<p><strong>ಬೆಂಗಳೂರು:</strong> ದುರ್ವರ್ತನೆ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲೆಯ ಸೆಷನ್ಸ್ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಎಂ.ಲತಾ ಕುಮಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಟಿ ಸಿವಿಲ್ ಕೋರ್ಟ್ ವಕೀಲರು ಒತ್ತಾಯಿಸಿದ್ದಾರೆ.</p>.<p>ಈ ಸಂಬಂಧ ಹಿರಿಯ ವಕೀಲ ಎಸ್.ಬಾಲನ್ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಯುವ ವಕೀಲರು ಬೆಂಗಳೂರು ನಗರ ಜಿಲ್ಲೆಯ ಪ್ರಧಾನ ನ್ಯಾಯಾಧೀಶ ಶಿವಶಂಕರ ಬಿ.ಅಮರಣ್ಣವರ ಅವರನ್ನು ಮಂಗಳವಾರ ಖುದ್ದು ಭೇಟಿ ಮಾಡಿ ಲತಾಕುಮಾರಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಲಿಖಿತ ಮನವಿ ಸಲ್ಲಿಸಿದರು.</p>.<p>ಮನವಿ ಸ್ವೀಕರಿಸಿದ ಅಮರಣ್ಣವರ, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.</p>.<p class="Subhead"><strong>ಆರೋಪಗಳೇನು?:</strong></p>.<p>* ಲತಾ ಕುಮಾರಿ ಕಲಾಪದ ವೇಳೆ ವಕೀಲರು, ಆರೋಪಿಗಳು ಮತ್ತು ಸಾಕ್ಷಿಗಳ ವಿರುದ್ಧ ಅತೀರೇಕದ ವರ್ತನೆ ಪ್ರದರ್ಶಿಸುತ್ತಾರೆ.</p>.<p>* ಎಲ್ಲರನ್ನೂ ಏಕವಚನದಲ್ಲಿ ನಿಂದಿಸುತ್ತಾರೆ. ವಕೀಲರಿಗೆ ಗೆಟ್ ಔಟ್ ಎನ್ನುತ್ತಾರೆ.</p>.<p>* ಅವರ ವರ್ತನೆಗೆ ಆಕ್ಷೇಪಿಸಿದರೆ, ಪರಿಷತ್ಗೆ ನಿಮ್ಮ ವಿರುದ್ಧ ದೂರು ನೀಡುತ್ತೇನೆ. ನಿಮ್ಮ ಬ್ಯಾಂಡ್ ತೆಗೆಸಿಬಿಡುತ್ತೇನೆ, ನ್ಯಾಯಾಂಗ ನಿಂದನೆ ಕೇಸು ಎದುರಿಸುವಂತೆ ಮಾಡುತ್ತೇನೆ ಎಂದೆಲ್ಲಾ ಹೆದರಿಸುತ್ತಾರೆ.</p>.<p>* ಇವರ ಕೋರ್ಟ್ ಹಾಲ್ನಲ್ಲಿ ಇತ್ತೀಚೆಗಷ್ಟೇ ವಿನೋದ್ ಕುಮಾರ್ ಎಂಬ 22 ವರ್ಷದ ಯುವಕ ಬ್ಲೇಡ್ನಿಂದ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಇದಕ್ಕೆ ಈ ನ್ಯಾಯಾಧೀಶೆಯ ದುರ್ವರ್ತನೆಯೇ ಕಾರಣ.</p>.<p>* ಸಾಕ್ಷಿ ನುಡಿಯಲು ಬಂದವರನ್ನು ನೀನಷ್ಟೇ ಅಲ್ಲ ನಿಮ್ಮ ಕುಟುಂಬದವರನ್ನೆಲ್ಲಾ ಜೈಲಿಗೆ ಕಳಿಸುತ್ತೇನೆ ಎಂದು ಬೆದರಿಕೆ ಒಡ್ಡುತ್ತಾರೆ.</p>.<p>* ಆರೋಪಿಗಳು ಹೈಕೋರ್ಟ್ನಿಂದ ಜಾಮೀನು ಪಡೆದು ಬಂದರೆ ಭದ್ರತಾ ಬಾಂಡ್ಗಳನ್ನು ತಿರಸ್ಕರಿಸುತ್ತಾರೆ.</p>.<p>* ಆರೋಪಿಗಳಿಗೆ ಸುಖಾ ಸುಮ್ಮನೆ ಕಠಿಣ ಶಿಕ್ಷೆ ವಿಧಿಸುತ್ತಾರೆ. ಪ್ರಶ್ನಿಸಿದರೆ, ಬೇಕಿದ್ದರೆ ಮೇಲ್ಮನವಿ ಸಲ್ಲಿಸಿಕೊಳ್ಳಿ ಎಂಬ ಉಡಾಫೆ ಉತ್ತರ ನೀಡುವ ಮೂಲಕ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ಗಳ ಆದೇಶಗಳಿಗೆ ಅಗೌರವ ತೋರುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದುರ್ವರ್ತನೆ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲೆಯ ಸೆಷನ್ಸ್ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಎಂ.ಲತಾ ಕುಮಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಟಿ ಸಿವಿಲ್ ಕೋರ್ಟ್ ವಕೀಲರು ಒತ್ತಾಯಿಸಿದ್ದಾರೆ.</p>.<p>ಈ ಸಂಬಂಧ ಹಿರಿಯ ವಕೀಲ ಎಸ್.ಬಾಲನ್ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಯುವ ವಕೀಲರು ಬೆಂಗಳೂರು ನಗರ ಜಿಲ್ಲೆಯ ಪ್ರಧಾನ ನ್ಯಾಯಾಧೀಶ ಶಿವಶಂಕರ ಬಿ.ಅಮರಣ್ಣವರ ಅವರನ್ನು ಮಂಗಳವಾರ ಖುದ್ದು ಭೇಟಿ ಮಾಡಿ ಲತಾಕುಮಾರಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಲಿಖಿತ ಮನವಿ ಸಲ್ಲಿಸಿದರು.</p>.<p>ಮನವಿ ಸ್ವೀಕರಿಸಿದ ಅಮರಣ್ಣವರ, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.</p>.<p class="Subhead"><strong>ಆರೋಪಗಳೇನು?:</strong></p>.<p>* ಲತಾ ಕುಮಾರಿ ಕಲಾಪದ ವೇಳೆ ವಕೀಲರು, ಆರೋಪಿಗಳು ಮತ್ತು ಸಾಕ್ಷಿಗಳ ವಿರುದ್ಧ ಅತೀರೇಕದ ವರ್ತನೆ ಪ್ರದರ್ಶಿಸುತ್ತಾರೆ.</p>.<p>* ಎಲ್ಲರನ್ನೂ ಏಕವಚನದಲ್ಲಿ ನಿಂದಿಸುತ್ತಾರೆ. ವಕೀಲರಿಗೆ ಗೆಟ್ ಔಟ್ ಎನ್ನುತ್ತಾರೆ.</p>.<p>* ಅವರ ವರ್ತನೆಗೆ ಆಕ್ಷೇಪಿಸಿದರೆ, ಪರಿಷತ್ಗೆ ನಿಮ್ಮ ವಿರುದ್ಧ ದೂರು ನೀಡುತ್ತೇನೆ. ನಿಮ್ಮ ಬ್ಯಾಂಡ್ ತೆಗೆಸಿಬಿಡುತ್ತೇನೆ, ನ್ಯಾಯಾಂಗ ನಿಂದನೆ ಕೇಸು ಎದುರಿಸುವಂತೆ ಮಾಡುತ್ತೇನೆ ಎಂದೆಲ್ಲಾ ಹೆದರಿಸುತ್ತಾರೆ.</p>.<p>* ಇವರ ಕೋರ್ಟ್ ಹಾಲ್ನಲ್ಲಿ ಇತ್ತೀಚೆಗಷ್ಟೇ ವಿನೋದ್ ಕುಮಾರ್ ಎಂಬ 22 ವರ್ಷದ ಯುವಕ ಬ್ಲೇಡ್ನಿಂದ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಇದಕ್ಕೆ ಈ ನ್ಯಾಯಾಧೀಶೆಯ ದುರ್ವರ್ತನೆಯೇ ಕಾರಣ.</p>.<p>* ಸಾಕ್ಷಿ ನುಡಿಯಲು ಬಂದವರನ್ನು ನೀನಷ್ಟೇ ಅಲ್ಲ ನಿಮ್ಮ ಕುಟುಂಬದವರನ್ನೆಲ್ಲಾ ಜೈಲಿಗೆ ಕಳಿಸುತ್ತೇನೆ ಎಂದು ಬೆದರಿಕೆ ಒಡ್ಡುತ್ತಾರೆ.</p>.<p>* ಆರೋಪಿಗಳು ಹೈಕೋರ್ಟ್ನಿಂದ ಜಾಮೀನು ಪಡೆದು ಬಂದರೆ ಭದ್ರತಾ ಬಾಂಡ್ಗಳನ್ನು ತಿರಸ್ಕರಿಸುತ್ತಾರೆ.</p>.<p>* ಆರೋಪಿಗಳಿಗೆ ಸುಖಾ ಸುಮ್ಮನೆ ಕಠಿಣ ಶಿಕ್ಷೆ ವಿಧಿಸುತ್ತಾರೆ. ಪ್ರಶ್ನಿಸಿದರೆ, ಬೇಕಿದ್ದರೆ ಮೇಲ್ಮನವಿ ಸಲ್ಲಿಸಿಕೊಳ್ಳಿ ಎಂಬ ಉಡಾಫೆ ಉತ್ತರ ನೀಡುವ ಮೂಲಕ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ಗಳ ಆದೇಶಗಳಿಗೆ ಅಗೌರವ ತೋರುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>