ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂಠೀರವ ಕ್ರೀಡಾಂಗಣದಲ್ಲಿ ನೂಕುನುಗ್ಗಲು: ಅಭಿಮಾನಿಗಳನ್ನು ಚದುರಿಸಲು ಲಾಠಿ ಪ್ರಹಾರ

Last Updated 29 ಅಕ್ಟೋಬರ್ 2021, 15:06 IST
ಅಕ್ಷರ ಗಾತ್ರ

ಬೆಂಗಳೂರು: ನಟ ಪುನೀತ್ ರಾಜ್‌ಕುಮಾರ್ ಅವರ ಪಾರ್ಥೀವ ಶರೀರದ ದರ್ಶನ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು.

ಮಲ್ಯ ಆಸ್ಪತ್ರೆ ಎದುರಿನ ದ್ವಾರದಿಂದ ಕ್ರೀಡಾಂಗಣ ಪ್ರವೇಶಿಸಲು ಅವಕಾಶ ಮಾಡಿಕೊಡಲಾಗಿತ್ತು. ಅಲ್ಲಿ ನೂಕು ನುಗ್ಗಲು ಉಂಟಾಗಿತ್ತು. ಅವರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

ಅನೇಕರು ಬ್ಯಾರಿಕೇಡ್‌ಗಳನ್ನು ಏರಿ ಕ್ರೀಡಾಂಗಣ ಪ್ರವೇಶಿಸಲು ಮುಂದಾದರು. ನೂಕು ನುಗ್ಗಲಿನಿಂದಾಗಿ ನೆಲಕ್ಕೆ ಬಿದ್ದು ಅಸ್ವಸ್ಥರಾದ ಕೆಲವರನ್ನು ಪೊಲೀಸರೇ ಕರೆತಂದು ಆರೈಕೆ ಮಾಡುತ್ತಿದ್ದ ದೃಶ್ಯ ಕಂಡುಬಂತು.

ಅಭಿಮಾನಿಗಳ ಕೂಗಾಟ, ಚೀರಾಟ ಮುಗಿಲುಮುಟ್ಟಿತ್ತು. ಮಹಿಳೆಯರೂ ನೂಕು ನುಗ್ಗಲಿನಲ್ಲಿ ಸಿಲುಕಿ ಹೈರಾಣಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT