<p><strong>ಬೆಂಗಳೂರು</strong>: ದಕ್ಷಿಣ ತಾಲ್ಲೂಕಿನ ಕೆಂಗೇರಿ ಹೋಬಳಿ ಅಗರ ಮತ್ತು ಬಿ.ಎಂ. ಕಾವಲು ಪ್ರದೇಶದಲ್ಲಿ ಅನಧಿಕೃತವಾಗಿ 14.38 ಎಕರೆಯಲ್ಲಿ ಅಭಿವೃದ್ಧಿಪಡಿಸಿದ್ದ ಬಡಾವಣೆಯನ್ನು ಜಿಲ್ಲಾಡಳಿತ ಬುಧವಾರ ತೆರವುಗೊಳಿಸಿದೆ.</p>.<p>ಎರಡೂ ಗ್ರಾಮ ವ್ಯಾಪ್ತಿಯ ವಿವಿಧ ಸರ್ವೆ ನಂಬರ್ಗಳಲ್ಲಿ ಇರುವ 14 ಎಕರೆ 38 ಗುಂಟೆ ವಿಸ್ತೀರ್ಣದ ಕೃಷಿ ಜಮೀನಿನಲ್ಲಿ ಯಾವುದೇ ಪ್ರಾಧಿಕಾರದಿಂದ ಅನುಮತಿ ಪಡೆಯದೇ ಬಡಾವಣೆ ನಿರ್ಮಿಸುತ್ತಿದ್ದ ಕಾರಣ ತೆರವುಗೊಳಿಲಾಗಿದೆ ಎಂದು ತಹಶೀಲ್ದಾರ್ ಅದೇಶದಲ್ಲಿ ತಿಳಿಸಿದ್ದಾರೆ.</p>.<p>‘ರೂಪಾ ಅಶ್ವಥ್, ಶಶಿಚಂದ್ರಶೇಖರಯ್ಯ, ಮಂಜು ಅಶ್ವತ್ಥ, ಛಾಯಾ ಅಶ್ವತ್ಥ ಎಂಬುವರ ಹೆಸರಿನಲ್ಲಿ ಕೃಷಿ ಜಮೀನಿದ್ದು, ಅದನ್ನು ಕೆಂಚಪ್ಪಗೌಡ ಎಂಬ ವ್ಯಕ್ತಿಗೆ ಮಾರಾಟ ಕರಾರು (ಜಿಪಿಎ) ಮಾಡಿಕೊಡಲಾಗಿದೆ. ಈ ಜಾಗದಲ್ಲಿ ಯಾವುದೇ ಪ್ರಾಧಿಕಾರದ ಅನುಮತಿ ಪಡೆಯದೇ ವಸತಿ ಬಡಾವಣೆ ನಿರ್ಮಿಸಿ ನಿವೇಶನ ಮಾರಾಟ ಮಾಡುಲಾಗುತ್ತಿತ್ತು. ಈ ಸಂಬಂಧ ನೀಡಿದ ನೋಟಿಸ್ಗೆ ಉತ್ತರವನ್ನೂ ನೀಡದ ಕಾರಣ ಜಿಲ್ಲಾಧಿಕಾರಿ ವಿ. ಶಿವಮೂರ್ತಿ ಅವರ ನಿರ್ದೇಶನದಂತೆ ತೆರವುಗೊಳಿಸಲಾಯಿತು’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಉಪವಿಭಾಗಾಧಿಕಾರಿ ಡಾ. ಎಂ.ಜಿ. ಶಿವಣ್ಣ, ತಹಶೀಲ್ದಾರ್ ಶಿವಪ್ಪ ಲಮಾಣಿ ಮತ್ತು ಇತರ ಅಧಿಕಾರಿಗಳ ತಂಡ ತೆರವು ಕಾರ್ಯಾಚರಣೆ ನಡೆಸಿತು. ನಿರ್ಮಾಣವಾಗಿದ್ದ ರಸ್ತೆ ಮತ್ತು ಚರಂಡಿಯನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಯಿತು.</p>.<p>‘ನಿವೇಶನ ಖರೀದಿಸಿರುವ ಅಮಾಯಕರು ಸ್ಥಳೀಯ ಠಾಣೆ ಅಥವಾ ಸಕ್ಷಮ ಪ್ರಾಧಿಕಾರ ಸಂಪರ್ಕಿಸಿ ದೂರು ನೀಡಬಹುದು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದಕ್ಷಿಣ ತಾಲ್ಲೂಕಿನ ಕೆಂಗೇರಿ ಹೋಬಳಿ ಅಗರ ಮತ್ತು ಬಿ.