ಬಿಡಿಎ ಆಯುಕ್ತ ಜಿ. ಕುಮಾರ ನಾಯಕ್ ಅವರಿಗೆ ಬುಧವಾರ ಪತ್ರ ಬರೆದಿರುವ ಅವರು, ‘ವಿಶ್ವಮೂರ್ತಿಯವರು ನಿವೇಶನ ಕೋರಿ 1984ರಲ್ಲಿ ಬಿಡಿಎಗೆ ಅರ್ಜಿ ಸಲ್ಲಿಸಿದ್ದರು. 2004ರಲ್ಲಿ ಬನಶಂಕರಿ ಆರನೇ ಹಂತದ ಬಡಾವಣೆಯಲ್ಲಿ ಅವರಿಗೆ ನಿವೇಶನ ಹಂಚಿಕೆ ಮಾಡಲಾಗಿತ್ತು. ಸದರಿ ನಿವೇಶನ ತಲಘಟ್ಟಪುರ ಕೆರೆ ಪಕ್ಕದಲ್ಲಿತ್ತು. 2015ರವರೆಗೂ ಅಲ್ಲಿಗೆ ಯಾವುದೇ ಮೂಲಸೌಕರ್ಯ ಕಲ್ಪಿಸಿರಲಿಲ್ಲ. 2016ರಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ನಿವೇಶನವನ್ನು ಸ್ಮಶಾನ ಮಾಡಿಕೊಂಡಿದ್ದರು’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.