<p><strong>ಬೆಂಗಳೂರು</strong>:ಇದೇ 19ರಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ವಕೀಲರ ಸುರಕ್ಷತಾ ಕಾಯ್ದೆಯ ಜಾರಿಗೆ ಸಂಬಂಧಿಸಿದಂತೆ ಮಸೂದೆಯನ್ನು ಮಂಡಿಸಿ ಅಂಗೀಕರಿಸದೇ ಹೋದಲ್ಲಿ ರಾಜ್ಯದಾದ್ಯಂತ ವಕೀಲರು ಉಗ್ರ ಹೋರಾಟ ನಡೆಸಲಿದ್ದಾರೆಎಂದು ಬೆಂಗಳೂರು ವಕೀಲರ ಸಂಘ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.</p>.<p>ರಾಜ್ಯದ ವಿವಿಧ ಭಾಗಗಳಲ್ಲಿ ವಕೀಲರ ಮೇಲೆ ಪೊಲೀಸರು ಹಾಗೂ ರೌಡಿಗಳಿಂದ ನಡೆಯುತ್ತಿರುವ ಹಲ್ಲೆಗಳನ್ನು ಖಂಡಿಸಿ ಬೆಂಗಳೂರು ವಕೀಲರ ಸಂಘವು ಶುಕ್ರವಾರ ಸಿಟಿ ಸಿವಿಲ್ ಕೋರ್ಟ್ ಹಾಲ್ ಆವರಣದಲ್ಲಿ ಮೌನ ಪ್ರತಿಭಟನೆ ನಡೆಸಿತು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, "ಪ್ರಸಕ್ತ ಅಧಿವೇಶನದಲ್ಲೇ ಮಸೂದೆ ಮಂಡಿಸಿ ವಕೀಲರ ಸುರಕ್ಷತಾ ಕಾಯ್ದೆ ಜಾರಿಗೆ ಸರ್ಕಾರ ಮುಂದಾಗಬೇಕು. ಈ ನಿಟ್ಟಿನಲ್ಲಿ ಶನಿವಾರ (ಡಿ.10) ರಾಜ್ಯ ವಕೀಲರ ಸಂಘದ ಎಲ್ಲಾ ಜಿಲ್ಲಾ ಘಟಕಗಳ ಪ್ರಮುಖರನ್ನು ಬೆಂಗಳೂರಿಗೆ ಕರೆಯಿಸಿಕೊಳ್ಳಲಾಗುವುದು. ರಾಜ್ಯ ವಕೀಲರ ಪರಿಷತ್ ಸಹಯೋಗದೊಂದಿಗೆ ಮಹತ್ವದ ಚರ್ಚೆ ನಡೆಸಿ ಈ ದಿಸೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಸೋಮವಾರದ ಒಳಗೆ (ಡಿ.12) ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಈ ಕುರಿತು ಮನವಿಯನ್ನೂ ಸಲ್ಲಿಸಲಾಗುವುದು. ಒಂದು ವೇಳೆ ಸರ್ಕಾರ ನಮ್ಮ ಮನವಿಗೆ ಕಿವಿಗೊಡದೇ ಹೋದರೆ ರಾಜ್ಯದಾದ್ಯಂತ ಉಗ್ರ ಹೋರಾಟಕ್ಕೆ ವಕೀಲರು ಸಜ್ಜಾಗಲಿದ್ದಾರೆ" ಎಂದು ಎಚ್ಚರಿಸಿದರು.</p>.<p>ಪ್ರಧಾನ ಕಾರ್ಯದರ್ಶಿ ಟಿ.ಜಿ.ರವಿ, ಖಜಾಂಚಿ ಎಂ.ಟಿ.ಹರೀಶ್ ಮಾತನಾಡಿ ಗೃಹ ಸಚಿವರು ಮತ್ತು ಯುವ ಪೊಲೀಸರ ಕಾರ್ಯ ವೈಖರಿಗೆ ಕಿಡಿ ಕಾರಿದರು. ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಪೊಲೀಸರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>:ಇದೇ 19ರಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ವಕೀಲರ ಸುರಕ್ಷತಾ ಕಾಯ್ದೆಯ ಜಾರಿಗೆ ಸಂಬಂಧಿಸಿದಂತೆ ಮಸೂದೆಯನ್ನು ಮಂಡಿಸಿ ಅಂಗೀಕರಿಸದೇ ಹೋದಲ್ಲಿ ರಾಜ್ಯದಾದ್ಯಂತ ವಕೀಲರು ಉಗ್ರ ಹೋರಾಟ ನಡೆಸಲಿದ್ದಾರೆಎಂದು ಬೆಂಗಳೂರು ವಕೀಲರ ಸಂಘ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.</p>.<p>ರಾಜ್ಯದ ವಿವಿಧ ಭಾಗಗಳಲ್ಲಿ ವಕೀಲರ ಮೇಲೆ ಪೊಲೀಸರು ಹಾಗೂ ರೌಡಿಗಳಿಂದ ನಡೆಯುತ್ತಿರುವ ಹಲ್ಲೆಗಳನ್ನು ಖಂಡಿಸಿ ಬೆಂಗಳೂರು ವಕೀಲರ ಸಂಘವು ಶುಕ್ರವಾರ ಸಿಟಿ ಸಿವಿಲ್ ಕೋರ್ಟ್ ಹಾಲ್ ಆವರಣದಲ್ಲಿ ಮೌನ ಪ್ರತಿಭಟನೆ ನಡೆಸಿತು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, "ಪ್ರಸಕ್ತ ಅಧಿವೇಶನದಲ್ಲೇ ಮಸೂದೆ ಮಂಡಿಸಿ ವಕೀಲರ ಸುರಕ್ಷತಾ ಕಾಯ್ದೆ ಜಾರಿಗೆ ಸರ್ಕಾರ ಮುಂದಾಗಬೇಕು. ಈ ನಿಟ್ಟಿನಲ್ಲಿ ಶನಿವಾರ (ಡಿ.10) ರಾಜ್ಯ ವಕೀಲರ ಸಂಘದ ಎಲ್ಲಾ ಜಿಲ್ಲಾ ಘಟಕಗಳ ಪ್ರಮುಖರನ್ನು ಬೆಂಗಳೂರಿಗೆ ಕರೆಯಿಸಿಕೊಳ್ಳಲಾಗುವುದು. ರಾಜ್ಯ ವಕೀಲರ ಪರಿಷತ್ ಸಹಯೋಗದೊಂದಿಗೆ ಮಹತ್ವದ ಚರ್ಚೆ ನಡೆಸಿ ಈ ದಿಸೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಸೋಮವಾರದ ಒಳಗೆ (ಡಿ.12) ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಈ ಕುರಿತು ಮನವಿಯನ್ನೂ ಸಲ್ಲಿಸಲಾಗುವುದು. ಒಂದು ವೇಳೆ ಸರ್ಕಾರ ನಮ್ಮ ಮನವಿಗೆ ಕಿವಿಗೊಡದೇ ಹೋದರೆ ರಾಜ್ಯದಾದ್ಯಂತ ಉಗ್ರ ಹೋರಾಟಕ್ಕೆ ವಕೀಲರು ಸಜ್ಜಾಗಲಿದ್ದಾರೆ" ಎಂದು ಎಚ್ಚರಿಸಿದರು.</p>.<p>ಪ್ರಧಾನ ಕಾರ್ಯದರ್ಶಿ ಟಿ.ಜಿ.ರವಿ, ಖಜಾಂಚಿ ಎಂ.ಟಿ.ಹರೀಶ್ ಮಾತನಾಡಿ ಗೃಹ ಸಚಿವರು ಮತ್ತು ಯುವ ಪೊಲೀಸರ ಕಾರ್ಯ ವೈಖರಿಗೆ ಕಿಡಿ ಕಾರಿದರು. ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಪೊಲೀಸರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>