ಎಂ. ಕಾವಲು ಪ್ರದೇಶದಲ್ಲಿ ಅನಧಿಕೃತವಾಗಿ 14.38 ಎಕರೆಯಲ್ಲಿ ಅಭಿವೃದ್ಧಿಪಡಿಸಿದ್ದ ಬಡಾವಣೆಯನ್ನು ಜಿಲ್ಲಾಡಳಿತ ಬುಧವಾರ ತೆರವುಗೊಳಿಸಿದೆ.</p>.<p>ಎರಡೂ ಗ್ರಾಮ ವ್ಯಾಪ್ತಿಯ ವಿವಿಧ ಸರ್ವೆ ನಂಬರ್ಗಳಲ್ಲಿ ಇರುವ 14 ಎಕರೆ 38 ಗುಂಟೆ ವಿಸ್ತೀರ್ಣದ ಕೃಷಿ ಜಮೀನಿನಲ್ಲಿ ಯಾವುದೇ ಪ್ರಾಧಿಕಾರದಿಂದ ಅನುಮತಿ ಪಡೆಯದೇ ಬಡಾವಣೆ ನಿರ್ಮಿಸುತ್ತಿದ್ದ ಕಾರಣ ತೆರವುಗೊಳಿಲಾಗಿದೆ ಎಂದು ತಹಶೀಲ್ದಾರ್ ಅದೇಶದಲ್ಲಿ ತಿಳಿಸಿದ್ದಾರೆ.</p>.<p>‘ರೂಪಾ ಅಶ್ವಥ್, ಶಶಿಚಂದ್ರಶೇಖರಯ್ಯ, ಮಂಜು ಅಶ್ವತ್ಥ, ಛಾಯಾ ಅಶ್ವತ್ಥ ಎಂಬುವರ ಹೆಸರಿನಲ್ಲಿ ಕೃಷಿ ಜಮೀನಿದ್ದು, ಅದನ್ನು ಕೆಂಚಪ್ಪಗೌಡ ಎಂಬ ವ್ಯಕ್ತಿಗೆ ಮಾರಾಟ ಕರಾರು (ಜಿಪಿಎ) ಮಾಡಿಕೊಡಲಾಗಿದೆ. ಈ ಜಾಗದಲ್ಲಿ ಯಾವುದೇ ಪ್ರಾಧಿಕಾರದ ಅನುಮತಿ ಪಡೆಯದೇ ವಸತಿ ಬಡಾವಣೆ ನಿರ್ಮಿಸಿ ನಿವೇಶನ ಮಾರಾಟ ಮಾಡುಲಾಗುತ್ತಿತ್ತು. ಈ ಸಂಬಂಧ ನೀಡಿದ ನೋಟಿಸ್ಗೆ ಉತ್ತರವನ್ನೂ ನೀಡದ ಕಾರಣ ಜಿಲ್ಲಾಧಿಕಾರಿ ವಿ. ಶಿವಮೂರ್ತಿ ಅವರ ನಿರ್ದೇಶನದಂತೆ ತೆರವುಗೊಳಿಸಲಾಯಿತು’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಉಪವಿಭಾಗಾಧಿಕಾರಿ ಡಾ. ಎಂ.ಜಿ. ಶಿವಣ್ಣ, ತಹಶೀಲ್ದಾರ್ ಶಿವಪ್ಪ ಲಮಾಣಿ ಮತ್ತು ಇತರ ಅಧಿಕಾರಿಗಳ ತಂಡ ತೆರವು ಕಾರ್ಯಾಚರಣೆ ನಡೆಸಿತು. ನಿರ್ಮಾಣವಾಗಿದ್ದ ರಸ್ತೆ ಮತ್ತು ಚರಂಡಿಯನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಯಿತು.</p>.<p>‘ನಿವೇಶನ ಖರೀದಿಸಿರುವ ಅಮಾಯಕರು ಸ್ಥಳೀಯ ಠಾಣೆ ಅಥವಾ ಸಕ್ಷಮ ಪ್ರಾಧಿಕಾರ ಸಂಪರ್ಕಿಸಿ ದೂರು ನೀಡಬಹುದು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>