ಬೆಂಗಳೂರು: ಕಾಂಗ್ರೆಸ್ ನಾಯಕತ್ವದ ಕುರಿತು ರಾಷ್ಟ್ರಮಟ್ಟದಲ್ಲಿ ಅಪಸ್ವರ ಎದ್ದಿರುವ ಬೆನ್ನಲ್ಲೇ, ನಾಯಕತ್ವವನ್ನು
ಟೀಕಿಸುತ್ತಿರುವ ಮುಖಂಡರ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದು, ‘ಈ ನಾಯಕರು ಪಕ್ಷವನ್ನು ಆಂತರಿಕವಾಗಿ ದುರ್ಬಲಗೊಳಿಸುತ್ತಿದ್ದಾರೆ’ ಎಂದು ಕಿಡಿ ಕಾರಿದ್ದಾರೆ.