<p>ಬೆಂಗಳೂರು: ನಗರದ ಟಿ. ದಾಸರಹಳ್ಳಿ, ಯಲಹಂಕ ಸುತ್ತಮುತ್ತ ಭಾನುವಾರ ಸಂಜೆಯಿಂದ ರಾತ್ರಿಯವರೆಗೂ ಜೋರು ಮಳೆಯಾಗಿದ್ದು, ನಾಗಸಂದ್ರ ಕಾಲೊನಿ ಬಳಿ ರಾಜಕಾಲುವೆ ಒಡೆದು ಹಲವು ಮನೆಗಳಿಗೆ ನೀರು ನುಗ್ಗಿತು.</p>.<p>ಹಲವು ದಿನಗಳಿಂದ ಸುರಿಯುತ್ತಿದ್ದ ಮಳೆ, ಭಾನುವಾರ ಬೆಳಿಗ್ಗೆ ಬಿಡುವು ನೀಡಿತ್ತು. ಬಹುತೇಕ ಪ್ರದೇಶಗಳಲ್ಲಿ ಬಿಸಿಲು ಕಾಣಿಸಿಕೊಂಡಿತ್ತು. ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಆವರಿಸಿ, ಮಳೆಯೂ ಸುರಿಯಿತು.</p>.<p>ಟಿ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ರುಕ್ಮಿಣಿ ಬಡಾವಣೆ, ಗುಂಡಪ್ಪ ಬಡಾವಣೆ, ಬೆಲ್ಮರ್ ಬಡಾವಣೆ, ರಾಯಲ್ ಎನ್ಕ್ಲೇವ್, ಬಿಟಿಎಸ್ ಬಡಾವಣೆ ಹಾಗೂ ಸುತ್ತಮುತ್ತ ಪ್ರದೇಶಗಳ ರಸ್ತೆಯಲ್ಲಿ ನೀರು ಧಾರಾಕಾರವಾಗಿ ಹರಿಯಿತು. ಈ ಭಾಗದಲ್ಲಿ ರಾಜಕಾಲುವೆ ಒತ್ತುವರಿಯಾಗಿರುವ ಆರೋಪವಿದ್ದು, ಅದೇ ರಾಜಕಾಲುವೆಯಲ್ಲಿ ಹರಿದು ಹೋಗಬೇಕಾದ ನೀರು ರಸ್ತೆಗೆ ಹರಿದು ಮನೆಗಳಿಗೆ ನುಗ್ಗಿತು.</p>.<p>ಉದ್ಯಾನ, ಮೈದಾನ, ಖಾಲಿ ನಿವೇಶನ ಸ್ಥಳದಲ್ಲಿ ಎರಡು ಅಡಿಯಷ್ಟು ನೀರು ನಿಂತುಕೊಂಡಿತ್ತು. ಬಡಾವಣೆಗಳ ಬಹುಪಾಲು ಮನೆಗಳಿಗೆ ನೀರು ನುಗ್ಗಿದ್ದರಿಂದ ನಿವಾಸಿಗಳು ತೊಂದರೆ ಅನುಭವಿಸಿದರು. ಕೆಲ ಮನೆಗಳಲ್ಲಿ ಪೀಠೋಪಕರಣ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳು ನೀರಿನಲ್ಲಿ ತೇಲಾಡುತ್ತಿದ್ದವು. ಮನೆಗೆ ನುಗ್ಗಿದ್ದ ನೀರು ಹೊರಹಾಕುವುದರಲ್ಲೇ ನಿವಾಸಿಗಳು ರಾತ್ರಿ ಕಳೆದರು.</p>.<p>‘ರಾಜಕಾಲುವೆ ಒತ್ತುವರಿ ಆಗಿದೆ. ನಾಗಸಂದ್ರ ಕಾಲೊನಿಗೆ ಹೊಂದಿಕೊಂಡಿರುವ ಜಾಗದಲ್ಲಿ ರಾಜಕಾಲುವೆ ಒಡೆದು, ನೀರು ಹೊರಗಡೆ ಹರಿಯುತ್ತಿದೆ. ಅದೇ ನೀರು ಮನೆಯೊಳಗೆ ನುಗ್ಗಿದ್ದರಿಂದ ಹಾನಿ ಆಗಿದೆ’ ಎಂದು ಸ್ಥಳೀಯ ನಿವಾಸಿಯೊಬ್ಬರು ಹೇಳಿದರು.</p>.<p>‘ಪ್ರತಿ ಬಾರಿ ಮಳೆ ಬಂದಾಗಲೂ ಇದೇ ಸಮಸ್ಯೆ ಆಗುತ್ತಿದೆ. ರಾಜಕಾಲುವೆ ಒತ್ತುವರಿ ತೆರವು ಮಾಡಿ, ಗುಣಮಟ್ಟದ ತಡೆಗೋಡೆ ನಿರ್ಮಿಸಬೇಕು’ ಎಂದೂ ಅವರು ಒತ್ತಾಯಿಸಿದರು.