<p><strong>ಬೆಂಗಳೂರು:</strong> ಕಾಂಗ್ರೆಸ್ ನಾಯಕತ್ವದ ಕುರಿತು ರಾಷ್ಟ್ರಮಟ್ಟದಲ್ಲಿ ಅಪಸ್ವರ ಎದ್ದಿರುವ ಬೆನ್ನಲ್ಲೇ, ನಾಯಕತ್ವವನ್ನು<br />ಟೀಕಿಸುತ್ತಿರುವ ಮುಖಂಡರ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದು, ‘ಈ ನಾಯಕರು ಪಕ್ಷವನ್ನು ಆಂತರಿಕವಾಗಿ ದುರ್ಬಲಗೊಳಿಸುತ್ತಿದ್ದಾರೆ’ ಎಂದು ಕಿಡಿ ಕಾರಿದ್ದಾರೆ.</p>.<p><strong>ಇದನ್ನು ಓದಿ:</strong><a href="https://www.prajavani.net/op-ed/editorial/editors-note-prajavani-android-app-and-pv-ios-app-launched-780126.html" target="_blank">ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ</a></p>.<p>‘ಪಕ್ಷದ ಕೆಲವು ನಾಯಕರು ಪಕ್ಷ ಮತ್ತು ನಮ್ಮ ನಾಯಕರ ವಿರುದ್ಧವೇ ಮಾತನಾಡಿರುವುದು ನೋವುಂಟು ಮಾಡಿದೆ’ ಕೆಪಿಸಿಸಿ ಕಚೇರಿಯಲ್ಲಿ ನಡೆದ ಇಂದಿರಾಗಾಂಧಿಯವರ ಜನ್ಮದಿನದ ಕಾರ್ಯಕ್ರಮದಲ್ಲಿ ಹೇಳಿದರು.</p>.<p><strong>ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವ ಲಿಂಕ್:</strong><a href="https://play.google.com/store/apps/details?id=com.tpml.pv" target="_blank">ಆಂಡ್ರಾಯ್ಡ್ ಆ್ಯಪ್</a>|<a href="https://apps.apple.com/in/app/prajavani-kannada-news-app/id1535764933" target="_blank">ಐಒಎಸ್ ಆ್ಯಪ್</a></p>.<p>‘ಒಂದು ಕಡೆ ಆರ್ಎಸ್ಎಸ್ ಮತ್ತು ಬಿಜೆಪಿ ನಮ್ಮ ಬೆನ್ನ ಹಿಂದಿವೆ. ಇನ್ನೊಂದು ಕಡೆ ಆಂತರಿಕ ಭಿನ್ನಾಭಿಪ್ರಾಯ ಮತ್ತು ಕಿತ್ತಾಟ ನಡೆದಿದೆ. ಪಕ್ಷವನ್ನು ಆಂತರಿಕವಾಗಿ ದುರ್ಬಲಗೊಳಿಸುತ್ತಾ ಹೋದರೆ ನಾವು ಮುನ್ನಡೆಯಲು ಸಾಧ್ಯವಿಲ್ಲ. ಪಕ್ಷದ ಸಿದ್ಧಾಂತ ನಾಶವಾದರೆ, ನಾವೆಲ್ಲ ನಾಶವಾಗುತ್ತೇವೆ’ ಎಂದು ಎಚ್ಚರಿಸಿದರು.</p>.