<p><strong>ಬೆಂಗಳೂರು</strong>: ನಗರದ ಪೇಯಿಂಗ್ ಗೆಸ್ಟ್ ಕಟ್ಟಡಗಳಲ್ಲಿ ಲ್ಯಾಪ್ಟಾಪ್ ಕಳ್ಳತನ ಮಾಡುತ್ತಿದ್ದ ಆರೋಪದಡಿ ಜಶು ಅಗರವಾಲ್ (29) ಎಂಬುವವರನ್ನು ಎಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ರಾಜಸ್ಥಾನ್ದ ಜಶು, ಎಂಜಿನಿಯರಿಂಗ್ ಪದವೀಧರೆ. ಮೂರು ವರ್ಷಗಳಿಂದ ಕೃತ್ಯ ಎಸಗುತ್ತಿದ್ದರು. ಇತ್ತೀಚೆಗೆ ಇವರನ್ನು ಬಂಧಿಸಿ, ₹ 10 ಲಕ್ಷ ಮೌಲ್ಯದ 24 ಲ್ಯಾಪ್ಟಾಪ್ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಆರೋಪಿ ಜಶು, ವಿದ್ಯಾಭ್ಯಾಸ ಮುಗಿಯುತ್ತಿದ್ದಂತೆ ನೋಯ್ಡಾದ ಬ್ಯಾಂಕ್ವೊಂದರಲ್ಲಿ ಕೆಲಸಕ್ಕೆ ಸೇರಿದ್ದರು. ವೇತನ ಕಡಿಮೆ ಇದ್ದಿದ್ದರಿಂದ, ಕೆಲಸಕ್ಕೆ ರಾಜೀನಾಮೆ ನೀಡಿದ್ದರು. ಬೆಂಗಳೂರಿನ ಕಂಪನಿಗಳಲ್ಲಿ ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದರು. ಹಲವು ಕಡೆ ಸಂದರ್ಶನ ನೀಡಿದರೂ ಕೆಲಸ ಸಿಕ್ಕಿರಲಿಲ್ಲ’ ಎಂದು ತಿಳಿಸಿದರು.</p>.<p>‘ಸಂದರ್ಶನಕ್ಕೆಂದು ವಿಮಾನದಲ್ಲಿ ಆಗಾಗ ನಗರಕ್ಕೆ ಬರುತ್ತಿದ್ದ ಆರೋಪಿ, ಬೆಳ್ಳಂದೂರು, ವೈಟ್ಫೀಲ್ಡ್ ಸಿಲ್ಕ್ ಬೋರ್ಡ್, ಮಹದೇವಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಪೇಯಿಂಗ್ ಗೆಸ್ಟ್ ಕಟ್ಟಡಗಳಲ್ಲಿ ವಾಸವಿರುತ್ತಿದ್ದರು. ಯುವತಿಯರು ಊಟಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಕೊಠಡಿಗೆ ಹೋಗಿ ಲ್ಯಾಪ್ಟಾಪ್ ಕದಿಯುತ್ತಿದ್ದರು.’</p>.<p>‘ಕದ್ದ ಲ್ಯಾಪ್ಟಾಪ್ಗಳನ್ನು ಸ್ಥಳೀಯ ಮಳಿಗೆಗಳಲ್ಲಿ ಮಾರುತ್ತಿದ್ದರು. ಅದರಿಂದ ಬಂದ ಹಣವನ್ನು ತಮ್ಮ ಖರ್ಚಿಗೆ ಬಳಸಿಕೊಳ್ಳುತ್ತಿದ್ದರು. ಆರೋಪಿ ಇತ್ತೀಚೆಗೆ ನಗರಕ್ಕೆ ಪುನಃ ಬಂದಿದ್ದರು. ಹುಣಸಮಾರನಹಳ್ಳಿ ಬಳಿ ಅವರನ್ನು ಬಂಧಿಸಲಾಯಿತು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಪೇಯಿಂಗ್ ಗೆಸ್ಟ್ ಕಟ್ಟಡಗಳಲ್ಲಿ ಲ್ಯಾಪ್ಟಾಪ್ ಕಳ್ಳತನ ಮಾಡುತ್ತಿದ್ದ ಆರೋಪದಡಿ ಜಶು ಅಗರವಾಲ್ (29) ಎಂಬುವವರನ್ನು ಎಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ರಾಜಸ್ಥಾನ್ದ ಜಶು, ಎಂಜಿನಿಯರಿಂಗ್ ಪದವೀಧರೆ. ಮೂರು ವರ್ಷಗಳಿಂದ ಕೃತ್ಯ ಎಸಗುತ್ತಿದ್ದರು. ಇತ್ತೀಚೆಗೆ ಇವರನ್ನು ಬಂಧಿಸಿ, ₹ 10 ಲಕ್ಷ ಮೌಲ್ಯದ 24 ಲ್ಯಾಪ್ಟಾಪ್ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಆರೋಪಿ ಜಶು, ವಿದ್ಯಾಭ್ಯಾಸ ಮುಗಿಯುತ್ತಿದ್ದಂತೆ ನೋಯ್ಡಾದ ಬ್ಯಾಂಕ್ವೊಂದರಲ್ಲಿ ಕೆಲಸಕ್ಕೆ ಸೇರಿದ್ದರು. ವೇತನ ಕಡಿಮೆ ಇದ್ದಿದ್ದರಿಂದ, ಕೆಲಸಕ್ಕೆ ರಾಜೀನಾಮೆ ನೀಡಿದ್ದರು. ಬೆಂಗಳೂರಿನ ಕಂಪನಿಗಳಲ್ಲಿ ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದರು. ಹಲವು ಕಡೆ ಸಂದರ್ಶನ ನೀಡಿದರೂ ಕೆಲಸ ಸಿಕ್ಕಿರಲಿಲ್ಲ’ ಎಂದು ತಿಳಿಸಿದರು.</p>.<p>‘ಸಂದರ್ಶನಕ್ಕೆಂದು ವಿಮಾನದಲ್ಲಿ ಆಗಾಗ ನಗರಕ್ಕೆ ಬರುತ್ತಿದ್ದ ಆರೋಪಿ, ಬೆಳ್ಳಂದೂರು, ವೈಟ್ಫೀಲ್ಡ್ ಸಿಲ್ಕ್ ಬೋರ್ಡ್, ಮಹದೇವಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಪೇಯಿಂಗ್ ಗೆಸ್ಟ್ ಕಟ್ಟಡಗಳಲ್ಲಿ ವಾಸವಿರುತ್ತಿದ್ದರು. ಯುವತಿಯರು ಊಟಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಕೊಠಡಿಗೆ ಹೋಗಿ ಲ್ಯಾಪ್ಟಾಪ್ ಕದಿಯುತ್ತಿದ್ದರು.’</p>.<p>‘ಕದ್ದ ಲ್ಯಾಪ್ಟಾಪ್ಗಳನ್ನು ಸ್ಥಳೀಯ ಮಳಿಗೆಗಳಲ್ಲಿ ಮಾರುತ್ತಿದ್ದರು. ಅದರಿಂದ ಬಂದ ಹಣವನ್ನು ತಮ್ಮ ಖರ್ಚಿಗೆ ಬಳಸಿಕೊಳ್ಳುತ್ತಿದ್ದರು. ಆರೋಪಿ ಇತ್ತೀಚೆಗೆ ನಗರಕ್ಕೆ ಪುನಃ ಬಂದಿದ್ದರು. ಹುಣಸಮಾರನಹಳ್ಳಿ ಬಳಿ ಅವರನ್ನು ಬಂಧಿಸಲಾಯಿತು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>