<p><strong>ಬೆಂಗಳೂರು:</strong> ತಂತ್ರಜ್ಞಾನವನ್ನು ಬಳಸಿಕೊಂಡು ಪ್ರಾಯೋಗಿಕ ವಿಧಾನದ ಮೂಲಕ ಗಣಿತವನ್ನು ಸುಲಭವಾಗಿ ಕಲಿಯಲು ಅನುವು ಮಾಡಿಕೊಡುವ ‘ಧಾತು’ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.</p>.<p>ಬೆಂಗಳೂರಿನ ‘ಪ್ರಯೋಗ’ ಶಿಕ್ಷಣ ಸಂಶೋಧನಾ ಸಂಸ್ಥೆಯು 9–12ನೇ ತರಗತಿಯ ವಿದ್ಯಾರ್ಥಿಗಳಿಗೆ ಎನ್ಸಿಇಆರ್ಟಿ ಪಠ್ಯಕ್ರಮದ ಆಧಾರದಲ್ಲಿ ‘ಧಾತು’ ಕಾರ್ಯಕ್ರಮವನ್ನು ಅಭಿವೃದ್ಧಿ ಪಡಿಸಿದ್ದು, 2025–26ನೇ ಸಾಲಿನಲ್ಲಿ ಪ್ರಾಯೋಗಿಕವಾಗಿ ಜಾರಿಗೆ ಬರಲಿದೆ. 2027ರಲ್ಲಿ ಪೂರ್ಣ ಪ್ರಮಾಣದಲ್ಲಿ ಜಾರಿಯಾಗಲಿದೆ.</p>.<p>ಜೆಇಇಯಂಥ ರಚನಾತ್ಮಕ ಮೌಲ್ಯಮಾಪನಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬೆಂಬಲಿಸಲು ವಿನ್ಯಾಸಗೊಳಿಸಲಾದ ಧಾತು, ವಿದ್ಯಾರ್ಥಿಗಳಿಗೆ ಸರಿಯಾದ ಉತ್ತರ ನೀಡುವುದಕ್ಕೆ ಮಾರ್ಗದರ್ಶನ ಮಾಡಲಿದೆ. ಸಂದರ್ಭೋಚಿತ ಸುಳಿವುಗಳೊಂದಿಗೆ ಬಹು-ಆಯ್ಕೆಯ ಸ್ವರೂಪವನ್ನು ಬಳಸುತ್ತದೆ. ವಿದ್ಯಾರ್ಥಿಗಳು ತಪ್ಪುಗಳನ್ನು ಮಾಡುವ ಸಾಧ್ಯತೆಯಿರುವ ಪ್ರಮುಖ ಅಂಶಗಳನ್ನು ಇದು ಗುರುತಿಸುತ್ತದೆ. ಶಿಕ್ಷಕರಿಗೆ ಮೌಲ್ಯಮಾಪನವನ್ನೂ ಸುಲಭಗೊಳಿಸಲಿದೆ ಎಂದು ‘ಪ್ರಯೋಗ’ ತಿಳಿಸಿದೆ.</p>.<p>ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಅಭಯ್ ಕರಂಡಿಕರ್ ಮಾತನಾಡಿ, ‘ಪ್ರಯೋಗವು ಶಿಕ್ಷಣ ಸಂಶೋಧನೆಯಲ್ಲಿ ನಾವೀನ್ಯಕ್ಕೆ ಚಾಲನೆ ನೀಡುತ್ತಿದೆ. ದೇಶದಾದ್ಯಂತ ಸ್ಟೆಮ್ ಕಲಿಕೆಗೆ ಒಂದು ಮಾದರಿಯನ್ನು ಸೃಷ್ಟಿಸುತ್ತಿದೆ’ ಎಂದು ಹೇಳಿದರು.</p>.<p>‘ಒಂದು ಕಾಲದಲ್ಲಿ ಗಣಿತವು ಭಾರತದ ಶಕ್ತಿಯಾಗಿತ್ತು. ಈಗ ಪ್ರೌಢಶಾಲಾ ಮಟ್ಟದ ಶೇ 80ರಷ್ಟು ವಿದ್ಯಾರ್ಥಿಗಳು ಗಣಿತ ಅಂದರೆ ಆತಂಕಪಡುತ್ತಾರೆ. ತಂತ್ರಜ್ಞಾನವು ನಮ್ಮ ಭವಿಷ್ಯವನ್ನು ರೂಪಿಸುತ್ತಿರುವುದರಿಂದ, ಗಣಿತವು ಎಂದಿಗಿಂತಲೂ ಹೆಚ್ಚು ನಿರ್ಣಾಯಕವಾಗಿದೆ’ ಎಂದು ವಿವರಿಸಿದರು.