<p><strong>ಬೆಂಗಳೂರು:</strong> ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ ₹32.72 ಕೋಟಿ ಅಂದಾಜು ಮೌಲ್ಯದ ಒಟ್ಟು 10 ಎಕರೆ 0.37 ಗುಂಟೆ ಸರ್ಕಾರಿ ಜಮೀನನ್ನು ಜಿಲ್ಲಾಧಿಕಾರಿ ಜಿ.ಜಗದೀಶ ಅವರ ನೇತೃತ್ವದಲ್ಲಿ ಶನಿವಾರ ತೆರವುಗೊಳಿಸಲಾಯಿತು.</p>.<p>ಗೋಮಾಳ, ಸ್ಮಶಾನ, ಕರೆ, ಚೌಳಕುಂಟೆ, ಗುಂಡುತೋಪು, ಕುಂಟೆ, ಸರ್ಕಾರಿ ಸ್ಮಶಾನ, ಸರ್ಕಾರಿ ಕೊರಕಲು ಮತ್ತು ಖರಾಬು ಜಾಗಗಳ ಒತ್ತುವರಿಯನ್ನು ತೆರವು ಕಾರ್ಯಾಚರಣೆ ನಡೆಯಿತು.</p>.<p>ಪೂರ್ವ ತಾಲ್ಲೂಕಿನ ಬಿದರಹಳ್ಳಿ ಹೋಬಳಿಯ ಕಟ್ಟೊಗೊಲ್ಲಹಳ್ಳಿ ಗ್ರಾಮದಲ್ಲಿ ಗೋಮಾಳ, ವರ್ತೂರು ಹೋಬಳಿಯ ಕೈಕೊಂಡ್ರಹಳ್ಳಿ ಗ್ರಾಮದಲ್ಲಿ ಸ್ಮಶಾನ, ಆನೇಕಲ್ ತಾಲ್ಲೂಕಿನ ಕಸಬಾ-1 ಹೋಬಳಿಯ ಸಿಡಿಹೊಸಕೋಟೆ ಗ್ರಾಮದಲ್ಲಿ ಸರ್ಕಾರಿ ಭೂಮಿ, ಕಸಬಾ-2 ಹೋಬಳಿಯ ಬೆಸ್ತಮಾನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಜಾಗ, ಜಿಗಣಿ-1 ಹೋಬಳಿಯ ಬುಕ್ಕಸಾಗರ ಗ್ರಾಮದಲ್ಲಿ ಗುಂಡುತೋಪು, ಜಿಗಣಿ-2 ಹೋಬಳಿಯ ಹುಲಿಮಂಗಲ ಗ್ರಾಮದಲ್ಲಿ ಗೋಮಾಳ, ಸರ್ಜಾಪುರ-1 ಹೋಬಳಿಯ ಕೂಗೂರು ಗ್ರಾಮದಲ್ಲಿ ಕುಂಟೆ, ಸರ್ಜಾಪುರ-2 ಹೋಬಳಿಯ ಮುತ್ತನಲ್ಲೂರು ಗ್ರಾಮದಲ್ಲಿ ಗುಂಡುತೋಪು, ಸರ್ಜಾಪುರ-3 ಹೋಬಳಿಯ ಕೊಮ್ಮಸಂದ್ರ ಗ್ರಾಮದಲ್ಲಿ ಸ್ಮಶಾನದಲ್ಲಿನ ಒತ್ತುವರಿಯನ್ನು ತೆರವುಗೊಳಿಸಲಾಯಿತು.</p>.<p>ದಕ್ಷಿಣ ತಾಲ್ಲೂಕಿನ ತಾವರೆಕೆರೆ ಹೋಬಳಿಯ ಯಲಚಗುಪ್ಪೆ ಗ್ರಾಮದಲ್ಲಿ ಸ್ಮಶಾನ, ದೊಡ್ಡೇರಿ ಗ್ರಾಮದಲ್ಲಿ ಗುಂಡುತೋಪು, ಬೇಗೂರು ಹೋಬಳಿಯ ಮೈಲಸಂದ್ರ ಗ್ರಾಮದಲ್ಲಿ ಗುಂಡುತೋಪು, ಕೆಂಗೇರಿ ಹೋಬಳಿಯ ಸೋಂಪುರ ಗ್ರಾಮದಲ್ಲಿ ಗುಂಡುತೋಪು ಒತ್ತುವರಿಯನ್ನು ತೆರವು ಮಾಡಲಾಯಿತು.</p>.<p>ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ಮಲ್ಲಸಂದ್ರ ಗ್ರಾಮದಲ್ಲಿ ಗುಂಡುತೋಪು, ಹಾರೋಕ್ಯಾತನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಕೊರಕಲು, ಖರಾಬು, ಹುಲ್ಲೇಗೌಡನಹಳ್ಳಿ ಗ್ರಾಮದಲ್ಲಿ ಖರಾಬು, ತೋರನಾಗಸಂದ್ರ ಗ್ರಾಮದಲ್ಲಿ ಖರಾಬಿನಲ್ಲಿನ ಒತ್ತುವರಿಯನ್ನು ತೆರವುಗೊಳಿಸಿ ವಶಕ್ಕೆ ಪಡೆದುಕೊಳ್ಳಲಾಯಿತು.</p>.<p>ಯಲಹಂಕ ತಾಲ್ಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಗ್ರಾಮದಲ್ಲಿ ಗೋಮಾಳ, ಜಾಲ ಹೋಬಳಿಯ ನೆಲ್ಲಕುಂಟೆ ಗ್ರಾಮದಲ್ಲಿ ಗೋಮಾಳ ಒತ್ತುವರಿ ತೆರವುಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ ₹32.72 ಕೋಟಿ ಅಂದಾಜು ಮೌಲ್ಯದ ಒಟ್ಟು 10 ಎಕರೆ 0.37 ಗುಂಟೆ ಸರ್ಕಾರಿ ಜಮೀನನ್ನು ಜಿಲ್ಲಾಧಿಕಾರಿ ಜಿ.