</p>.<p>ನಿವಾಸಿ ಗೋವಿಂದಪ್ಪ, ‘ಮನೆಯೊಳಗೆ ನಿಂತಿದ್ದ ನೀರನ್ನು ಮೋಟರ್ ಪಂಪ್ ಮೂಲಕ ಹೊರ ಹಾಕುತ್ತಿದ್ದೇವೆ. ನೀರಿನ ಜೊತೆಯಲ್ಲಿ ತ್ಯಾಜ್ಯವೂ ಮನೆಯೊಳಗೆ ಬಂದಿತ್ತು. ನೀರು ತೆರುವಾದ ಬಳಿಕವೂ ದುರ್ವಾಸನೆ ಬರುತ್ತಿದೆ’ ಎಂದರು.</p>.<p class="Subhead">ನಗರದ ಹಲವೆಡೆಯೂ ಮಳೆ: ಮೆಜೆಸ್ಟಿಕ್, ಗಾಂಧಿನಗರ, ಶೇಷಾದ್ರಿಪುರ, ಮಲ್ಲೇಶ್ವರ, ರಾಜಾಜಿನಗರ, ಬಸವೇಶ್ವರನಗರ, ವಿಜಯನಗರ, ದೀಪಾಂಜಲಿನಗರ, ನಾಯಂಡನಹಳ್ಳಿ, ರಾಜರಾಜೇಶ್ವರಿನಗರ, ಕೆಂಗೇರಿ, ಬನಶಂಕರಿ, ಕುಮಾರಸ್ವಾಮಿ ಲೇಔಟ್, ಗಿರಿನಗರ, ಜೆ.ಪಿ.ನಗರ, ಜಯನಗರ, ಬಸವನಗುಡಿ, ಹನುಮಂತನಗರ, ಶಂಕರಮಠ, ಚಾಮರಾಜಪೇಟೆ, ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಉತ್ತಮ ಮಳೆ ಆಯಿತು.</p>.<p>ಎಚ್ಎಸ್ಆರ್ ಲೇಔಟ್, ಮಡಿವಾಳ, ಕೋರಮಂಗಲ, ಅಶೋಕನಗರ, ವಿವೇಕನಗರ, ಶಿವಾಜಿನಗರ, ಎಂ.ಜಿ. ರಸ್ತೆ, ಸಂಪಂಗಿರಾಮನಗರ ಸುತ್ತಮುತ್ತ ಪ್ರದೇಶಗಳಲ್ಲೂ ಮಳೆಯಾಗಿದೆ.</p>.<p>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಜಿ.ಕೆ.ವಿ.ಕೆ ಬಳಿ ಮೇಲ್ಸೇತುವೆಯಲ್ಲಿ ಧಾರಾಕಾರವಾಗಿ ನೀರು ಹರಿಯಿತು. ಮಳೆ ನೀರು, ಮೇಲ್ಸೇತುವೆಯಿಂದ ಕೆಳಗಿನ ರಸ್ತೆ ಮೇಲೆ ಬಿದ್ದಿದ್ದರಿಂದ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು.</p>.<p>‘ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಉತ್ತಮ ಮಳೆ ಆಗುತ್ತಿದೆ. ಶನಿವಾ<br />ರವೂ ಜಿಟಿ ಜಿಟಿ ಮಳೆ ಆಗಿತ್ತು. ಆದರೆ, ಭಾನುವಾರ ಮಳೆ ಪ್ರಮಾಣ ಕಡಿಮೆ ಇತ್ತು. ನಗರದಲ್ಲಿ ಆಗಾಗ ಮಳೆ ಆಗುತ್ತಿದೆ. ರಸ್ತೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದ ಬಗ್ಗೆ ಹೆಚ್ಚು ದೂರುಗಳು ಬರುತ್ತಿವೆ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ನಗರದ ಟಿ. ದಾಸರಹಳ್ಳಿ, ಯಲಹಂಕ ಸುತ್ತಮುತ್ತ ಭಾನುವಾರ ಸಂಜೆಯಿಂದ ರಾತ್ರಿಯವರೆಗೂ ಜೋರು ಮಳೆಯಾಗಿದ್ದು, ನಾಗಸಂದ್ರ ಕಾಲೊನಿ ಬಳಿ ರಾಜಕಾಲುವೆ ಒಡೆದು ಹಲವು ಮನೆಗಳಿಗೆ ನೀರು ನುಗ್ಗಿತು.