</p>.<p>‘ಗಣಿತ ವಿಷಯದಲ್ಲಿ ಅನೇಕ ವಿದ್ಯಾರ್ಥಿಗಳು ಎದುರಿಸುತ್ತಿರುವ ಭಯ ಮತ್ತು ಆತಂಕವನ್ನು ನಿವಾರಿಸಲು ‘ಧಾತು’ವನ್ನು ಅಭಿವೃದ್ಧಿಪಡಿಸಲಾಗಿದೆ. ಶಿಕ್ಷಕರು ಪ್ರತಿ ವಿದ್ಯಾರ್ಥಿಗೂ ತಮ್ಮದೇ ಆದ ವೇಗದಲ್ಲಿ ಮಾರ್ಗದರ್ಶನ ಮಾಡಲು ಸಹಾಯ ಮಾಡುತ್ತದೆ’ ಎಂದು ‘ಪ್ರಯೋಗ’ದ ವ್ಯವಸ್ಥಾಪಕ ಟ್ರಸ್ಟಿ ವಲ್ಲೀಶ್ ಹೇರೂರ್ ಮಾಹಿತಿ ನೀಡಿದರು.</p>.<p>ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ (ಎಮೆರಿಟಸ್) ಪ್ರಾಧ್ಯಾಪಕ ಜೆಫ್ರಿ ಡಿ. ಉಲ್ಮನ್, ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಪ್ರಾಧ್ಯಾಪಕ ವೈ. ನರಹರಿ ಮತ್ತು ಐಐಇಎಸ್ಟಿ ಅಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ತಂತ್ರಜ್ಞಾನವನ್ನು ಬಳಸಿಕೊಂಡು ಪ್ರಾಯೋಗಿಕ ವಿಧಾನದ ಮೂಲಕ ಗಣಿತವನ್ನು ಸುಲಭವಾಗಿ ಕಲಿಯಲು ಅನುವು ಮಾಡಿಕೊಡುವ ‘ಧಾತು’ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.</p>.<p>ಬೆಂಗಳೂರಿನ ‘ಪ್ರಯೋಗ’ ಶಿಕ್ಷಣ ಸಂಶೋಧನಾ ಸಂಸ್ಥೆಯು 9–12ನೇ ತರಗತಿಯ ವಿದ್ಯಾರ್ಥಿಗಳಿಗೆ ಎನ್ಸಿಇಆರ್ಟಿ ಪಠ್ಯಕ್ರಮದ ಆಧಾರದಲ್ಲಿ ‘ಧಾತು’ ಕಾರ್ಯಕ್ರಮವನ್ನು ಅಭಿವೃದ್ಧಿ ಪಡಿಸಿದ್ದು, 2025–26ನೇ ಸಾಲಿನಲ್ಲಿ ಪ್ರಾಯೋಗಿಕವಾಗಿ ಜಾರಿಗೆ ಬರಲಿದೆ. 2027ರಲ್ಲಿ ಪೂರ್ಣ ಪ್ರಮಾಣದಲ್ಲಿ ಜಾರಿಯಾಗಲಿದೆ.</p>.