‘ಮುಂದಿನ ಕೆಲ ವರ್ಷಗಳಲ್ಲಿ ರೈತರ ಉತ್ಪನ್ನಗಳನ್ನು ಮಾರಾಟ ಮಾಡಲು ವಿಶೇಷ ಆ್ಯಪ್ಗಳನ್ನು ಅಭಿವೃದ್ಧಿಪಡಿಸಿ, ಇಡೀ ಮಾರುಕಟ್ಟೆ ವ್ಯವಸ್ಥೆಯನ್ನು ರಿಲಯನ್ಸ್ ನಂತಹ ಸಂಸ್ಥೆಗಳಿಗೆ ಹಸ್ತಾಂತರ ಮಾಡಲಾಗುತ್ತದೆ. ರೈತರ ರಕ್ಷಣೆಗೆ ಈ ಕಾನೂನಿನಲ್ಲಿ ಯಾವುದೇ ಅವಕಾಶವಿಲ್ಲ. ಎಲ್ಲವೂ ಕಾರ್ಪೋರೇಟ್ ವ್ಯವಸ್ಥೆಗೆ ಪೂರಕವಾದ ಕಾನೂನುಗಳಾಗಿವೆ. ಕಾರ್ಪೋರೇಟ್ ಸಂಸ್ಥೆಗಳು ದಬ್ಬಾಳಿಕೆಮಾಡಿ, ರೈತರನ್ನು ಶೋಷಿಸಲಿದೆ’ ಎಂದರು.