</p>.<p>ಹಲವು ದಿನಗಳಿಂದ ಸುರಿಯುತ್ತಿದ್ದ ಮಳೆ, ಭಾನುವಾರ ಬೆಳಿಗ್ಗೆ ಬಿಡುವು ನೀಡಿತ್ತು. ಬಹುತೇಕ ಪ್ರದೇಶಗಳಲ್ಲಿ ಬಿಸಿಲು ಕಾಣಿಸಿಕೊಂಡಿತ್ತು. ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಆವರಿಸಿ, ಮಳೆಯೂ ಸುರಿಯಿತು.</p>.<p>ಟಿ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ರುಕ್ಮಿಣಿ ಬಡಾವಣೆ, ಗುಂಡಪ್ಪ ಬಡಾವಣೆ, ಬೆಲ್ಮರ್ ಬಡಾವಣೆ, ರಾಯಲ್ ಎನ್ಕ್ಲೇವ್, ಬಿಟಿಎಸ್ ಬಡಾವಣೆ ಹಾಗೂ ಸುತ್ತಮುತ್ತ ಪ್ರದೇಶಗಳ ರಸ್ತೆಯಲ್ಲಿ ನೀರು ಧಾರಾಕಾರವಾಗಿ ಹರಿಯಿತು. ಈ ಭಾಗದಲ್ಲಿ ರಾಜಕಾಲುವೆ ಒತ್ತುವರಿಯಾಗಿರುವ ಆರೋಪವಿದ್ದು, ಅದೇ ರಾಜಕಾಲುವೆಯಲ್ಲಿ ಹರಿದು ಹೋಗಬೇಕಾದ ನೀರು ರಸ್ತೆಗೆ ಹರಿದು ಮನೆಗಳಿಗೆ ನುಗ್ಗಿತು.</p>.<p>ಉದ್ಯಾನ, ಮೈದಾನ, ಖಾಲಿ ನಿವೇಶನ ಸ್ಥಳದಲ್ಲಿ ಎರಡು ಅಡಿಯಷ್ಟು ನೀರು ನಿಂತುಕೊಂಡಿತ್ತು. ಬಡಾವಣೆಗಳ ಬಹುಪಾಲು ಮನೆಗಳಿಗೆ ನೀರು ನುಗ್ಗಿದ್ದರಿಂದ ನಿವಾಸಿಗಳು ತೊಂದರೆ ಅನುಭವಿಸಿದರು. ಕೆಲ ಮನೆಗಳಲ್ಲಿ ಪೀಠೋಪಕರಣ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳು ನೀರಿನಲ್ಲಿ ತೇಲಾಡುತ್ತಿದ್ದವು. ಮನೆಗೆ ನುಗ್ಗಿದ್ದ ನೀರು ಹೊರಹಾಕುವುದರಲ್ಲೇ ನಿವಾಸಿಗಳು ರಾತ್ರಿ ಕಳೆದರು.</p>.<p>‘ರಾಜಕಾಲುವೆ ಒತ್ತುವರಿ ಆಗಿದೆ. ನಾಗಸಂದ್ರ ಕಾಲೊನಿಗೆ ಹೊಂದಿಕೊಂಡಿರುವ ಜಾಗದಲ್ಲಿ ರಾಜಕಾಲುವೆ ಒಡೆದು, ನೀರು ಹೊರಗಡೆ ಹರಿಯುತ್ತಿದೆ. ಅದೇ ನೀರು ಮನೆಯೊಳಗೆ ನುಗ್ಗಿದ್ದರಿಂದ ಹಾನಿ ಆಗಿದೆ’ ಎಂದು ಸ್ಥಳೀಯ ನಿವಾಸಿಯೊಬ್ಬರು ಹೇಳಿದರು.</p>.<p>‘ಪ್ರತಿ ಬಾರಿ ಮಳೆ ಬಂದಾಗಲೂ ಇದೇ ಸಮಸ್ಯೆ ಆಗುತ್ತಿದೆ. ರಾಜಕಾಲುವೆ ಒತ್ತುವರಿ ತೆರವು ಮಾಡಿ, ಗುಣಮಟ್ಟದ ತಡೆಗೋಡೆ ನಿರ್ಮಿಸಬೇಕು’ ಎಂದೂ ಅವರು ಒತ್ತಾಯಿಸಿದರು.