‘ಇದೇ 12ರಂದು ಬೆಂಗಳೂರಿನ ಗಾಂಧಿಭವನದಲ್ಲಿ ಸಂಜೆ 5.30ಕ್ಕೆ ನಡೆಯಲಿರುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಅವರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದು, ಶಾಸಕ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ‘ಬಸವಶ್ರೀ’ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಇಸ್ರೊ ಮಾಜಿ ಅಧ್ಯಕ್ಷ ಎ.ಎಸ್. ಕಿರಣ್ ಕುಮಾರ್ ಅವರು ‘ಬಸವಜ್ಯೋತಿ’ ಸಂಚಿಕೆ ಹಾಗೂ ‘ವಚನ ಸಾಹಿತ್ಯಶ್ರೀ’ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ರತ್ನಕಲಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದು ತಿಳಿಸಿದರು.