<p>ಬಿಹಾರ ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನದ ಕಾರಣ ನಾಯಕತ್ವದ ಸಾಮರ್ಥ್ಯದ ಬಗ್ಗೆ ಪ್ರಶ್ನೆಗಳು ಎದ್ದಿರುವ ಬೆನ್ನಲ್ಲೇ ಖರ್ಗೆ ಅವರು ‘ಗಾಂಧಿ ಪರಿವಾರ’ವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.</p>.<p>‘ಗಾಂಧಿ ಪರಿವಾರ ಮತ್ತು ನಾಯಕತ್ವವನ್ನು ಟೀಕಿಸುತ್ತಿರುವವರು ತಾವಿರುವ ಪ್ರದೇಶದಲ್ಲಿ ಒಬ್ಬ ಕಾರ್ಪೋರೇಟರ್ ಅನ್ನು ಗೆಲ್ಲಿಸುವ ಶಕ್ತಿ ಹೊಂದಿಲ್ಲ. ಪಕ್ಷ ಸುಸ್ಥಿತಿಯಲ್ಲಿ ಇದ್ದಾಗ ಎಲ್ಲರೂ ಹೊಗಳುತ್ತಾರೆ. ಸೋತಾಗ ಅದಕ್ಕೆ ರಾಹುಲ್ ಗಾಂಧಿ, ಸೋನಿಯಾಗಾಂಧಿ ಕಾರಣರೆಂದು ಗೂಬೆ ಕೂರಿಸುತ್ತಾರೆ’ ಎಂದರು.</p>.<p>‘ದೇಶದಲ್ಲಿ ಕಮ್ಯುನಿಸ್ಟರು ಎಲ್ಲ ಕಡೆ ಸಕ್ರಿಯರಾಗುತ್ತಿದ್ದಾರೆ. ಆದರೆ ನಾವು ಜನರ ಮನವೊಲಿಸುವಲ್ಲಿ ವಿಫಲರಾಗಿ<br />ದ್ದೇವೆ. ಜನ ಮಾತ್ರವಲ್ಲ; ಪಕ್ಷದ ಕಾರ್ಯಕರ್ತರನ್ನು ಮನವೊಲಿಸುವಲ್ಲೂ ವಿಫಲರಾಗಿದ್ದೇವೆ. ಖರ್ಗೆ ಅವರ ನೋವು ಅರ್ಥವಾಗುತ್ತದೆ. ಅವರ ಅಭಿಪ್ರಾಯಗಳಿಗೆ ಸಹಮತವಿದೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಾಂಗ್ರೆಸ್ ನಾಯಕತ್ವದ ಕುರಿತು ರಾಷ್ಟ್ರಮಟ್ಟದಲ್ಲಿ ಅಪಸ್ವರ ಎದ್ದಿರುವ ಬೆನ್ನಲ್ಲೇ, ನಾಯಕತ್ವವನ್ನು<br />ಟೀಕಿಸುತ್ತಿರುವ ಮುಖಂಡರ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದು, ‘ಈ ನಾಯಕರು ಪಕ್ಷವನ್ನು ಆಂತರಿಕವಾಗಿ ದುರ್ಬಲಗೊಳಿಸುತ್ತಿದ್ದಾರೆ’ ಎಂದು ಕಿಡಿ ಕಾರಿದ್ದಾರೆ.</p>.<p><strong>ಇದನ್ನು ಓದಿ:</strong><a href="https://www.prajavani.net/op-ed/editorial/editors-note-prajavani-android-app-and-pv-ios-app-launched-780126.html" target="_blank">ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ</a></p>.<p>‘ಪಕ್ಷದ ಕೆಲವು ನಾಯಕರು ಪಕ್ಷ ಮತ್ತು ನಮ್ಮ ನಾಯಕರ ವಿರುದ್ಧವೇ ಮಾತನಾಡಿರುವುದು ನೋವುಂಟು ಮಾಡಿದೆ’ ಕೆಪಿಸಿಸಿ ಕಚೇರಿಯಲ್ಲಿ ನಡೆದ ಇಂದಿರಾಗಾಂಧಿಯವರ ಜನ್ಮದಿನದ ಕಾರ್ಯಕ್ರಮದಲ್ಲಿ ಹೇಳಿದರು.</p>.<p><strong>ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವ ಲಿಂಕ್:</strong><a href="https://play.google.com/store/apps/details?id=com.tpml.pv" target="_blank">ಆಂಡ್ರಾಯ್ಡ್ ಆ್ಯಪ್</a>|<a href="https://apps.apple.com/in/app/prajavani-kannada-news-app/id1535764933" target="_blank">ಐಒಎಸ್ ಆ್ಯಪ್</a></p>.<p>‘ಒಂದು ಕಡೆ ಆರ್ಎಸ್ಎಸ್ ಮತ್ತು ಬಿಜೆಪಿ ನಮ್ಮ ಬೆನ್ನ ಹಿಂದಿವೆ. ಇನ್ನೊಂದು ಕಡೆ ಆಂತರಿಕ ಭಿನ್ನಾಭಿಪ್ರಾಯ ಮತ್ತು ಕಿತ್ತಾಟ ನಡೆದಿದೆ. ಪಕ್ಷವನ್ನು ಆಂತರಿಕವಾಗಿ ದುರ್ಬಲಗೊಳಿಸುತ್ತಾ ಹೋದರೆ ನಾವು ಮುನ್ನಡೆಯಲು ಸಾಧ್ಯವಿಲ್ಲ. ಪಕ್ಷದ ಸಿದ್ಧಾಂತ ನಾಶವಾದರೆ, ನಾವೆಲ್ಲ ನಾಶವಾಗುತ್ತೇವೆ’ ಎಂದು ಎಚ್ಚರಿಸಿದರು.</p>.<p>ಬಿಹಾರ ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನದ ಕಾರಣ ನಾಯಕತ್ವದ ಸಾಮರ್ಥ್ಯದ ಬಗ್ಗೆ ಪ್ರಶ್ನೆಗಳು ಎದ್ದಿರುವ ಬೆನ್ನಲ್ಲೇ ಖರ್ಗೆ ಅವರು ‘ಗಾಂಧಿ ಪರಿವಾರ’ವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.</p>.<p>‘ಗಾಂಧಿ ಪರಿವಾರ ಮತ್ತು ನಾಯಕತ್ವವನ್ನು ಟೀಕಿಸುತ್ತಿರುವವರು ತಾವಿರುವ ಪ್ರದೇಶದಲ್ಲಿ ಒಬ್ಬ ಕಾರ್ಪೋರೇಟರ್ ಅನ್ನು ಗೆಲ್ಲಿಸುವ ಶಕ್ತಿ ಹೊಂದಿಲ್ಲ. ಪಕ್ಷ ಸುಸ್ಥಿತಿಯಲ್ಲಿ ಇದ್ದಾಗ ಎಲ್ಲರೂ ಹೊಗಳುತ್ತಾರೆ. ಸೋತಾಗ ಅದಕ್ಕೆ ರಾಹುಲ್ ಗಾಂಧಿ, ಸೋನಿಯಾಗಾಂಧಿ ಕಾರಣರೆಂದು ಗೂಬೆ ಕೂರಿಸುತ್ತಾರೆ’ ಎಂದರು.</p>.<p>‘ದೇಶದಲ್ಲಿ ಕಮ್ಯುನಿಸ್ಟರು ಎಲ್ಲ ಕಡೆ ಸಕ್ರಿಯರಾಗುತ್ತಿದ್ದಾರೆ. ಆದರೆ ನಾವು ಜನರ ಮನವೊಲಿಸುವಲ್ಲಿ ವಿಫಲರಾಗಿ<br />ದ್ದೇವೆ. ಜನ ಮಾತ್ರವಲ್ಲ; ಪಕ್ಷದ ಕಾರ್ಯಕರ್ತರನ್ನು ಮನವೊಲಿಸುವಲ್ಲೂ ವಿಫಲರಾಗಿದ್ದೇವೆ. ಖರ್ಗೆ ಅವರ ನೋವು ಅರ್ಥವಾಗುತ್ತದೆ. ಅವರ ಅಭಿಪ್ರಾಯಗಳಿಗೆ ಸಹಮತವಿದೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>