<p>ಜೆಇಇಯಂಥ ರಚನಾತ್ಮಕ ಮೌಲ್ಯಮಾಪನಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬೆಂಬಲಿಸಲು ವಿನ್ಯಾಸಗೊಳಿಸಲಾದ ಧಾತು, ವಿದ್ಯಾರ್ಥಿಗಳಿಗೆ ಸರಿಯಾದ ಉತ್ತರ ನೀಡುವುದಕ್ಕೆ ಮಾರ್ಗದರ್ಶನ ಮಾಡಲಿದೆ. ಸಂದರ್ಭೋಚಿತ ಸುಳಿವುಗಳೊಂದಿಗೆ ಬಹು-ಆಯ್ಕೆಯ ಸ್ವರೂಪವನ್ನು ಬಳಸುತ್ತದೆ. ವಿದ್ಯಾರ್ಥಿಗಳು ತಪ್ಪುಗಳನ್ನು ಮಾಡುವ ಸಾಧ್ಯತೆಯಿರುವ ಪ್ರಮುಖ ಅಂಶಗಳನ್ನು ಇದು ಗುರುತಿಸುತ್ತದೆ. ಶಿಕ್ಷಕರಿಗೆ ಮೌಲ್ಯಮಾಪನವನ್ನೂ ಸುಲಭಗೊಳಿಸಲಿದೆ ಎಂದು ‘ಪ್ರಯೋಗ’ ತಿಳಿಸಿದೆ.</p>.<p>ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಅಭಯ್ ಕರಂಡಿಕರ್ ಮಾತನಾಡಿ, ‘ಪ್ರಯೋಗವು ಶಿಕ್ಷಣ ಸಂಶೋಧನೆಯಲ್ಲಿ ನಾವೀನ್ಯಕ್ಕೆ ಚಾಲನೆ ನೀಡುತ್ತಿದೆ. ದೇಶದಾದ್ಯಂತ ಸ್ಟೆಮ್ ಕಲಿಕೆಗೆ ಒಂದು ಮಾದರಿಯನ್ನು ಸೃಷ್ಟಿಸುತ್ತಿದೆ’ ಎಂದು ಹೇಳಿದರು.</p>.<p>‘ಒಂದು ಕಾಲದಲ್ಲಿ ಗಣಿತವು ಭಾರತದ ಶಕ್ತಿಯಾಗಿತ್ತು. ಈಗ ಪ್ರೌಢಶಾಲಾ ಮಟ್ಟದ ಶೇ 80ರಷ್ಟು ವಿದ್ಯಾರ್ಥಿಗಳು ಗಣಿತ ಅಂದರೆ ಆತಂಕಪಡುತ್ತಾರೆ. ತಂತ್ರಜ್ಞಾನವು ನಮ್ಮ ಭವಿಷ್ಯವನ್ನು ರೂಪಿಸುತ್ತಿರುವುದರಿಂದ, ಗಣಿತವು ಎಂದಿಗಿಂತಲೂ ಹೆಚ್ಚು ನಿರ್ಣಾಯಕವಾಗಿದೆ’ ಎಂದು ವಿವರಿಸಿದರು.</p>.<p>‘ಗಣಿತ ವಿಷಯದಲ್ಲಿ ಅನೇಕ ವಿದ್ಯಾರ್ಥಿಗಳು ಎದುರಿಸುತ್ತಿರುವ ಭಯ ಮತ್ತು ಆತಂಕವನ್ನು ನಿವಾರಿಸಲು ‘ಧಾತು’ವನ್ನು ಅಭಿವೃದ್ಧಿಪಡಿಸಲಾಗಿದೆ. ಶಿಕ್ಷಕರು ಪ್ರತಿ ವಿದ್ಯಾರ್ಥಿಗೂ ತಮ್ಮದೇ ಆದ ವೇಗದಲ್ಲಿ ಮಾರ್ಗದರ್ಶನ ಮಾಡಲು ಸಹಾಯ ಮಾಡುತ್ತದೆ’ ಎಂದು ‘ಪ್ರಯೋಗ’ದ ವ್ಯವಸ್ಥಾಪಕ ಟ್ರಸ್ಟಿ ವಲ್ಲೀಶ್ ಹೇರೂರ್ ಮಾಹಿತಿ ನೀಡಿದರು.</p>.<p>ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ (ಎಮೆರಿಟಸ್) ಪ್ರಾಧ್ಯಾಪಕ ಜೆಫ್ರಿ ಡಿ. ಉಲ್ಮನ್, ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಪ್ರಾಧ್ಯಾಪಕ ವೈ. ನರಹರಿ ಮತ್ತು ಐಐಇಎಸ್ಟಿ ಅಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>