</p>.<p>ನಿವಾಸಿ ಗೋವಿಂದಪ್ಪ, ‘ಮನೆಯೊಳಗೆ ನಿಂತಿದ್ದ ನೀರನ್ನು ಮೋಟರ್ ಪಂಪ್ ಮೂಲಕ ಹೊರ ಹಾಕುತ್ತಿದ್ದೇವೆ. ನೀರಿನ ಜೊತೆಯಲ್ಲಿ ತ್ಯಾಜ್ಯವೂ ಮನೆಯೊಳಗೆ ಬಂದಿತ್ತು. ನೀರು ತೆರುವಾದ ಬಳಿಕವೂ ದುರ್ವಾಸನೆ ಬರುತ್ತಿದೆ’ ಎಂದರು.</p>.<p class="Subhead">ನಗರದ ಹಲವೆಡೆಯೂ ಮಳೆ: ಮೆಜೆಸ್ಟಿಕ್, ಗಾಂಧಿನಗರ, ಶೇಷಾದ್ರಿಪುರ, ಮಲ್ಲೇಶ್ವರ, ರಾಜಾಜಿನಗರ, ಬಸವೇಶ್ವರನಗರ, ವಿಜಯನಗರ, ದೀಪಾಂಜಲಿನಗರ, ನಾಯಂಡನಹಳ್ಳಿ, ರಾಜರಾಜೇಶ್ವರಿನಗರ, ಕೆಂಗೇರಿ, ಬನಶಂಕರಿ, ಕುಮಾರಸ್ವಾಮಿ ಲೇಔಟ್, ಗಿರಿನಗರ, ಜೆ.ಪಿ.ನಗರ, ಜಯನಗರ, ಬಸವನಗುಡಿ, ಹನುಮಂತನಗರ, ಶಂಕರಮಠ, ಚಾಮರಾಜಪೇಟೆ, ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಉತ್ತಮ ಮಳೆ ಆಯಿತು.</p>.<p>ಎಚ್ಎಸ್ಆರ್ ಲೇಔಟ್, ಮಡಿವಾಳ, ಕೋರಮಂಗಲ, ಅಶೋಕನಗರ, ವಿವೇಕನಗರ, ಶಿವಾಜಿನಗರ, ಎಂ.ಜಿ. ರಸ್ತೆ, ಸಂಪಂಗಿರಾಮನಗರ ಸುತ್ತಮುತ್ತ ಪ್ರದೇಶಗಳಲ್ಲೂ ಮಳೆಯಾಗಿದೆ.</p>.<p>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಜಿ.ಕೆ.ವಿ.ಕೆ ಬಳಿ ಮೇಲ್ಸೇತುವೆಯಲ್ಲಿ ಧಾರಾಕಾರವಾಗಿ ನೀರು ಹರಿಯಿತು. ಮಳೆ ನೀರು, ಮೇಲ್ಸೇತುವೆಯಿಂದ ಕೆಳಗಿನ ರಸ್ತೆ ಮೇಲೆ ಬಿದ್ದಿದ್ದರಿಂದ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಯಿತು.</p>.<p>‘ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಉತ್ತಮ ಮಳೆ ಆಗುತ್ತಿದೆ. ಶನಿವಾ<br />ರವೂ ಜಿಟಿ ಜಿಟಿ ಮಳೆ ಆಗಿತ್ತು. ಆದರೆ, ಭಾನುವಾರ ಮಳೆ ಪ್ರಮಾಣ ಕಡಿಮೆ ಇತ್ತು. ನಗರದಲ್ಲಿ ಆಗಾಗ ಮಳೆ ಆಗುತ್ತಿದೆ. ರಸ್ತೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದ ಬಗ್ಗೆ ಹೆಚ್ಚು ದೂರುಗಳು ಬರುತ್ತಿವೆ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>