ವಿಪರೀತ ದಟ್ಟಣೆ: ವಕೀಲರು ಪ್ರತಿಭಟನಾ ಮೆರವಣಿಗೆ ನಡೆಸಿದ್ದರಿಂದ ಕೆ.ಆರ್.ವೃತ್ತ ಹಾಗೂ ಸುತ್ತಮುತ್ತ ರಸ್ತೆಗಳಲ್ಲಿ ವಿಪರೀತ ಸಂಚಾರ ದಟ್ಟಣೆ ಉಂಟಾಯಿತು. ಕೆಂಪೇಗೌಡ ರಸ್ತೆ, ಕಾರ್ಪೋರೇಷನ್ ವೃತ್ತ, ನೃಪತುಂಗ ರಸ್ತೆ, ಶೇಷಾದ್ರಿ ರಸ್ತೆಗಳಲ್ಲಿ ವಾಹನಗಳು ಗಂಟೆಗಟ್ಟಲೇ ಸಾಲುಗಟ್ಟಿ ನಿಂತಿದ್ದವು. ಬಸ್ಗಳಿಂದ ಇಳಿದ ಪ್ರಯಾಣಿಕರು, ನಡೆದುಕೊಂಡು ಮುಂದಕ್ಕೆ ಸಾಗಿದರು.