<p><strong>ಬೆಂಗಳೂರು:</strong> ‘ಲಂಗೋಟಿ ಮ್ಯಾನ್ ಸಿನಿಮಾದ ಟೀಸರ್ನಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡಿರುವ ಚಿತ್ರ ತಂಡವು ಸಮುದಾಯದ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ಚಿತ್ರ ತಂಡದ ವಿರುದ್ಧ ಹೋರಾಟ ಅನಿವಾರ್ಯವಾಗಲಿದೆ’ ಎಂದು ಕೆಪಿಸಿಸಿ ವಕ್ತಾರ ಶಂಕರ ಗುಹಾ ದ್ವಾರಕನಾಥ್ ಹೇಳಿದ್ದಾರೆ. </p>.<p>‘ಸಂಜೋತಾ ಭಂಡಾರಿ ನಿರ್ದೇಶನದ ಈ ಚಿತ್ರದ ಟೀಸರ್ನಲ್ಲಿ, ಜನಿವಾರ ಧರಿಸಿದ ವ್ಯಕ್ತಿಯೋರ್ವ ಲಂಗೋಟಿಯಲ್ಲಿ ಓಡುತ್ತಿರುವ ಹಾಗೆ ಚಿತ್ರೀಕರಣ ಮಾಡಲಾಗಿದೆ. ಈ ಮೂಲಕ ಬ್ರಾಹ್ಮಣರನ್ನು ಹಾಗೂ ಬ್ರಾಹ್ಮಣರ ಪಾರಂಪರಿಕ ವಸ್ತ್ರಧಾರವನ್ನು ಟೀಕಿಸಿರುವುದು ಗಮನಕ್ಕೆ ಬಂದಿದೆ. ಯಾವುದೇ ಜಾತಿ ಹಾಗೂ ವರ್ಗದವರನ್ನು ನಿಂದಿಸುವುದು ತಪ್ಪು’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>‘ಈ ಚಲನಚಿತ್ರದ ನಿರ್ಮಾಪಕರು ಹಾಗೂ ನಿರ್ದೇಶಕರು ವಿವಾದಿತ ದೃಶ್ಯ ತೆಗೆಯಬೇಕು. ಯಾರ ಭಾವನೆಗೂ ಧಕ್ಕೆ ಬಾರದ ಹಾಗೆ ಸರಿಪಡಿಸಿ, ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಅರ್ಚಕರ ಸಂಘದವರ ಜೊತೆಗೆ ನಿಂತು ತೀವ್ರ ಹೋರಾಟ ಮಾಡಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಲಂಗೋಟಿ ಮ್ಯಾನ್ ಸಿನಿಮಾದ ಟೀಸರ್ನಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡಿರುವ ಚಿತ್ರ ತಂಡವು ಸಮುದಾಯದ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ಚಿತ್ರ ತಂಡದ ವಿರುದ್ಧ ಹೋರಾಟ ಅನಿವಾರ್ಯವಾಗಲಿದೆ’ ಎಂದು ಕೆಪಿಸಿಸಿ ವಕ್ತಾರ ಶಂಕರ ಗುಹಾ ದ್ವಾರಕನಾಥ್ ಹೇಳಿದ್ದಾರೆ. </p>.<p>‘ಸಂಜೋತಾ ಭಂಡಾರಿ ನಿರ್ದೇಶನದ ಈ ಚಿತ್ರದ ಟೀಸರ್ನಲ್ಲಿ, ಜನಿವಾರ ಧರಿಸಿದ ವ್ಯಕ್ತಿಯೋರ್ವ ಲಂಗೋಟಿಯಲ್ಲಿ ಓಡುತ್ತಿರುವ ಹಾಗೆ ಚಿತ್ರೀಕರಣ ಮಾಡಲಾಗಿದೆ. ಈ ಮೂಲಕ ಬ್ರಾಹ್ಮಣರನ್ನು ಹಾಗೂ ಬ್ರಾಹ್ಮಣರ ಪಾರಂಪರಿಕ ವಸ್ತ್ರಧಾರವನ್ನು ಟೀಕಿಸಿರುವುದು ಗಮನಕ್ಕೆ ಬಂದಿದೆ. ಯಾವುದೇ ಜಾತಿ ಹಾಗೂ ವರ್ಗದವರನ್ನು ನಿಂದಿಸುವುದು ತಪ್ಪು’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>‘ಈ ಚಲನಚಿತ್ರದ ನಿರ್ಮಾಪಕರು ಹಾಗೂ ನಿರ್ದೇಶಕರು ವಿವಾದಿತ ದೃಶ್ಯ ತೆಗೆಯಬೇಕು. ಯಾರ ಭಾವನೆಗೂ ಧಕ್ಕೆ ಬಾರದ ಹಾಗೆ ಸರಿಪಡಿಸಿ, ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಅರ್ಚಕರ ಸಂಘದವರ ಜೊತೆಗೆ ನಿಂತು ತೀವ್ರ ಹೋರಾಟ ಮಾಡಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>