ಜಗದೀಶ ಅವರ ನೇತೃತ್ವದಲ್ಲಿ ಶನಿವಾರ ತೆರವುಗೊಳಿಸಲಾಯಿತು.</p>.<p>ಗೋಮಾಳ, ಸ್ಮಶಾನ, ಕರೆ, ಚೌಳಕುಂಟೆ, ಗುಂಡುತೋಪು, ಕುಂಟೆ, ಸರ್ಕಾರಿ ಸ್ಮಶಾನ, ಸರ್ಕಾರಿ ಕೊರಕಲು ಮತ್ತು ಖರಾಬು ಜಾಗಗಳ ಒತ್ತುವರಿಯನ್ನು ತೆರವು ಕಾರ್ಯಾಚರಣೆ ನಡೆಯಿತು.</p>.<p>ಪೂರ್ವ ತಾಲ್ಲೂಕಿನ ಬಿದರಹಳ್ಳಿ ಹೋಬಳಿಯ ಕಟ್ಟೊಗೊಲ್ಲಹಳ್ಳಿ ಗ್ರಾಮದಲ್ಲಿ ಗೋಮಾಳ, ವರ್ತೂರು ಹೋಬಳಿಯ ಕೈಕೊಂಡ್ರಹಳ್ಳಿ ಗ್ರಾಮದಲ್ಲಿ ಸ್ಮಶಾನ, ಆನೇಕಲ್ ತಾಲ್ಲೂಕಿನ ಕಸಬಾ-1 ಹೋಬಳಿಯ ಸಿಡಿಹೊಸಕೋಟೆ ಗ್ರಾಮದಲ್ಲಿ ಸರ್ಕಾರಿ ಭೂಮಿ, ಕಸಬಾ-2 ಹೋಬಳಿಯ ಬೆಸ್ತಮಾನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಜಾಗ, ಜಿಗಣಿ-1 ಹೋಬಳಿಯ ಬುಕ್ಕಸಾಗರ ಗ್ರಾಮದಲ್ಲಿ ಗುಂಡುತೋಪು, ಜಿಗಣಿ-2 ಹೋಬಳಿಯ ಹುಲಿಮಂಗಲ ಗ್ರಾಮದಲ್ಲಿ ಗೋಮಾಳ, ಸರ್ಜಾಪುರ-1 ಹೋಬಳಿಯ ಕೂಗೂರು ಗ್ರಾಮದಲ್ಲಿ ಕುಂಟೆ, ಸರ್ಜಾಪುರ-2 ಹೋಬಳಿಯ ಮುತ್ತನಲ್ಲೂರು ಗ್ರಾಮದಲ್ಲಿ ಗುಂಡುತೋಪು, ಸರ್ಜಾಪುರ-3 ಹೋಬಳಿಯ ಕೊಮ್ಮಸಂದ್ರ ಗ್ರಾಮದಲ್ಲಿ ಸ್ಮಶಾನದಲ್ಲಿನ ಒತ್ತುವರಿಯನ್ನು ತೆರವುಗೊಳಿಸಲಾಯಿತು.</p>.<p>ದಕ್ಷಿಣ ತಾಲ್ಲೂಕಿನ ತಾವರೆಕೆರೆ ಹೋಬಳಿಯ ಯಲಚಗುಪ್ಪೆ ಗ್ರಾಮದಲ್ಲಿ ಸ್ಮಶಾನ, ದೊಡ್ಡೇರಿ ಗ್ರಾಮದಲ್ಲಿ ಗುಂಡುತೋಪು, ಬೇಗೂರು ಹೋಬಳಿಯ ಮೈಲಸಂದ್ರ ಗ್ರಾಮದಲ್ಲಿ ಗುಂಡುತೋಪು, ಕೆಂಗೇರಿ ಹೋಬಳಿಯ ಸೋಂಪುರ ಗ್ರಾಮದಲ್ಲಿ ಗುಂಡುತೋಪು ಒತ್ತುವರಿಯನ್ನು ತೆರವು ಮಾಡಲಾಯಿತು.</p>.<p>ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ಮಲ್ಲಸಂದ್ರ ಗ್ರಾಮದಲ್ಲಿ ಗುಂಡುತೋಪು, ಹಾರೋಕ್ಯಾತನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಕೊರಕಲು, ಖರಾಬು, ಹುಲ್ಲೇಗೌಡನಹಳ್ಳಿ ಗ್ರಾಮದಲ್ಲಿ ಖರಾಬು, ತೋರನಾಗಸಂದ್ರ ಗ್ರಾಮದಲ್ಲಿ ಖರಾಬಿನಲ್ಲಿನ ಒತ್ತುವರಿಯನ್ನು ತೆರವುಗೊಳಿಸಿ ವಶಕ್ಕೆ ಪಡೆದುಕೊಳ್ಳಲಾಯಿತು.</p>.<p>ಯಲಹಂಕ ತಾಲ್ಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಗ್ರಾಮದಲ್ಲಿ ಗೋಮಾಳ, ಜಾಲ ಹೋಬಳಿಯ ನೆಲ್ಲಕುಂಟೆ ಗ್ರಾಮದಲ್ಲಿ ಗೋಮಾಳ ಒತ್ತುವರಿ ತೆರವುಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>