆಕರೆ ಗ್ರಾಮಗಳಲ್ಲಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>